ಅಣ್ಣಾವ್ರ ಬಗ್ಗೆ ಮಾತಾಡೋದು, ಆಕಾಶ ನೋಡಿ ಉಗಿಯೋದು ಒಂದೇ: ಆರ್ಜಿವಿಗೆ ನಟ ಗಣೇಶ್ ಖಡಕ್ ತಿರುಗೇಟು
ಬೆಂಗಳೂರು, ಜೂನ್ 09: ಕನ್ನಡ ನಾಡು, ನುಡಿಗೆ, ಸಿನಿಮಾ ರಂಗಕ್ಕೆ ವರನಟ ಡಾ.ರಾಜಕುಮಾರ್ ಅವರ ಕೊಡುಗೆ ಅಪಾರ, ಅಮೋಘ. ಅಂತವರ ಬಗ್ಗೆ ವಿವಾದಿತ ನಿರ್ದೇಶಕ ಎಂದೇ ಖ್ಯಾತರಾದ ರಾಮ್ ಗೋಪಾಲ್ ವರ್ಮಾ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಇತ್ತೀಚೆಗೆ 'ಕನ್ನಡದಿಂದ ತಮಿಳು ಹುಟ್ಟಿದ್ದು' ಎಂದು ನಟ ಕಮಲ್ ಹಾಸನ್ ನಾಲಿಗೆ ಹರಿಬಿಟ್ಟಿದ್ದರು. ಇದೀಗ ರಾಮ್ ಗೋಪಾಲ್ ವರ್ಮಾ ಹೇಳಿಕೆಗೆ ನಟ ಗೋಲ್ಡನ್ ಸ್ಟಾರ್ ಗಣೇಶ್ ಖಡಕ್ ತಿರುಗೇಟು ನೀಡಿದ್ದಾರೆ. ಅವರ ಮಾತುಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪರಭಾಷಿಗರ ಕಲಾವಿದರು, ನಟ ನಿರ್ದೇಶಕರುಗಳು ಕರ್ನಾಟಕ ಮತ್ತು ಕನ್ನಡದ ಮೇಲೆ ಅದ್ಯಾಕೆ ಇಷ್ಟು ಕಡೆಗಣನೆ, ಅಗೌರವದ ಭಾವನೆ ಹೊಂದಿದ್ದು, ಬೇಕಾಬಿಟ್ಟಿಯಾಗಿ ಹಿಡಿತವಿಲ್ಲದ ಮಾತನಾಡುತ್ತಿದ್ದಾರೆ. ಪದೇ ಪದೇ ಕನ್ನಡಿಗರನ್ನು, ಭಾಷೆ, ನಮ್ಮ ಕಲಾವಿದರನ್ನು ಕೆಣಕುತ್ತಲೇ ಬರುತ್ತಿದ್ದಾರೆ. 'ನಟ ಅಮಿತಾಬ್ ಬಚ್ಚನ್ ಅವರ ಸಿನಿಮಾಗಳನ್ನು ರಿಮೇಕ್ ಮಾಡಿ ರಾಜ್ಕುಮಾರ್ ಫೇಮಸ್ ಆದ್ರು' ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದರು.

ಆಕಾಶ ನೋಡಿ ಉಗಿದರೆ ಏನಾಗುತ್ತೆ...
ಇದಕ್ಕೆ ತಿರುಗೇಟು ನೀಡಿರುವ ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಅವರು, ''ರಾಮ್ ಗೋಲಾಲ್ ವರ್ಮಾ ಹೇಳಿಕೆಗೆ ನಾವು ಹೇಳಿಕೆ ಕೊಡುವುದೇ ತಪ್ಪು. ಕನ್ನಡ ಅಂದ್ರೆ ಡಾ.ರಾಜಕುಮಾರ್, ಡಾ.ರಾಜಕುಮಾರ್ ಅಂದ್ರನೇ ಕನ್ನಡ. ಅಣ್ಣಾವ್ರ ಬಗ್ಗೆ ಮಾತನಾಡುವುದೆಂದರೆ ಅದು ಆಕಾಶ ನೋಡಿ ಉಗಿದಂತೆ, ಹಾಗೆ ಉಗಿದರೆ ಮತ್ತೆ ಅದು ನಮ್ಮ ಮುಖಕ್ಕೆ ಬೀಳೋದು. ಅದು ಆರ್ಜಿವಿಯೇ ಆಗಲಿ, ಬೇರೆ ಯಾರೇ ಆಗಿರಲಿ'' ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ. ನಾಲಿಗೆ ಹರಿಬಿಟ್ಟ ನಿರ್ದೇಶಕನಿಗೆ ನಟ ಗಣೇಶ್ ಅವರು ತಕ್ಕ ತಿರುಗೇಟು ಕೊಟ್ಟಿದ್ದಾರೆ.
ಆರ್ಜಿವಿ ಹೇಳಿಕೆಗೆ ವ್ಯಾಪಕ ಆಕ್ರೋಶ
ಗಣೇಶ್ ಅವರ 'ಪಿನಾಕ' ಸಿನಿಮಾ ದೊಡ್ಡ ಸೆಟ್ನಲ್ಲಿ ನೆಲಮಂಗಲ ಬಳಿ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಕುರಿತು ಅವರು ಮಾತನಾಡುವಾಗ ಆರ್ಜಿವಿ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಇನ್ನೂ ಆರ್ಜಿವಿ ಹೇಳಿಕೆ ಕರ್ನಾಟಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಮಕಾಡೆ ಮಲಗಿದ ಕಮಲ್ ಹಾಸನ ಸಿನ್ಮಾ
ಕಮಲ್ ಹಾಸನ ಸಹ ಕನ್ನಡದ ಬಗ್ಗೆ ಕೇವಲವಾಗಿ ಮಾತನಾಡಿದ್ದಲ್ಲದೇ, ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದರು. ತಾನು ಕ್ಷಮೆ ಕೇಳುವುದಿಲ್ಲ ಎಂದು ವಿವಾದ ಸೃಷ್ಟಿಸಿಕೊಂಡಿದ್ದರು. ತನ್ನ ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಬೇಕು, ಅದಕ್ಕಾಗಿ ಭದ್ರತೆ ಒದಗಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೂಕೋರ್ಟ್ ಸಹ ಛೀಮಾರಿ ಹಾಕಿತ್ತು. ಕ್ಷಮೆ ಕೇಳುವಂತೆ ಸೂಚನೆ ನೀಡಿತ್ತು. ನಂತರ ಬಿಡುಗಡೆಯಾದ ಥಗ್ ಲೈಫ್ ಮಕಾಡೆ ಮಲಗಿತು. ಕರ್ನಾಟಕದಲ್ಲಿ ಬಿಡುಗಡೆ ಆಗದಿದ್ದೆ ಒಳ್ಳೆದಾಯಿತು ಎಂದು ತಮಿಳು ಕಮಲ್ ಫ್ಯಾನ್ಸ್ ಸಿನಿಮಾ ನೋಡಿ ಹೇಳಿದ್ದರು.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications