Ranya Rao: 'ಚಿನ್ನ ಕಳ್ಳಿ, ಹೆಂಗಿದೆ ಜೈಲು?' ನಟಿ ರನ್ಯಾ ರಾವ್ಗೆ ಕೈದಿಗಳಿಂದ ಕಾಟ
ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಜೈಲು ಸೇರಿರುವ ಮಾಣಿಕ್ಯ ಸಿನಿಮಾ ನಟಿ ರನ್ಯಾ ರಾವ್ ಅವರಿಗೆ ಜೈಲಿನಲ್ಲೂ ನೆಮ್ಮದಿ ಇಲ್ಲದಂತಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ಪುತ್ರಿಯಾಗಿ, ನಟಿಯಾಗಿ ಮಿಂಚಿದ್ದ ಅವರಿಗೆ ಇದೀಗ ಜೈಲುವಾಸ ದೊಡ್ಡ ನರಕವಾಗಿಬಿಟ್ಟಿದೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರನ್ಯಾ ರಾವ್ ಅವರಿಗೆ ಹೊಸ ಸಮಸ್ಯೆಯೊಂದು ಹುಟ್ಟಿಕೊಂಡಿದೆ. ಜೈಲಿನಲ್ಲಿರುವ ಮಹಿಳಾ ಕೈದಿಗಳ ಕಾಟ ಕೊಡುತ್ತಿದ್ದಾರೆ ಎಂದು ರನ್ಯಾ ಅವರು ಜೈಲಾಧಿಕಾರಿಗಳ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಸ್ಯಾಂಡಲ್ವುಡ್ನಲ್ಲಿ ಮಿಂಚಿದ್ದ ರನ್ಯಾ ರಾವ್ ಅವರು ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ತನಿಖೆ ವೇಳೆ ಈ ಬಗ್ಗೆ ಶಾಕಿಂಗ್ ವಿಚಾರಗಳು ಹೊರಬಂದಿದ್ದವು. ಈ ಹಿನ್ನೆಲೆ ರನ್ಯಾ ಅವರನ್ನು ಪೊಲೀಸರು ತನಿಖೆ ನಡೆಸಿ, ಜೈಲಿಗಟ್ಟಿದ್ದರು. ಇನ್ನು ಅರೆಸ್ಟ್ ಆದ ಸಂದರ್ಭದಲ್ಲಿ ರನ್ಯಾ ಅವರು ಗುರುತೇ ಸಿಗದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಜೈಲಿನಲ್ಲಿ ಅವರಿಗೆ ಮಹಿಳಾ ಕೈದಿಗಳಿಂದ ಟಾರ್ಚರ್ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಇತರೆ ಮಹಿಳಾ ಕೈದಿಗಳು ರನ್ಯಾ ರಾವ್ಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರನ್ಯಾರಾವ್ಗೆ ಚಿನ್ನ ಕಳ್ಳಿ ಅಂತೆಲ್ಲ ಅವಮಾನ ಮಾಡುವುದು, ಜೈಲು ಹೇಗಿದೆ ಎಂದು ಚುಚ್ಚಿ ಮಾತನಾಡುತ್ತಿದ್ದಾರೆ. ಹಾಗಾಗಿ ದಯವಿಟ್ಟು ನನ್ನನ್ನು ಬೇರೆ ಬ್ಯಾರಕ್ಗೆ ಶಿಫ್ಟ್ ಮಾಡಿ ಎಂದು ಜೈಲಿನ ಅಧಿಕಾರಿಗಳಿಗೆ ಬೇಡಿಕೊಂಡಿದ್ದಾರಂತೆ. ಅಲ್ಲದೆ ರನ್ಯಾ ಅವರ ಮನವಿಗೆ ಸ್ಪಂದಿಸಿರುವ ಅಧಿಕಾರಿಗಳು ಅವರನ್ನು ಬೇರೆ ಬ್ಯಾರಕ್ಗೆ ಶಿಫ್ಟ್ ಮಾಡಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಕೇಸ್ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಅವರಿಗೆ ಇತ್ತೀಚೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಸಿಕ್ಕರೂ ರನ್ಯಾಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ರನ್ಯಾ ರಾವ್ ಮತ್ತು ಅವರ ಇಬ್ಬರು ಸಹಚರರಾದ ತರುಣ್, ಸಾಹಿಲ್ ಅವರನ್ನು ಕಠಿಣ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಿರುವುದರಿಂದ ನಟಿಯನ್ನು ಜೈಲಿನಿಂದ ರಿಲೀಸ್ ಮಾಡಿರಲಿಲ್ಲ. ಹಾಗಾಗಿ ಅವರು ಜೈಲಿನಲ್ಲೇ ಇದ್ದಾರೆ.
ಅಲ್ಲದೆ ಈ ಕೇಸ್ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಶಿಫಾರಸಿನ ಮೇರೆಗೆ ನಟಿ ಮತ್ತು ಇತರೆ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕೂಡ ಕಠಿಣ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ ಜಾರಿಗೊಳಿಸಿದೆ. ಈ ಕಾಯ್ದೆಯ ಅನ್ವಯ ಆರೋಪಿ ರನ್ಯಾ ರಾವ್ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿಲ್ಲ. ಈಗ ಜೈಲಿನಲ್ಲೂ ರನ್ಯಾ ರಾವ್ಗೆ ಕೈದಿಗಳಿಂದ ಕಾಟ ಹೆಚ್ಚಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications