ಗಿಲ್ಲಿ ಮೇಲೆ ಸಿನಿಮಾ ಪ್ರಚಾರಕ್ಕೆ ಬಾರದ ಆರೋಪ; ವೈರಲ್ ಆಯ್ತು ಪ್ರಮೋಷನ್ ಮಾಡಿರುವ ಹಳೆಯ ವಿಡಿಯೋ
ಬಿಗ್ಬಾಸ್ ಕನ್ನಡ ಸೀಸನ್-12ರ ವಿನ್ನರ್ ಗಿಲ್ಲಿ ವಿರುದ್ಧ ಸಿನಿಮಾ ಪ್ರಚಾರಕ್ಕೆ ಸಹಕರಿಸುತ್ತಿಲ್ಲ ಎಂಬ ಆರೋಪದಡಿ ಕರ್ನಾಟಕ ಫಿಲ್ಮ್ ಚೇಂಬರ್ಗೆ ದೂರು ಸಲ್ಲಿಕೆಯಾಗಿತ್ತು. ಇದರ ಬೆನ್ನಲ್ಲೇ ಗಿಲ್ಲಿ "ಸರ್ಕಾರಿ ಶಾಲೆ H8" ಸಿನಿಮಾವನ್ನು ಪ್ರಚಾರ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಿಗ್ಬಾಸ್ಗೆ ಹೋಗುವ ಮುನ್ನ ಗಿಲ್ಲಿ ನಟಿಸಿದ್ದ "ಸರ್ಕಾರಿ ಶಾಲೆ H8" ಸಿನಿಮಾ ಶುಕ್ರವಾರ ಬಿಡುಗಡೆಯಾಗಿದೆ. ಆದರೆ ಚಿತ್ರದ ನಿರ್ಮಾಪಕರು, ಗಿಲ್ಲಿ ಸಿನಿಮಾದ ಪ್ರಚಾರ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ, ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ, ಕನಿಷ್ಠವಾಗಿ ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಕುರಿತು ಒಂದು ಪೋಸ್ಟ್ ಕೂಡ ಹಂಚಿಕೊಂಡಿಲ್ಲ ಎಂದು ಆರೋಪಿಸಿ ಕರ್ನಾಟಕ ಫಿಲ್ಮ್ ಚೇಂಬರ್ಗೆ ಅಧಿಕೃತ ದೂರು ನೀಡಿದ್ದರು.

ನಿರ್ಮಾಪಕರ ಹೇಳಿಕೆಯಂತೆ "ಸರ್ಕಾರಿ ಶಾಲೆ H8" ಸಿನಿಮಾದಲ್ಲಿ ಗಿಲ್ಲಿಗೆ ಪ್ರಮುಖ ಪಾತ್ರ ನೀಡಲಾಗಿದ್ದು, ಅವರು ಕೇಳಿದ ಸಂಪೂರ್ಣ ಸಂಭಾವನೆಯನ್ನು ಬಿಗ್ಬಾಸ್ಗೆ ಹೋಗುವ ಮುನ್ನವೇ ಪಾವತಿಸಲಾಗಿದೆ. ಆದರೂ ಸಿನಿಮಾ ಬಿಡುಗಡೆಯಾದ ನಂತರ ಪ್ರಚಾರಕ್ಕೆ ಅವರು ಸಹಕರಿಸುತ್ತಿಲ್ಲ ಎಂಬುದು ನಮ್ಮ ನೋವು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ವೈರಲ್ ಆದ ಗಿಲ್ಲಿ ವಿಡಿಯೋ
ಈ ಆರೋಪಗಳ ನಡುವೆ ಗಿಲ್ಲಿ ಸಿನಿಮಾ ಪ್ರಚಾರ ಮಾಡುತ್ತಿರುವ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ವಿಡಿಯೋದಲ್ಲಿ ಗಿಲ್ಲಿ, "ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಗಿಲ್ಲಿ ನಟ. ನಮ್ಮ ಗುಣ ಅವರ ನಿರ್ದೇಶನದಲ್ಲಿ 'ಸರ್ಕಾರಿ ಶಾಲೆ H8' ಸಿನಿಮಾ ಬರುತ್ತಿದೆ. ಅದರಲ್ಲಿ ನಾನೂ ಒಂದು ಪಾತ್ರ ಮಾಡಿದ್ದೀನಿ. ದಯವಿಟ್ಟು ಎಲ್ಲರೂ ಸಿನಿಮಾ ನೋಡಿ, ಹರಸಿ, ಹಾರೈಸಿ" ಎಂದು ಹೇಳಿದ್ದಾರೆ.
ನಮ್ಮ "ಗಿಲ್ಲಿ ನಟ" ಸಣ್ಣ ಪಾತ್ರದಲ್ಲಿ ಅಭಿನಯಿಸಿರುವ "ಸರ್ಕಾರಿಶಾಲೆ H8" ಚಿತ್ರಕ್ಕೆ ಜನವರಿ 29ರಂದು ಹರಸಿ ಶುಭಾಶಯಗಳು ತಿಳಿಸಿದ್ದಾರೆ ಆದರೂ ನಿರ್ದೇಶಕರಾದ ಗುಣ ಹರಿಯಬ್ಬೆರವರು ಫಿಲಂ ಚೆಂಬರ್ ಗೆ ದೂರು ಕೊಟ್ಟು ಆರೋಪ ಹೋರಿಸುತ್ತಿರುಹುದು ಸರಿ ಅಲ್ಲ..#BBK12 #Gilli #GilliNata #Gilli_Nataraj pic.twitter.com/pN8ekWt0U0
— 𝐆𝐢𝐥𝐥𝐢𝐍𝐚𝐭𝐚 𝐎𝐟𝐟𝐢𝐜𝐢𝐚𝐥 (@GilliNata_BBK12) February 6, 2026
ಈ ವಿಡಿಯೋ ಹೊರಬಂದ ಬಳಿಕ ಗಿಲ್ಲಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. "ಗಿಲ್ಲಿ ಪ್ರಚಾರ ಮಾಡಿಲ್ಲ ಎನ್ನುವುದು ಸುಳ್ಳು ಆರೋಪ", "ವಿಡಿಯೋ ಸಾಕ್ಷಿ ಇದ್ದಾಗ ಅನಗತ್ಯವಾಗಿ ಆರೋಪ ಮಾಡಬೇಡಿ" ಎಂದು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ. ನಮ್ಮ ಗಿಲ್ಲಿ ನಟ ಸಣ್ಣ ಪಾತ್ರದಲ್ಲಿ ಅಭಿನಯಿಸಿರುವ "ಸರ್ಕಾರಿ ಶಾಲೆ H8" ಚಿತ್ರಕ್ಕೆ ಜನವರಿ 29ರಂದೇ ಹರಸಿ ಶುಭಾಶಯಗಳು ತಿಳಿಸಿದ್ದಾರೆ. ಆದರೂ ನಿರ್ದೇಶಕರಾದ ಗುಣ, ಫಿಲಂ ಚೆಂಬರ್ಗೆ ದೂರು ಕೊಟ್ಟು ಆರೋಪ ಹೊರಿಸುತ್ತಿರುವುದು ಸರಿ ಅಲ್ಲ ಎಂದಿದ್ದಾರೆ.
ಚೇಂಬರ್ ತನಿಖೆ ಸಾಧ್ಯತೆ
ಇತ್ತ, ದೂರು ಸ್ವೀಕರಿಸಿರುವ ಕರ್ನಾಟಕ ಫಿಲ್ಮ್ ಚೇಂಬರ್ ಈ ವಿಚಾರದಲ್ಲಿ ಗಿಲ್ಲಿಯನ್ನು ಕರೆಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ನಡುವೆ, ವೈರಲ್ ಆದ ವಿಡಿಯೋ ಪ್ರಕರಣಕ್ಕೆ ಯಾವ ತಿರುವು ನೀಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಬಿಗ್ಬಾಸ್ ಗೆದ್ದ ಬಳಿಕ ರಾಜ್ಯದ ಮನೆಮಾತಾಗಿರುವ ಗಿಲ್ಲಿಗೆ ಇದು ಮೊದಲ ದೊಡ್ಡ ವಿವಾದವಾಗಿದ್ದು, ಮುಂದಿನ ದಿನಗಳಲ್ಲಿ ಚೇಂಬರ್ ಕೈಗೊಳ್ಳುವ ಕ್ರಮದತ್ತ ಕನ್ನಡ ಚಿತ್ರರಂಗದ ಗಮನ ಇದೆ.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್ಸೈಟ್ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್ಬುಕ್ ಮತ್ತು ಟ್ವಿಟರ್ನಲ್ಲೂ ಮೈಖೇಲ್ ಫಾಲೊ ಮಾಡಿ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications