ಅಶ್ಲೀಲ ವಿಡಿಯೋ ಇದೆ ಎಂದು ಆನಂದ್ ಗುರೂಜಿಗೆ ಬ್ಲ್ಯಾಕ್ಮೇಲ್, ದಿವ್ಯಾ ವಸಂತ್ ವಿರುದ್ಧ ಎಫ್ಐಆರ್
"ಇಡೀ ರಾಜ್ಯವೇ ಖುಷಿ ಪಡುವ ಸುದ್ದಿ" ಎಂದು ಟ್ರೋಲ್ ಆಗಿದ್ದ ನಿರೂಪಕಿ ದಿವ್ಯಾ ವಸಂತ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ ಅವರಿಗೆ ದಿವ್ಯಾ ಮತ್ತು ತಂಡದವರು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಆನಂದ್ ಗುರೂಜಿ ಅವರು ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ದಿವ್ಯಾ ವಸಂತ್ ಯಾವ ವಿಚಾರವಾಗಿ ಬ್ಲ್ಯಾಕ್ಮೇಲ್ ಮಾಡಿದ್ದಳು ಎನ್ನುವ ವಿವರ ಇಲ್ಲಿದೆ.
ಪತ್ರಕರ್ತೆ ಹಾಗೂ ನಿರೂಪಕಿ ಎಂದು ಹೇಳಿಕೊಂಡಿರುವ ದಿವ್ಯಾ ವಸಂತ್ ಹಾಗೂ ಯುಟ್ಯೂಬ್ ಚಾನಲ್ನ ಕೃಷ್ಣಮೂರ್ತಿ ವಿರುದ್ಧ ಜ್ಯೋತಿಷಿ ಆನಂದ್ ಗುರೂಜಿಗೆ ಬ್ಲ್ಯಾಕ್ಮೇಲ್ ಮಾಡಿರುವ ಹಾಗೂ ಕೊಲೆ ಬೆದರಿಕೆ ಹಾಕಿರುವ ಆರೋಪ ಮಾಡಲಾಗಿದೆ. ಈ ಸಂಬಂಧ ಗುರೂಜಿ ಚಿಕ್ಕಜಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಮ್ಮ ಬಳಿ ಅಶ್ಲೀಲ ವಿಡಿಯೋಗಳಿದ್ದು, ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದರು. ನಾನು ಹಣ ಕೊಡಲು ಒಪ್ಪದೇ ಇದ್ದಾಗ ಕೊಲೆ ಬೆದರಿಕೆಯೂ ಹಾಕಿದ್ದರು ಎಂದು ಗುರೂಜಿ ಆರೋಪಿಸಿದ್ದಾರೆ. ಈ ಘಟನೆಯಾದ ಕೆಲವು ದಿನಗಳ ನಂತರ ಕೃಷ್ಣಮೂರ್ತಿ ಆಶ್ರಮಕ್ಕೆ ಬಂದು ವಿಡಿಯೋ ರೆಕಾರ್ಟ್ ಮಾಡಿ, ತನ್ನ ಯುಟ್ಯೂಬ್ ಹಾಗೂ ಚಾನಲ್ನಲ್ಲಿ ಪ್ರಸಾರ ಮಾಡಿ ಮಾನಸಿಕ ಹಿಂಸೆ ನೀಡಿದ್ದ. ವಿಡಿಯೊ ಪ್ರಸಾರ ಮಾಡಬಾರದು ಎಂದು ಕೋರ್ಟ್ನಿಂದ ತಡೆಯಾಜ್ಞೆ ತಂದ ನಂತರವೂ ಆತನ ಚಾನಲ್ನಲ್ಲಿ ಅಶ್ಲೀಲ ಪದ ಬಳಸಿ ವಿಡಿಯೊ ಪ್ರಸಾರ ಮಾಡಿದ್ದರು ಎಂದು ಗುರೂಜಿ ದೂರಿನಲ್ಲಿ ತಿಳಿಸಿದ್ದಾರೆ.
ಇವರು ಮೂರನೇ ವ್ಯಕ್ತಿಯಿಂದ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದರು. ಕೋರ್ಟ್ ಮತ್ತೆ ತಡೆಯಾಜ್ಞೆ ಕೊಟ್ಟಿತ್ತು. ಆದರೂ ಕೃಷ್ಣಮೂರ್ತಿ ಮತ್ತೊಂದು ವಿಡಿಯೋ ಮಾಡಿ ಯುಟ್ಯೂಬ್ನಲ್ಲಿ ಹಾಕಿದ್ದ. ಹಾಗಾಗಿ ಕೃಷ್ಣಮೂರ್ತಿ, ದಿವ್ಯಾ ವಸಂತ್ ವಿರುದ್ಧ ಕ್ರಮ ಕೈಗೊಳ್ಳವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಸಾದಹಳ್ಳಿ ಗೇಟ್ ಬಳಿ ನಾನು ಎಂಟು ವರ್ಷಗಳಿಂದ ವಾಸವಿದ್ದೇನೆ. ನಾನು ಸಾರ್ವಜನಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದು, ಜ್ಯೋತಿಷ್ಯ, ವಾಸ್ತುಶಿಲ್ಪದ ಕುರಿತು ಪುಸ್ತಕಗಳನ್ನು ಬರೆದಿದ್ದೇನೆ. ಕನ್ನಡದ ಖಾಸಗಿ ಚಾನಲ್ನಲ್ಲಿ ಜ್ಯೋತಿಷ್ಯ ಕಾರ್ಯಕ್ರಮದಲ್ಲೂ ನಾನು ಅತಿಥಿಯಾಗಿ ಪಾಲ್ಗೊಳ್ಳುತ್ತಿರುವೆ. ಕಳೆದ ಆಗಸ್ಟ್ ಕಾರ್ಯಕ್ರಮ ಮುಗಿಸಿ ಆಶ್ರಮಕ್ಕೆ ಬರುತ್ತಿದ್ದಾಗ ಅಪರಿಚಿತರು ನನ್ನ ಕಾರು ಅಡ್ಡಗಟ್ಟಿ ಏಕವಚನದಲ್ಲಿ ನಿಂದಿಸಿ ದೌರ್ಜನ್ಯ ಎಸಗಿದ್ದರು ಎಂದೂ ದೂರಿನಲ್ಲಿ ವಿವರಿಸಿದ್ದಾರೆ.
ಗುರೂಜಿ ನೀಡಿರುವ ದೂರು ಆಧರಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಕೃಷ್ಣಮೂರ್ತಿ (ಎ1) ಹಾಗೂ ದಿವ್ಯಾ ವಸಂತ್ (ಎ2) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ. ಈ ಹಿಂದೆಯೂ ದಿವ್ಯಾ ವಸಂತ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದು ಕೇಸ್ ದಾಖಲಾಗಿದ್ದವು. ಹನಿಟ್ರ್ಯಾಪ್ ಕೇಸ್ನಲ್ಲಿ ಅರೆಸ್ಟ್ ಕೂಡ ಆಗಿದ್ದರು.
ಇಂದಿರಾ ನಗರದ ಬ್ಯೂಟಿ ಪಾರ್ಲರ್ನಲ್ಲಿ ಸ್ಟಿಂಗ್ ಆಪರೇಷನ್ ನಡೆಸಿ ಮಾಲೀಕರಿಂದ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದರು. ಈ ಸಂಬಂಧ ಪಾರ್ಲರ್ ಮಾಲೀಕರು ನೀಡಿದ್ದ ದೂರಿನ ಮೇರೆಗೆ ಹನಿಟ್ರ್ಯಾಪ್ ಆರೋಪದಡಿ ದಿವ್ಯಾ ವಸಂತ್ ಮೇಲೆ ಕೇಸ್ ದಾಖಲಾಗಿ ಬಳಿಕ ಪೊಲೀಸರು ಕೇರಳದಲ್ಲಿ ಅರೆಸ್ಟ್ ಕೂಡ ಮಾಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications