ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಿ, ಅವಾರ್ಡ್ ಗೆಲ್ಲುತ್ತಾರೆ - ರಿಷಬ್ ಶೆಟ್ಟಿ
ಬೆಂಗಳೂರು, ಆಗಸ್ಟ್ 21: ರಾಷ್ಟ್ರ ಪ್ರಶಸ್ತಿ ವಿಶೇತ ನಟ ರಿಷಬ್ ಶೆಟ್ಟಿ ಅವರು ಈಗಾಗಲೇ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಚಿತ್ರಗಳನ್ನೇ ನೀಡಿದ್ದಾರೆ. ರಿಷಬ್ ಶೆಟ್ಟಿ ನಟನೆ ಅಥವಾ ನಿರ್ದೇಶನ ಅಂದರೆ ಪ್ರೇಕ್ಷಕರು ಕೂಡ ಅಂತಹ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಸಾಮಾನ್ಯವಾಗಿ ರಿಷಬ್ ಶೆಟ್ಟಿ ಸಿನಿಮಾಗಳಲ್ಲಿ ಸಮಾಜಕ್ಕೆ ಬಹಳ ಬಲವಾದ ಸಂದೇಶ ನೀಡಲಾಗಿರುತ್ತದೆ. ಉದಾಹರಣೆಗೆ ರಿಕ್ಕಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಸರಗೋಡು. ರಿಷಬ್ ಶೆಟ್ಟಿ ಇಂತಹ ಸಿನಿಮಾಗಳನ್ನೇ ಯಾಕೆ ಮಾಡುತ್ತಾರೆ ಎನ್ನುವುದಕ್ಕೆ ಸ್ವತಃ ಅವರೇ ಉತ್ತರ ನೀಡಿದ್ದಾರೆ.
ಮೆಟ್ರೋ ಸಾಗ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿರುವ ಆಗುಹೋಗುಗಳ ಬಗ್ಗೆ ಗಮನಿಸಬೇಕು. ಸಿನಿಮಾ ನನ್ನ ವೃತ್ತಿ ಆಗಿರುವುದರಿಂದ ಇದರ ಮೂಲಕ ಸಮಾಜಕ್ಕೆ ಉಪಯೋಗವಾಗುವ ಕೆಲಸ ಮಾಡುವ ಅವಕಾಶ ನನಗೆ ಇದೆ. ಏನೇ ಮಾಡಲು ಒಂದು ರೀತಿ- ನೀತಿ ಅಂತಾ ಇರುತ್ತದೆ. ನಮ್ಮ ಭಾರತೀಯ ಚಿತ್ರಗಳಲ್ಲಿ ಅದರಲ್ಲೂ ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ, ಕೇವಲವಾಗಿ ತೋರಿಸಿ, ಹೊರ ದೇಶಗಳಲ್ಲಿ ತೋರಿಸಿ ಅವಾರ್ಡ್ ಗೆದ್ದುಕೊಂಡು ಬಂದಿರುವುದನ್ನು ನಾನು ಗಮನಿಸಿದ್ದೇನೆ ಎಂದರು.

ನಮ್ಮ ದೇಶ ನಮ್ಮ ಹೆಮ್ಮೆ, ನಮ್ಮ ರಾಜ್ಯ ನಮ್ಮ ಹೆಮ್ಮೆ, ನಮ್ಮ ಭಾಷೆ ನನಗೆ ಹೆಮ್ಮೆ, ಹೀಗಾಗಿ ನಾನ್ಯಾಕೆ ಇದನ್ನು ಪಾಸಿಟಿವ್ವಾಗಿ ಇದನ್ನು ತೆಗೆದುಕೊಂಡು ಹೋಗಬಾರದು. ನಮ್ಮಲ್ಲಿರುವ ವಿಚಾರಗಳನ್ನು, ಪಾಸಿಟಿವ್ ಇರುವ ವಿಚಾರಗಳನ್ನು, ಪಾಸಿಟಿವ್ ಆಗಿಯೇ ಜನರಿಗೆ ತೋರಿಸಬಹುದಲ್ಲ. ನೆಗೆಟಿವಿಟಿಯನ್ನು ಬಿಟ್ಟು ಏನು ಮಾಡಲು ಸಾಧ್ಯವಿದೆ. ಈ ರೀತಿಯಾಗಿ ನಾನು ಯೋಚನೆ ಮಾಡುತ್ತೇನೆ.
ಯಾವುದೇ ಕಾರಣಕ್ಕೂ ಯಾರಿಗೂ ಬೇಸರವಾಗಬಾರದು, ಯಾವುದೇ ಕಾರಣಕ್ಕೂ ಯಾರಿಗೂ ನೋವಾಗಬಾರದು, ಯಾವುದೇ ಕಾರಣಕ್ಕೂ ಕೆಟ್ಟ ಪರಿಣಾಮ ಬೀರಬಾರದು ಎನ್ನುವ ವಿಚಾರಗಳ ಬಗ್ಗೆ ನಾನು ಬಹಳ ಸೂಕ್ಷ್ಮವಾಗಿರುತ್ತೇನೆ. ಅಲ್ಲಿ ಏನೇ ಒಂದು ಸಾಲು ಬರುತ್ತದೆ ಅಂದರೂ, ಅದರ ಬಗ್ಗೆ ನಾನು ಯೋಚನೆ ಮಾಡುತ್ತೇನೆ. ನಾವು ಮಾಡುವ ತಮಾಷೆಯಿಂದ ಯಾರಿಗಾದರೂ ನೋವಾಗಿ, ನಾವು ಸಿಕ್ಕಾಗ ಅವರು ಹೇಳಿದರು ಅಂದರೆ ನಾನು ಮತ್ತೆ ಅಂತಹ ವಿಚಾರಗಳಿಗೆ ಅಲರ್ಟ್ ಆಗುತ್ತೇನೆ ಎಂದು ಹೇಳಿದರು.

ನನ್ನ ಪ್ರತಿ ಸಿನಿಮಾದಲ್ಲೂ ಒಂದು ಉದ್ದೇಶ ಇರುತ್ತದೆ. ಸರ್ಕಾರಿ ಶಾಲೆ ಸಿನಿಮಾವನ್ನು ಉದ್ದೇಶ ಪೂರ್ವಕವಾಗಿಯೇ ಮಾಡಿದ್ದು. ಕನ್ನಡ ಶಾಲೆಗಳು ಮುಚ್ಚುತ್ತಿರುವ ಬಗ್ಗೆ ಗಮನ ಹರಿಸಬೇಕು ನಾವು. ಜೊತೆಗೆ ಅದನ್ನು ಎಂಜಾಯ್ ಮಾಡುವ ತರ ಪ್ಯಾಕೇಜ್ ಮಾಡಿ ಜನರಿಗೆ ಕೊಡಬೇಕು ಎನ್ನುವುದು ನನಗೆ ಇತ್ತು. ಅವಾಗ ಮಾತ್ರ ಆ ಸಿನಿಮಾ ಜನಪ್ರಿಯವಾಗಿ ಜನರಿಗೆ ತಲುಪಲು ಸಾಧ್ಯ ಎನ್ನುವುದು ನನ್ನ ನಂಬಿಕೆ. ಜನ ಅದನ್ನು ಸುಳ್ಳು ಮಾಡಿಲ್ಲ. ಹೀಗಾಗಿ ಇಂತಹ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
-
Anusha Rai: ಬಿಗ್ಬಾಸ್ ಬೆಡಗಿ ಅನುಷಾ ರೈ ಮನೆಗೆ ಬಂತು ಐಷಾರಾಮಿ ಫಾರ್ಚೂನರ್ ಕಾರು, ಫೋಟೋಸ್ ಇಲ್ಲಿವೆ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
Chandan Shetty: ವಯಸ್ಸಾದ್ಮೇಲೆ ಒಂಟಿತನ ಕಾಡುತ್ತೆ, ಆಗ ಕೊರಗುವ ಬದಲು ಈಗಲೇ ಒಳ್ಳೆಯ ಸಂಗಾತಿ ಹುಡುಕುವೆ: ಚಂದನ್ ಶೆಟ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications