ಶ್ರೀ ಕೃಷ್ಣ ದೇವರಾಯ ವಿವಿ ಘಟಿಕೋತ್ಸವ; ನಟಿ ಉಮಾಶ್ರೀಗೆ ಗೌರವ ಡಾಕ್ಟರೇಟ್ ಪ್ರದಾನ
ಬಳ್ಳಾರಿ, ಸೆಪ್ಟೆಂಬರ್ 07: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2022-23ನೇ ಸಾಲಿನ 12ನೇ ವಾರ್ಷಿಕ ಘಟಿಕೋತ್ಸವ ಶುಕ್ರವಾರ ನಡೆಯಿತು. ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ರಂಗಭೂಮಿ, ಸಿನಿಮಾ ಕ್ಷೇತ್ರದ ಸಾಧನೆಗಾಗಿ ಹಿರಿಯ ನಟಿ ಉಮಾಶ್ರೀ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಾಯಿತು.
12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಿತು. ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ವಿಶ್ವ ವಿದ್ಯಾಲಯದ ಕುಲಾಧಿಪತಿ ಥಾವರಚಂದ್ ಗೆಹ್ಲೋಟ್ ವಹಿಸಿದ್ದಾರೆ. ಘಟಿಕೋತ್ಸವ ಭಾಷಣವನ್ನು ಹಿರಿಯ ವಿಜ್ಞಾನಿ ಹಾಗೂ ಧಾರವಾಡ ಐಐಟಿಯ ಡೀನ್ ಮತ್ತು ಗೌರವ ಪ್ರಾಧ್ಯಾಪಕ ಪ್ರೊ. ಎಸ್. ಎಮ್. ಶಿವಪ್ರಸಾದ್ ಮಾಡಿದರು.

ವಾರ್ಷಿಕ ಘಟಿಕೋತ್ಸವ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ನೇತೃತ್ವದಲ್ಲಿ ನಡೆಯಿತು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರುಗಳು, ಕುಲಸಚಿವರಾದ ಎಸ್. ಎನ್. ರುದ್ರೇಶ್, ಕುಲಸಚಿವ (ಮೌಲ್ಯಮಾಪನ) ಪ್ರೊ. ರಮೇಶ್ ಓಲೇಕಾರ ಮುಂತಾದವರು ಪಾಲ್ಗೊಂಡಿದ್ದರು.
ನಟಿ ಉಮಾಶ್ರೀ ಪರಿಚಯ: ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು ಪಡೆದರು. ವಿವಿಧ ವಿಭಾಗಗಳ ಒಟ್ಟು 36 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆದರು. ಎಲ್ಲ ವಿಭಾಗಗಳ ಸ್ನಾತಕ ಪದವಿಯ 56 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 69 ಒಟ್ಟು 125 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಘಟಿಕೋತ್ಸದಲ್ಲಿ ನಟಿ ಉಮಾಶ್ರೀ, ಎಸ್. ಕೆ. ಮೋದಿ, ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ ಸೇರಿ ಮೂರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ನಟಿ ಉಮಾಶ್ರೀ ಅವರಿಗೆ ರಂಗಭೂಮಿ, ಕಲೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ತುಮಕೂರು ಜಿಲ್ಲೆಯ ನೊಣವಿನಕೆರೆಯಲ್ಲಿ 1957 ಮೇ 10ರಂದು ಜನಿಸಿದ ಉಮಾಶ್ರೀ, 100ಕ್ಕೂ ಹೆಚ್ಚು ನಾಟಕ, 6,500 ಪ್ರದರ್ಶನ ಮತ್ತು 460ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
ಕಾಂಗ್ರೆಸ್ ಪ್ಷಕದ ಜೊತೆ ಗುರುತಿಸಿಕೊಂಡಿರುವ ಅವರು ಶಾಸಕರಾಗಿ, ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಹಾಲಿ ವಿಧಾನ ಪರಿಷತ್ ಸದಸ್ಯರು. 2013 ರಿಂದ 2018 ರವರೆಗೆ ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಶ್ರೀ. ಕೆ. ವಿ. ಶಂಕರೇಗೌಡ ಪ್ರಶಸ್ತಿ, ನಾಟ್ಯ ಸಮ್ಮಾನ್ ರಾಷ್ಟ್ರೀಯ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, 10ನೇ ಒಷಿಯನ್ಸ್ ಸಿನೆಫ್ಯಾನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 'ಗುಲಾಬಿ ಟಾಕೀಸ್' ಚಲನಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಉಮಾಶ್ರೀ ಪ್ರತಿಷ್ಠಿತ ರಜತ್ ಕಮಲ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದಿವಂಗತ ಡಿ. ದೇವರಾಜ ಅರಸು ರಾಷ್ಟ್ರೀಯ ಶ್ರೀರತ್ನ ಪ್ರಶಸ್ತಿ, ಪಂಚರತ್ನ ರಾಜ್ಯೋತ್ಸವ ಪ್ರಶಸ್ತಿ, ಶ್ರೀ ಕೃಷ್ಣದೇವರಾಯ ಪ್ರಶಸ್ತಿಯಂತಹ ಅನೇಕ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications