Amruthadhare serial: ಗೌತಮ್-ಭೂಮಿಕಾ ಮನೆಯಲ್ಲಿ ಮಗನಿಗೆ ನಾಮಕರಣ ಶಾಸ್ತ್ರ: ಇಟ್ಟ ಹೆಸರೇನು ಗೊತ್ತಾ?
ಅಮೃತಧಾರೆ' ಧಾರಾವಾಹಿಯಲ್ಲಿ ದಿನಕ್ಕೊಂದು ಘಟನೆಗಳು ನಡೆಯುತ್ತಿವೆ. ಗೌತಮ್ ಎಂಬ ಉದ್ಯಮಿ ತನ್ನಿಗಿಂತ ಹತ್ತು ವರ್ಷ ಚಿಕ್ಕವಯಸ್ಸಿನ ಭೂಮಿಕಾ ಎಂಬ ಮಧ್ಯಮ ವರ್ಗದ ಶಾಲಾ ಶಿಕ್ಷಕಿಯನ್ನ ವಿವಾಹವಾಗುತ್ತಾನೆ. ಈ ಮದುವೆ ಪ್ರಾರಂಭದಲ್ಲಿ ಸುಲಭವಾಗಿರದೆ, ಇಬ್ಬರೂ ತಮ್ಮದೇ ಆದ ಕಾರಣಗಳಿಂದ ಈ ಸಂಬಂಧವನ್ನು ಒಪ್ಪಿಕೊಳ್ಳುತ್ತಾರೆ. ಸಮಯ ಕಳೆದಂತೆ ಅವರ ನಡುವೆ ನಿಜವಾದ ಸ್ನೇಹ, ಗೌರವ ಮತ್ತು ಪ್ರೀತಿ ಬೆಳೆಯುತ್ತದೆ.
ಮೊದಲಿನಿಂದಲೂ ಗೌತಮ್ ಕುಟುಂಬದ ಸದಸ್ಯರು ಆಸ್ತಿ ವಿಚಾರವಾಗಿ ಹಲವು ತಂತ್ರಗಾರಿಕೆಯನ್ನ ನಡೆಸಿರುತ್ತಾರೆ. ಈ ಹಿಂದೆ ಗೌತಮ್ ಮೇಲೆ ರೌಡಿಗಳು ದಾಲಿ ಮಾಡಿದ ಸಂದರ್ಭದಲ್ಲಿ ಮನೆಯವರಿಗೆ ಆಸ್ತಿಯನ್ನ ಭಾಗ ಮಾಡಿ ಹೆಚ್ಚು ಆಸ್ತಿಯನ್ನ ಭೂಮಿಕಾ ಹೆಸರಿಗೆ ಗೌತಮ್ ಬರೆದಿದ್ದರು. ಹೆಚ್ಚಿನ ಆಸ್ತಿ ಸಿಗಲಿಲ್ಲ ಎಂದು ಶಕುಂತಲಾ ಹಾಗೂ ಜೈದೇವ್ ಭೂಮಿಕಾ ಹಾಗೂ ಮಗುವನ್ನ ಕೊಲ್ಲಲು ಸಂಚು ಹಾಕಿದ್ರು. ಇದೀಗ ಎಲ್ಲಾ ಸವಾಲು ಹಾಗೂ ಕಷ್ಟಗಳನ್ನ ಎದುರಿ ಭೂಮಿಕಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಆದರೆ, ಕುತಂತ್ರಿಗಳು ಹೆಣ್ಣು ಮಗುವನ್ನ ಕಿಡ್ನಾಪ್ ಮಾಡಿದ್ದು, ಇದೀಗ ಗೌತಮ್ ಮನೆಯಲ್ಲಿ ನಾಮಕರಣ ಸಂಭ್ರಮ ಶಾಸ್ತ್ರ ಜೋರಾಗಿದೆ.

ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ದಿವಾನ್ ಹಾಗೂ ಭೂಮಿಕಾ ದಂಪತಿಗೆ ಮಗು ಜನಿಸಿದ್ದು, ಇದರಿಂದಾಗಿ ಇಡೀ ಕುಟುಂಬದಲ್ಲಿ ಖುಷಿಯ ವಾತಾವರಣ ಮೂಡಿದೆ. ಇದೀಗ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಮಗುವಿಗೆ ಏನು ಹೆಸರು ಇಡಬೇಕು ಎಂಬ ವಿಚಾರವನ್ನು ಇಷ್ಟು ದಿನ ಗುಟ್ಟಾಗಿಯೇ ಇಡಲಾಗಿತ್ತು.ಆದರೆ, ಇದೀಗ ರಿವೀಲ್ ಮಾಡಲಾಗಿದೆ. ಸಿಂಪಲ್ ಆಗಿ ನಾಮಕರಣ ಶಾಸ್ತ್ರ ನಡೆಸಲಾಗಿದೆ.
ಗೌತಮ್ ಮತ್ತು ಭೂಮಿಕಾ ದಂಪತಿಗಳು ತಮ್ಮ ಮಗನಿಗೆ ನಾಮಕರಣ ಶಾಸ್ತ್ರ ನಡೆದಿದೆ. ಭೂಮಿಕಾ ಹಾಗೂ ಗೌತಮ್ ಮಗನಿಗೆ ಯಾವ ಹೆಸರಿಡಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸಿದ್ದರು. ಹಳೆಯ ಸಂಪ್ರದಾಯದಲ್ಲಿ ತಾತನ ಹೆಸರನ್ನು ಮೊಮ್ಮಕ್ಕಳಿಗೆ ಇಡಲಾಗುತ್ತದೆ. ಗೌತಮ್ ತಂದೆಯ ಹೆಸರು ರಘುವೀರ್ ದೀವಾನ್. ಇಲ್ಲೂ ಸಹ ಗೌತಮ್ ಅವರ ತಂದೆ ರಘುವೀರ್ ಎಂಬ ಹೆಸರಿಡಲು ಯೋಚಿಸಲಾಗಿತ್ತು. ಆದರೆ, ಮನೆಯವರು ಆ ಹೆಸರು ಹಳೆಯ ಹೆಸರು ಎಂದು ತಿರಸ್ಕರಿಸಲಾಯಿತು
ಮಗನ ನಾಮಕರಣ ಶಾಸ್ತ್ರ ಎಂದು ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಭೂಮಿಕಾ ಮಗನ ನಾಮಕರಣ ಶಾಸ್ತ್ರ ಎಂದು ಖುಷಿಯಲ್ಲಿದ್ದಾರೆ. ಒಂದು ಕಡೆ ಮಗುವಿಗೆ ನಾಮಕರಣ ಶಾಸ್ತ್ರ ನಡೆಯುತ್ತಿದ್ದರೆ, ಮತ್ತೊಂದು ಕಡೆ ಗೌತಮ್ ಗೆ ಮಗಳು ಇಲ್ಲ ಎಂಬ ಬೇಸರ ಮೂಡಿದೆ. ಈ ಸಂದರ್ಭದಲ್ಲಿ ಮಗಳು ನಮ್ಮ ಜೊತೆಯಲ್ಲಿದ್ದರೇ ಇನ್ನಷ್ಟು ಅದ್ದೂರಿಯಾಗಿ ನಾಮಕರಣ ಶಾಸ್ತ್ರ ಮಾಡಬಹುದಿತ್ತು ಎನ್ನುವ ಚಿಂತೆ ಗೌತಮ್ಗೆ ಇದೆ. ಮಗನಿಗೆ ಯಾವ ಹೆಸರಿಡಬೇಕು ಎಂಬುದು ಗೌತಮ್ ಹಾಗೂ ಭೂಮಿಕಾಗೆ ಬಿಡಲಾಗಿತ್ತು. ಹೀಗಾಗಿ ಇಬ್ಬರು ಚರ್ಚೆ ಮಾಡಿ ಒಂದು ಹೆಸರು ನಿರ್ಧರಿಸೋದಾಗಿ ಹೇಳಿದರು.
ನಾಮಕರಣ ಶಾಸ್ತ್ರದಲ್ಲಿ ಗೌತಮ್ ಹಾಗೂ ಭೂಮಿಕಾ ಸೇರಿ ಒಂದು ಹೆಸರನ್ನು ಆಯ್ಕೆ ಮಾಡಿದರು. ಆ ಹೆಸರೇ ಆಕಾಶ್. ಈ ಹೆಸರು ಕೇಳಿ ಮನೆಯವರೆಲ್ಲರೂ ಖುಷಿ ಪಟ್ಟರು. ಅಳಿಯ ಗೌತಮ್ ಹೆಸರು ಸೆಲೆಕ್ಟ್ ಮಾಡಿರುವುದು ಖುಷಿಯಾಗಿದೆ ಎಂದು ಭೂಮಿಕಾ ತಾಯಿ ಹೇಳಿದರು. ಮಗನ ನಾಮಕರಣ ಶಾಸ್ತ್ರದಲ್ಲೂ ಗೌತಮ್ ಗೆ ನೋವು ಕಾಡುತ್ತಿತ್ತು. ಮಗನ ನಾಮಕರಣ ಶಾಸ್ತ್ರದ ಜೊತೆಗೆ ಮಗಳ ನಾಮಕರಣವು ಆಗುತ್ತಿತ್ತು ಎಂದು ಗೌತಮ್ ಹಾಗೂ ಗೌತಮ್ ಸ್ನೇಹಿತ ಆನಂದ್ ಬೇಸರ ವ್ಯಕ್ತಪಡಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications