Yograj Bhat: ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು; ಕಾರಣವೇನು
ಚಂದನವನಕ್ಕೆ ಯಾಕೋ ಸಮಯವೇ ಸರಿಯಿಲ್ಲ ಅನಿಸುತ್ತಿದೆ. ಏನೇ ಯಜ್ಞ ಯಾಗ ಮಾಡಿದರೂ ಒಂದಿಲ್ಲೊಂದು ಕಹಿ ಘಟನೆಗಳು ನಡೆಯುತ್ತಿವೆ. ದರ್ಶನ್ ಪ್ರಕರಣದಲ್ಲಿ ಚಿತ್ರರಂಗದ ಮೇಲಾಗಿರುವ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ, ಮುಂಗಾರುಮಳೆ, ಗಾಳಿಪಟ ಸೇರಿದಂತೆ ಹಲವು ಹಿಟ್ ಸಿನಿಮಾ ಕೊಟ್ಟಿರುವ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಕೂಡ ಇದೀಗ ಎಫ್ಐಆರ್ ದಾಖಲಾಗಿದೆ.
ಯೋಗರಾಜ್ ಭಟ್ ಅವರ 'ಮನದ ಕಡಲು' ಸಿನಿಮಾ ಚಿತ್ರೀಕರಣದ ವೇಳೆ ದುರ್ಘಟನೆ ನಡೆದುಹೋಗಿದೆ. ಸಿನಿಮಾಗೆ ಲೈಟ್ ಮ್ಯಾನ್ ಕೆಲಸ ಮಾಡುತ್ತಿದ್ದವರೊಬ್ಬರು 30 ಅಡಿ ಮೇಲಿನಿಂದ ಬಿದ್ದು ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಮತ್ತು ಚಿತ್ರತಂಡದ ಹಲವರ ಮೇಲೆ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ನೆಲಮಂಗಲದ ಬಳಿ ಇರುವ ಅಡಕಮಾರನಹಳ್ಳಿ ಬಳಿ ಈ ಘಟನೆ ನಡೆದಿದೆ. ಚಿತ್ರೀಕರಣಕ್ಕೆ ಲೈಟಿಂಗ್ಸ್ ವ್ಯವಸ್ಥೆ ಮಾಡುತ್ತಿದ್ದ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸದ ಪರಿಣಾಮ ಈ ದುರ್ಘಟನೆ ನಡೆದಿದೆ. ಮನದ ಕಡಲು ಸಿನಿಮಾದ ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ನಿರ್ದೇಶಕ ಯೋಗರಾಜ್ ಭಟ್, ಮ್ಯಾನೇಜರ್ ಸುರೇಶ್ ಸೇರಿದಂತೆ ಹಲವರ ಮೇಲೆ ದೂರು ದಾಖಲಾಗಿದ್ದು, ಚಿತ್ರತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಮಂಗಳವಾರ ನಡೆದಿರುವ ಘಟನೆ
ಮನದ ಕಡಲು ಸಿನಿಮಾದ ಚಿತ್ರೀಕರಣ ಡಕಮಾರನಹಳ್ಳಿಯ ವಿ.ಆರ್.ಎಲ್. ಗೋಡೌನ್ನಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿತ್ತು. ಮಂಗಳವಾರ ಸಂಜೆ ಲೈಟ್ ಮ್ಯಾನ್ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರ್, 30 ಅಡಿ ಎತ್ತರದಲ್ಲಿ ಕಟ್ಟಿದ್ದ ಲೈಟ್ ಬಿಚ್ಚುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಮೋಹನ್ ಕೆಳಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿತ್ತು, ತಕ್ಷಣವೇ ಅವರನ್ನು ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಸುರಕ್ಷತಾ ಸಾಧನಗಳನ್ನು ನೀಡದೆ ಕೆಲಸ ಮಾಡಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Pizza 4P's ಬೆಂಗಳೂರಲ್ಲಿ ಶಾಂತಿಗಾಗಿ ಪಿಜ್ಜಾ ಎಂದಾಯ್ತು: ಜಪಾನ್ ಪಿಜ್ಜಾ ಸಂಸ್ಥೆ ಹೇಳಿದ್ದೇನು - ಕನ್ನಡಿಗರು ಏನಂದ್ರು -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications