ಅಣ್ಣಾವ್ರ ಬಗ್ಗೆ ಮಾತಾಡೋದು, ಆಕಾಶ ನೋಡಿ ಉಗಿಯೋದು ಒಂದೇ: ಆರ್ಜಿವಿಗೆ ನಟ ಗಣೇಶ್ ಖಡಕ್ ತಿರುಗೇಟು
ಬೆಂಗಳೂರು, ಜೂನ್ 09: ಕನ್ನಡ ನಾಡು, ನುಡಿಗೆ, ಸಿನಿಮಾ ರಂಗಕ್ಕೆ ವರನಟ ಡಾ.ರಾಜಕುಮಾರ್ ಅವರ ಕೊಡುಗೆ ಅಪಾರ, ಅಮೋಘ. ಅಂತವರ ಬಗ್ಗೆ ವಿವಾದಿತ ನಿರ್ದೇಶಕ ಎಂದೇ ಖ್ಯಾತರಾದ ರಾಮ್ ಗೋಪಾಲ್ ವರ್ಮಾ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಇತ್ತೀಚೆಗೆ 'ಕನ್ನಡದಿಂದ ತಮಿಳು ಹುಟ್ಟಿದ್ದು' ಎಂದು ನಟ ಕಮಲ್ ಹಾಸನ್ ನಾಲಿಗೆ ಹರಿಬಿಟ್ಟಿದ್ದರು. ಇದೀಗ ರಾಮ್ ಗೋಪಾಲ್ ವರ್ಮಾ ಹೇಳಿಕೆಗೆ ನಟ ಗೋಲ್ಡನ್ ಸ್ಟಾರ್ ಗಣೇಶ್ ಖಡಕ್ ತಿರುಗೇಟು ನೀಡಿದ್ದಾರೆ. ಅವರ ಮಾತುಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪರಭಾಷಿಗರ ಕಲಾವಿದರು, ನಟ ನಿರ್ದೇಶಕರುಗಳು ಕರ್ನಾಟಕ ಮತ್ತು ಕನ್ನಡದ ಮೇಲೆ ಅದ್ಯಾಕೆ ಇಷ್ಟು ಕಡೆಗಣನೆ, ಅಗೌರವದ ಭಾವನೆ ಹೊಂದಿದ್ದು, ಬೇಕಾಬಿಟ್ಟಿಯಾಗಿ ಹಿಡಿತವಿಲ್ಲದ ಮಾತನಾಡುತ್ತಿದ್ದಾರೆ. ಪದೇ ಪದೇ ಕನ್ನಡಿಗರನ್ನು, ಭಾಷೆ, ನಮ್ಮ ಕಲಾವಿದರನ್ನು ಕೆಣಕುತ್ತಲೇ ಬರುತ್ತಿದ್ದಾರೆ. 'ನಟ ಅಮಿತಾಬ್ ಬಚ್ಚನ್ ಅವರ ಸಿನಿಮಾಗಳನ್ನು ರಿಮೇಕ್ ಮಾಡಿ ರಾಜ್ಕುಮಾರ್ ಫೇಮಸ್ ಆದ್ರು' ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದರು.

ಆಕಾಶ ನೋಡಿ ಉಗಿದರೆ ಏನಾಗುತ್ತೆ...
ಇದಕ್ಕೆ ತಿರುಗೇಟು ನೀಡಿರುವ ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಅವರು, ''ರಾಮ್ ಗೋಲಾಲ್ ವರ್ಮಾ ಹೇಳಿಕೆಗೆ ನಾವು ಹೇಳಿಕೆ ಕೊಡುವುದೇ ತಪ್ಪು. ಕನ್ನಡ ಅಂದ್ರೆ ಡಾ.ರಾಜಕುಮಾರ್, ಡಾ.ರಾಜಕುಮಾರ್ ಅಂದ್ರನೇ ಕನ್ನಡ. ಅಣ್ಣಾವ್ರ ಬಗ್ಗೆ ಮಾತನಾಡುವುದೆಂದರೆ ಅದು ಆಕಾಶ ನೋಡಿ ಉಗಿದಂತೆ, ಹಾಗೆ ಉಗಿದರೆ ಮತ್ತೆ ಅದು ನಮ್ಮ ಮುಖಕ್ಕೆ ಬೀಳೋದು. ಅದು ಆರ್ಜಿವಿಯೇ ಆಗಲಿ, ಬೇರೆ ಯಾರೇ ಆಗಿರಲಿ'' ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ. ನಾಲಿಗೆ ಹರಿಬಿಟ್ಟ ನಿರ್ದೇಶಕನಿಗೆ ನಟ ಗಣೇಶ್ ಅವರು ತಕ್ಕ ತಿರುಗೇಟು ಕೊಟ್ಟಿದ್ದಾರೆ.
ಆರ್ಜಿವಿ ಹೇಳಿಕೆಗೆ ವ್ಯಾಪಕ ಆಕ್ರೋಶ
ಗಣೇಶ್ ಅವರ 'ಪಿನಾಕ' ಸಿನಿಮಾ ದೊಡ್ಡ ಸೆಟ್ನಲ್ಲಿ ನೆಲಮಂಗಲ ಬಳಿ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಕುರಿತು ಅವರು ಮಾತನಾಡುವಾಗ ಆರ್ಜಿವಿ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಇನ್ನೂ ಆರ್ಜಿವಿ ಹೇಳಿಕೆ ಕರ್ನಾಟಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಮಕಾಡೆ ಮಲಗಿದ ಕಮಲ್ ಹಾಸನ ಸಿನ್ಮಾ
ಕಮಲ್ ಹಾಸನ ಸಹ ಕನ್ನಡದ ಬಗ್ಗೆ ಕೇವಲವಾಗಿ ಮಾತನಾಡಿದ್ದಲ್ಲದೇ, ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದರು. ತಾನು ಕ್ಷಮೆ ಕೇಳುವುದಿಲ್ಲ ಎಂದು ವಿವಾದ ಸೃಷ್ಟಿಸಿಕೊಂಡಿದ್ದರು. ತನ್ನ ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಬೇಕು, ಅದಕ್ಕಾಗಿ ಭದ್ರತೆ ಒದಗಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೂಕೋರ್ಟ್ ಸಹ ಛೀಮಾರಿ ಹಾಕಿತ್ತು. ಕ್ಷಮೆ ಕೇಳುವಂತೆ ಸೂಚನೆ ನೀಡಿತ್ತು. ನಂತರ ಬಿಡುಗಡೆಯಾದ ಥಗ್ ಲೈಫ್ ಮಕಾಡೆ ಮಲಗಿತು. ಕರ್ನಾಟಕದಲ್ಲಿ ಬಿಡುಗಡೆ ಆಗದಿದ್ದೆ ಒಳ್ಳೆದಾಯಿತು ಎಂದು ತಮಿಳು ಕಮಲ್ ಫ್ಯಾನ್ಸ್ ಸಿನಿಮಾ ನೋಡಿ ಹೇಳಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications