Bigg Boss: ಬಿಗ್ ಬಾಸ್ ಮನೇಲಿ ರಜತ್ & ಚೈತ್ರಾ ಕುಂದಾಪುರ ನಡುವೆ..
Bigg Boss: ಬಿಗ್ ಬಾಸ್ ಕನ್ನಡ 11ನೇ ಸೀಸನ್ ಮುಗಿಯಲು ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಈ ಭಾನುವಾರದ ವಾರದ ಕಥೆ ಕಿಚ್ಚನ ಜೊತೆ ಪ್ರೋಮೋ ಬಿಡುಗಡೆಯಾಗಿದ್ದು, ಈ ಜರ್ನಿಯಲ್ಲಿ ಡೇಂಜರ್ ಯಾರು ಹಾಗೂ ಜೋಕರ್ ಯಾರು ಎನ್ನುವ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ. ಇದೇ ವೇಳೆ ಕಪ್ ಎತ್ತಿಕೊಂಡು ನಾನು ಮನೆಗೆ ಹೋಗುತ್ತೇನೆ ಎಂದು ಸ್ಪರ್ಧಿಯೊಬ್ಬರು ಹೇಳುತ್ತಾರೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾಗಿದೆ. ಈ ಬಾರಿಯ ಸೀಸನ್ 11 97ನೇ ದಿನಕ್ಕೆ ಬಂದು ತಲುಪಿದೆ. ಅದರಲ್ಲೂ ಎಲ್ಲಾ ಸೀಸನ್ಗಿಂತಲೂ ಈ ಬಾರಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟವರದ್ದೇ ದರ್ಬಾರ್ ಆಗಿಬಿಟ್ಟಿದೆ. ಇವರ ಬಿಗ್ ಬಾಸ್ ಮನೆಯಲ್ಲಿನ ಆಟಕ್ಕೆ ವೀಕ್ಷಕರು ಸೈ ಎನ್ನುತ್ತಿದ್ದಾರೆ.

ಬಿಗ್ಬಾಸ್ ಕನ್ನಡ 11 ಸೀಸನ್ 50 ದಿನಗಳನ್ನು ಪೂರೈಸಿದ ಹೊತ್ತಲ್ಲೇ ಅಚ್ಚರಿ ರೀತಿಯಲ್ಲಿ ವೈಲ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ರಜತ್ ಅವರು ದಿನ ಕಳೆದಂತೆ ಸೌಂಡ್ ಹೆಚ್ಚು ಮಾಡುತ್ತಾ ಹೋದವರು. ಅಲ್ಲದೆ, ಕೆಲವೇ ದಿನಗಳಲ್ಲಿ ವೀಕ್ಷಕರ ಮನ ಗೆದ್ದುಬಿಟ್ಟಿದ್ದಾರೆ.
ವಾರದ ಕಥೆ ಕಿಚ್ಚನ ಜೊತೆ ಭಾನುವಾರದ ಎಪಿಸೋಡ್ ಪ್ರೋಮೋ ಬಿಡುಗಡೆಯಾಗಿದೆ. ಇದರಲ್ಲಿ ಚೈತ್ರಾ ಕುಂದಾಪುರಗೆ ಬಾಸ್ ಬಾಸ್ ಅಂತಲೇ ತಮಾಷೆ ಮಾಡುತ್ತಿದ್ದ ರಜತ್ ಇದೀಗ ಬಿಗ್ ಬಾಸ್ ಕಪ್ ನನಗೆ ಕೊಟ್ಟು ಬಿಡಿ ಅಂತಾ ಹೇಳುವ ಮೂಲಕ ಗಮನ ಸೆಳೆದಿದ್ದಾರೆ. ಈ ವೇಳೆ ಕಿಚ್ಚ ಸುದೀಪ್ ಅವರು ಫಿದಾ ಆಗಿದ್ದಾರೆ.
ಈ ವಾರ ಡೇಂಜರ್ ಯಾರು ಹಾಗೂ ಜೋಕರ್ ಯಾರು ಎನ್ನುವ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ. ಇದೇ ವೇಳೆ ಭವ್ಯಾ ಅವರು ತಲೆಯಲ್ಲಿ ತುಂಬಾ ವಿಚಾರಗಳನ್ನು ಓಡಿಸುತ್ತಿರುತ್ತಾರೆ ಎಂದು ಕಾರಣ ನೀಡುವ ಮೂಲಕ ಡೇಂಜರ್ ಅನ್ನುವುದನ್ನು ತ್ರಿವಿಕ್ರಂಗೆ ಕೊಡುತ್ತಾರೆ. ಇನ್ನು ಬಹುತೇಕ ಸ್ಪರ್ಧಿಗಳು ಚೈತ್ರಾಗೆ ಜೋಕರ್ ಎನ್ನುವ ಪಟ್ಟ ಕೊಡುತ್ತಾರೆ.
ಇದೇ ವೇಳೆ ರಜತ್ ಚೈತ್ರಾಗೆ ಜೋಕರ್ ಎನ್ನುವ ಪಟ್ಟವನ್ನು ಕೊಟ್ಟಿದ್ದಲ್ಲದೆ, ಅಚ್ಚರಿ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. ಜೋಕರ್ ಚೈತ್ರಾ ಎಂದು ಹೇಳುವ ಮೂಲಕ ಅವರು ಬಿಗ್ ಬಾಸ್ ಮನೆಗೆ ಬಂದು ವಾರ ವಾರಗಳನ್ನು ಕಳೆದಿದ್ದಾರೆ. ಇಷ್ಟು ದಿನ ಅವರು ಸಂಪಾದನೆ ಮಾಡಿರೋದು ಇಷ್ಟು. ಅದಕ್ಕೆ ಅವರನ್ನು ಜೋಕರ್ ಥರಾ ನೋಡುತ್ತಿದ್ದೇನೆ ಎಂದು ಹೇಳುತ್ತಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಚೈತ್ರಾ ಕುಂದಾಪುರ ಅವರು, ಜೋಕರ್ ಆಸ್ಕರ್ ಗೆದ್ದಿರುವ ಕಥೆ ನಾನು ಕೇಳಿದ್ದೇನೆ ಸರ್. ಆದ್ದರಿಂದ ಇವರುಗಳ ಅಭಿಪ್ರಾಯವೇನು ನನಗೆ ದೊಡ್ಡದು ಅನ್ನಿಸುವುದಿಲ್ಲ. ಬಳಿಕ ಪ್ರತಿಕ್ರಿಯಿಸಿದ ರಜತ್ ಆಸ್ಕರ್ ಪ್ರಶಸ್ತಿಯನ್ನು ಚೈತ್ರಾ ಅವರೇ ಗೆದ್ದುಕೊಳ್ಳಲಿ ಸರ್.. ನಾನು ಬಿಗ್ ಬಾಸ್ ಕಪ್ ತೆಗೆದುಕೊಂಡು ಮನೆಗೆ ಹೋಗುತ್ತೇನೆ ಎಂದು ಹೇಳುತ್ತಾರೆ. ಆಗ ಕಿಚ್ ಸುದೀಪ್ ಫಿದಾ ಆಗಿ ನುಸು ನಗುತ್ತಾರೆ. ಈ ಪ್ರೋಮೋ ಇದೀಗ ಭಾರೀ ವೈರಲ್ ಆಗುತ್ತಿದೆ.
ರಜತ್ ಬಿಬ್ ಬಾಸ್ಗೆ ಎಂಟ್ರಿ ಕೊಟ್ಟ ದಿನದಿಂದಲೇ ಸ್ಪರ್ಧಿಗಳ ಜೊತೆ ತಮಾಷೆ, ಜಗಳ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ಇವರು ಮಾಡುವ ಕಾಮಿಡಿಯಿಂಲೇ ಇವರು ವೀಕ್ಷಕರಿಗೆ ದಿನದಿಂದ ದಿನಕ್ಕೆ ಇಷ್ಟ ಆಗುತ್ತಲೇ ಇದ್ದಾರೆ.
ಇದೀಗ ಕಿಚ್ಚ ಸುದೀಪ ಅವರುಗೂ ಕೂಡ ರಜತ್ ಇಷ್ಟ ಆಗಿದ್ದಾರೆ. ಪ್ರತಿ ವಿಕೇಂಡ್ ಎಪಿಸೋಡ್ನನಲ್ಲಿ ರಜತ್ಗೆ ಕಿಚ್ಚ ಸುದೀಪ್ ಪೈಲ್ವಾನ್ ಅಂತಲೇ ಕರೆಯುತ್ತಾರೆ. ಇನ್ನು ಇಂದಿನ ಎಪಿಸೋಡ್ನಲ್ಲಿ ಎಲ್ಲಾ ಸ್ಪರ್ಧಿಗಳು ಚೈತ್ರಾ ಕುಂದಾಪುರಗೆ ಜೋಕರ್ ಪಟ್ಟ ಕೊಟ್ಟಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications