ಕನ್ನಡ ಕಿರುತೆರೆಯಿಂದ ಗಿಣಿರಾಮ ನಟಿ ನಯನಾ ನಾಗರಾಜ್ ಬ್ಯಾನ್: ಕಾರಣವೇನು?
ಪಾಪ ಪಾಂಡು ಹಾಗೂ ಗಿಣಿರಾಮದಂತಹ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ನಟಿಸಿದ್ದ ನಯನಾ ನಾಗರಾಜ್ ಇತ್ತೀಚಿಗೆ ಯಾವುದೇ ಕಿರುತೆರೆ ಧಾರಾವಾಹಿ ಹಾಗೂ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳಿಗೆ ಬೇಸರವಾಗಿದ್ದು, ಕೆಲ ಕಿರುತೆರೆ ಪ್ರೇಕ್ಷಕರು ನಯನಾರನ್ನು ಮರೆಯುತ್ತಿದ್ದಾರೆ.
ನಗು ಮುಖದ ನಯನಾ ನಾಗರಾಜ್ ಪಾಪ ಪಾಂಡುವಂತಹ ಧಾರಾವಾಹಿಯಲ್ಲಿ ನಗಿಸಲು ಸೈ, ಗಿಣಿರಾಮದಂತಹ ಧಾರಾವಾಹಿಯಲ್ಲಿ ಖಡಕ್ ಪಾತ್ರಕ್ಕೂ ಸೈ ಎನ್ನುವಂತಿದ್ದರು. ಯಾವುದೇ ಪಾತ್ರಕ್ಕೂ ಕೂಡ ನಯನಾ ನಾಗರಾಜ್ ಹೊಂದುತ್ತಿದ್ದರು. ಆದರೆ ನಯನಾ ನಾಗರಾಜ್ ಏಕಾಏಕಿ ಹೀಗೆ ಕಿರುತೆರೆಯಿಂದ ದೂರಾಗಿದ್ದೇಕೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿರಬಹುದು. ಇದಕ್ಕೆ ಉತ್ತರ ಇಲ್ಲಿದೆ.

ನಯನಾ ನಾಗರಾಜ್ ಅವರನ್ನು ಧಾರಾವಾಹಿಗಳಿಂದ ಬ್ಯಾನ್ ಮಾಡಲಾಗಿದೆ ಎನ್ನುವ ವಿಚಾರವನ್ನು ನೀವು ನಂಬುತ್ತೀರಾ? ಆಶ್ಚರ್ಯವಾದರೂ ಇದು ಸತ್ಯ. ಹೌದು ಗಿಣಿರಾಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಯನಾ ನಾಗರಾಜ್ ಅವರನ್ನು ಕಳೆದ ವರ್ಷ ಧಾರಾವಾಹಿಗಳಿಂದ ಬ್ಯಾನ್ ಮಾಡಲಾಗಿದೆಯಂತೆ. ಈ ವಿಚಾರವನ್ನು ಸ್ವತಃ ನಯನಾ ನಾಗರಾಜ್ ಇತ್ತೀಚಿಗೆ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ತಾವು ನಟಿಸುತ್ತಿದ್ದ ಧಾರಾವಾಹಿ ತಂಡದಲ್ಲಿ ವ್ಯಕ್ತಿಯೊಬ್ಬನಿ೦ದ ಮಾನಸಿಕ ಹಿಂಸೆಯಾಗುತ್ತಿತ್ತು. ಆತನ ಕಮೆಂಟ್ಗೆ ಎದುರೇಟು ಕೊಟ್ಟಿದ್ದಕ್ಕೆ ಆತ ಒಂದು ವರ್ಷ ನನ್ನ ಬದುಕನ್ನು ನರಕ ಮಾಡಿದ. ಹೀಗಾಗಿ ಆತನ ಮೇಲೆ ವಾಹಿನಿಗೆ ದೂರು ನೀಡಿದೆ. ಇದರಿಂದ ಹಿಂಸೆ ಇನ್ನಷ್ಟು ಜಾಸ್ತಿ ಆಯ್ತು. ಬಳಿಕ ಧಾರಾವಾಹಿ ಬಿಡುವ ನಿರ್ಧಾರ ಮಾಡಿದೆ. ಕೊನೆಗೆ ಧಾರಾವಾಹಿ ಕಥೆ ಅಂತ್ಯಗೊಳಿಸಲಾಯಿತು. ಇದರಿಂದ ತಮ್ಮ ಧಾರಾವಾಹಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತು ಎಂದು ಆರೋಪಿಸಿ ನನ್ನ ವಿರುದ್ಧ ದೂರು ನೀಡಿದರು. ಇದೇ ಕಾರಣದಿಂದ ನಾನು ಧಾರಾವಾಹಿ ಮಾಡದಂತೆ ನಿಷೇಧ ವಿಧಿಸಲಾಯಿತು ಎಂದು ನಟಿ ನಯನಾ ಹೇಳಿಕೊಂಡಿದ್ದರು.

ನಯನಾ ನಟನೆಯಿಂದ ಬ್ಯಾನ್ ಆಗಿರುವ ಹೇಳಿಕೆ ಹಾಗೂ ಧಾರಾವಾಹಿ ತಂಡದಿಂದ ತಮಗಾದ ನೋವಿನ ಬಗ್ಗೆ ಹೇಳಿರುವ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರಿಂದ ನಯನಾ ನಾಗರಾಜ್ ಏಕಾಏಕಿ ಹೀಗೆ ಕಿರುತೆರೆಯಿಂದ ದೂರಾಗಿದ್ದೇಕೆ ಎನ್ನುವ ಪ್ರಶ್ನೆಗೆ ಅವರ ಅಭಿಮಾನಿಗಳಿಗೆ ಹಾಗೂ ಕಿರುತೆರೆ ಪ್ರೇಕ್ಷಕರಿಗೆ ಉತ್ತರ ಸಿಕ್ಕಂತಾಗಿದೆ. ಸದ್ಯ ಮದುವೆಯಾಗಿ ತಮ್ಮ ಹಾಡು ಹಾಗೂ ರಂಗ ಭೂಮಿ ಕೆಲಸಗಳಲ್ಲಿ ಬ್ಯೂಸಿಯಾಗಿರುವ ನಯನಾ ನಾಗರಾಜ್ ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.
-
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ










Click it and Unblock the Notifications