Puneeth Rajkumar: ಈ ವಿಚಾರದಲ್ಲಿ ಇಂದಿಗೂ ರೋಲ್ ಮಾಡಲ್ ಆದ ನಟ ಪುನೀತ್
ಸ್ಯಾಂಡಲ್ವುಡ್ ಪವರ್ ಸ್ಟಾರ್ ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ ಕೆಲವು ವರ್ಷಗಳು ಕಳೆದಿವೆ. ಇವರ ಸಾವು ಎಲ್ಲರಿಗೂ ಶಾಕ್ ನೀಡಿದ್ದು, ಇಂದಿಗೂ ಮರೆಯುವಂತದ್ದಲ್ಲ. ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ರಾಜ್ ಕುಟುಂಬದ ನಡೆಯು ಇಂದು ಅನೇಕರಿಗೆ ಮಾದರಿಯಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಟ ಪುನೀತ್ ರಾಜ್ಕುಮಾರ್ ಅವರು ನಿಧನರಾದ ನಂತರ ನೇತ್ರದಾನ ಮಾಡುವವರ ಸಂಖ್ಯೆ ಕೂಡ ದಿಢೀರನೆ ಏರಿಕೆ ಕಂಡಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ನಾರಾಯಣ ನೇತ್ರಾಲಯವು ಪುನೀತ್ ಅವರು ನಿಧನರಾದಾಗ ಅವರ ನೇತ್ರದಾನ ಪ್ರಕ್ರಿಯೆಯಲ್ಲಿ ಮಹತ್ವದ ಪಾತ್ರ ವಹಿಸಿತ್ತು. ಅಲ್ಲದೆ ಈ ನೇತ್ರಾಲಯವು ಡಾ.ರಾಜ್ಕುಮಾರ್ ಅವರ ಹೆಸರಿನಲ್ಲಿ ಕಣ್ಣಿನ ಬ್ಯಾಂಕ್ ಕೂಡ ನಡೆಸುತ್ತಿದೆ. ಅಂಕಿಅಂಶಗಳ ಪ್ರಕಾರ ನಟ ಪುನೀತ್ ರಾಜ್ಕುಮಾರ್ ಅವರು ನಿಧನರಾದ ನಂತರ ನೇತ್ರದಾನಕ್ಕೆ ಹೆಚ್ಚು ಮಂದಿ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ.

2021ರಲ್ಲಿ ಪುನೀತ್ ಅವರು ಅಕಾಲಿಕ ನಿಧನ ಹೊಂದಿದ್ದರು. ಬಳಿಕ ರಾಜ್ ಕುಟುಂಬವು ಪುನೀತ್ ಅವರ ನೇತ್ರದಾನದ ಮೂಲಕ ಮಾದರಿಯಾಗಿತ್ತು. ಇದನ್ನೇ ಫಾಲೋ ಮಾಡಿರುವ ಅನೇಕರು ನೇತ್ರದಾನದ ಪ್ರತಿಜ್ಞೆಯೂ ಹೆಚ್ಚಾಗಿ ಮಾಡುತ್ತಿದ್ದಾರಂತೆ. ದಶಕಗಳಿಂದಲೂ ಈ ಆಸ್ಪತ್ರೆಯು ಕಣ್ಣಿನ ಬ್ಯಾಂಕ್ ನಡೆಸುತ್ತಿದೆ.
ಇದು ಅಂದಾಜು 30 ವರ್ಷಗಳಲ್ಲಿ 75,000ದಷ್ಟು ನೇತ್ರದಾನದ ಪ್ರತಿಜ್ಞೆಗಳನ್ನು ಹೊಂದಿತ್ತು. ಆದರೆ, ಪುನೀತ್ ರಾಜ್ಕುಮಾರ್ ಅವರು ನಿಧನರಾದ ಬಳಿಕ ಕೇವಲ ನಾಲ್ಕೇ ವರ್ಷಗಳಲ್ಲಿ ಸುಮಾರು 1.3 ಲಕ್ಷ ಮಂದಿ ನೇತ್ರದಾನ ಪ್ರತಿಜ್ಞೆಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪುನೀತ್ ಅವರ ನಿಧನದ ನಂತರ ಈ ಕಣ್ಣಿನ ಬ್ಯಾಂಕ್ ಸುಮಾರು 3,989 ಕಣ್ಣುಗಳನ್ನು ಕೂಡ ಸಂಗ್ರಹಿಸಿದ್ದು, ಇದರಲ್ಲೂ ಗಣನೀಯ ಏರಿಕೆ ಕಂಡಿದೆ.

ಈ ಹಿಂದೆ ಪುನೀತ್ ರಾಜ್ಕುಮಾರ್ ಅವರ ತಂದೆ ಡಾ.ರಾಜ್ಕುಮಾರ್ ಅವರು ಕೂಡ ನೇತ್ರದಾನ ಮಾಡಿದ್ದರು. ಅದೇ ಹಾದಿಯಲ್ಲಿ ಪುನೀತ್ ಅವರು ಕೂಡ ನಡೆದಿದ್ದರು. ಪುನೀತ್ ರಾಜ್ಕುಮಾರ್ ಅವರ ನಿಧನದ ನಂತರವೂ ನೇತ್ರದಾನ ಮಾಡಿದ್ದರು. ಅದರಂತೆ ಪುನೀತ್ ಅವರಿಂದ ಇಬ್ಬರ ಬಾಳಲ್ಲಿ ಬೆಳಕು ಮೂಡಿದೆ. ಪುನೀತ್ ರಾಜ್ಕುಮಾರ್ ಅವರ ಕಣ್ಣುಗಳನ್ನು ಇಬ್ಬರು ಅಂಧರಿಗೆ ಅಳವಡಿಸಲಾಗಿತ್ತು.
ಆಗ ಇದೇ ನಾರಾಯಣ ನೇತ್ರಾಲಯದಲ್ಲಿ ಇಬ್ಬರು ಅಂಧರಿಗೆ ಪುನೀತ್ ರಾಜ್ಕುಮಾರ್ ಅವರ ಕಣ್ಣುಗಳನ್ನು ಜೋಡಿಸಲಾಗಿತ್ತು. ಈ ಶಸ್ತ್ರಚಿಕಿತ್ಸೆ ಕೂಡ ಯಶಸ್ವಿಯಾಗಿ ಇಬ್ಬರಿಗೆ ದೃಷ್ಟಿ ಭಾಗ್ಯ ಕೂಡ ಸಿಕ್ಕಿತ್ತು. ಬಳಿಕ ಪುನೀತ್ ರಾಜ್ಕುಮಾರ್ ಹಾದಿಯಲ್ಲೇ ಅವರ ಅಭಿಮಾನಿಗಳು ಸೇರಿ ಹಲವರು ಹೆಜ್ಜೆ ಇಟ್ಟಿದ್ದರು. ಸ್ವಯಂಪ್ರೇರಿತರಾಗಿ ನೇತ್ರದಾನಕ್ಕೆ ಒಲವು ತೋರಿಸಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ವರ್ಷಗಳಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗತೊಡಗಿದೆ.
ಪುನೀತ್ ರಾಜ್ಕುಮಾರ್ ಅವರ ಪ್ರೇರಣೆಯಿಂದ ಆಗಲೇ ಚನ್ನರಾಯಪಟ್ಟಣದ 165 ಮಂದಿ ನೇತ್ರದಾನ ಸಂಕಲ್ಪ ಮಾಡಿದ್ದರು. ರಾಜಕಾರಣಿಗಳು ಸೇರಿದಂತೆ 165 ಮಂದಿ ನೇತ್ರದಾನ ಮಾಡಲು ಸಹಿ ಹಾಕಿದ್ದರು. ಸದ್ಯ ರಾಜ್ಯಾದ್ಯಂತ ಪುನೀತ್ ಅವರ ಪ್ರೇರಣೆಯಿಂದ ಹಲವರು ನೇತ್ರದಾನಕ್ಕೆ ಮುಂದಾಗಿದ್ದು, ಅಪ್ಪು ಇಂದಿಗೂ ರೋಲ್ ಮಾಡಲ್ ಆಗಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications