ಚಂದನ್ ಶೆಟ್ಟಿ ಬಗ್ಗೆ ಶ್ರೇಯಾಂಕಾ ಪಾಟೀಲ್ ಮಾತು..
ಚಂದನ್ ಶೆಟ್ಟಿ & ನಿವೇದಿತಾ ಗೌಡ ತಮ್ಮ ಡಿವೋರ್ಸ್ ವಿಚಾರ ಹೇಳಿ ಸಂಚಲನ ಸೃಷ್ಟಿಸಿದ್ದಾರೆ. ಹೀಗಿದ್ದಾಗಲೇ ಆರ್ಸಿಬಿ ಆಟಗಾರ್ತಿ & ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ಲೆಜೆಂಡ್, ಶ್ರೇಯಾಂಕಾ ಪಾಟೀಲ್ ಅವರು ಚಂದನ್ ಶೆಟ್ಟಿ ಬಗ್ಗೆ ನೀಡಿರುವ ಹೇಳಿಕೆ ವೈರಲ್ ಆಗ್ತಿದೆ. ಹಾಗಾದ್ರೆ ಶ್ರೇಯಾಂಕಾ ಪಾಟೀಲ್ ಅವರು ಚಂದನ್ ಶೆಟ್ಟಿ ಬಗ್ಗೆ ಹೇಳಿದ್ದೇನು? ಆ ಕುರಿತು ಮಾಹಿತಿಗೆ ಮುಂದೆ ಓದಿ.
ಅಷ್ಟಕ್ಕೂ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್ಬಾಸ್ ಸೀಸನ್ 5ನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಅದರಲ್ಲೂ ಬಿಗ್ಬಾಸ್ ಮನೆಯಲ್ಲಿ ಇಬ್ಬರು ಸಿಕ್ಕಾಪಟ್ಟೆ ಸೌಂಡ್ ಮಾಡ್ತಾ ಮದುವೆ ಕೂಡ ಆಗಿದ್ದರು. ರಿಯಾಲಿಟಿ ಶೋನಿಂದಲೇ ಪ್ರೀತಿ ಶುರುವಾಗಿತ್ತು. 2019-ಮೈಸೂರು ಯುವ ದಸರಾ ವೇದಿಕೆಯ ಮೇಲೆಯೇ ಚಂದನ್ ಶೆಟ್ಟಿ ಅವರು, ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ್ದರು.

ಆಗ ಇದು ವಿವಾದಕ್ಕೆ ಕಾರಣವಾಗಿ ಅಲ್ಲದೆ ಆಗ ಸರ್ಕಾರ ಇವರ ಮೇಲೆ ನಿಷೇಧ ಕೂಡ ಹೇರಿತ್ತು. ಈ ರೀತಿ ವಿವಾದ ಮಾಡಿಕೊಂಡಿದ್ದ ಚಂದನ್ ಶೆಟ್ಟಿ ಭಾರಿ ನಂತರ ಹೆಸರು ಮಾಡಿದ್ದರು. ಈಗ ಅವರು ವಿಚ್ಛೇದನ ಪಡೆದಿದ್ದು, ಈ ಸಮಯದಲ್ಲಿ ಶ್ರೇಯಾಂಕಾ ಪಾಟೀಲ್ ಅವರು ಚಂದನ್ ಬಗ್ಗೆ ನೀಡಿದ ಹೇಳಿಕೆ ವೈರಲ್ ಆಗ್ತಿದೆ. ಹಾಗಾದ್ರೆ ಶ್ರೇಯಾಂಕಾ ಪಾಟೀಲ್ ಅವರು ಇದೀಗ ಚಂದನ್ ಶೆಟ್ಟಿ ಬಗ್ಗೆ ಹೇಳಿರುವುದು ಏನು? ಮುಂದೆ ಓದಿ.
ಚಂದನ್ ಶೆಟ್ಟಿ ಬಗ್ಗೆ ಶ್ರೇಯಾಂಕಾ..
ಅಂದಹಾಗೆ ಚಂದನ್ ಶೆಟ್ಟಿ ಕನ್ನಡದ ಬೆಸ್ಟ್ ರ್ಯಾಪ್ ಸಿಂಗರ್ ಎನ್ನಬಹುದು. ಯಾಕಂದ್ರೆ ಚಂದನ್ ಮಾಡಿರುವ ಹಾಡುಗಳು ಇಂದಿಗೂ ಎಲ್ಲರ ಮನಸ್ಸು ಗೆಲ್ಲುತ್ತವೆ. ಅದೇ ರೀತಿಯಾಗಿ ಇದೀಗ ಚಂದನ್ ಶೆಟ್ಟಿ ಅವರ ಒಂದು ಹಾಡಿಗೆ ಡಾನ್ಸ್ ಮಾಡಿರುವ ಶ್ರೇಯಾಂಕಾ ಪಾಟೀಲ್ ಅವರು, ತಮ್ಮ ಮನಸ್ಸಿನ ಭಾವನೆ ಹಂಚಿಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ಡಾನ್ಸ್ ಮಾಡಿ ಪೋಸ್ಟ್ ಹಾಕಿದ್ದಾರೆ ಆರ್ಸಿಬಿ ಕ್ರಿಕೆಟ್ ತಂಡದ ಆಟಗಾರ್ತಿ ಆಗಿರುವ ಶ್ರೇಯಾಂಕಾ ಪಾಟೀಲ್ ಅವರು. ಚಂದನ್ ಶೆಟ್ಟಿ ಹಾಡನ್ನು ಹೊಗಳಿದ್ದಾರೆ.
ಪ್ರೀತಿಯ ಮದುವೆ ಮುರಿದಿದ್ದು ಹೇಗೆ?
ಚಂದನ್ ಶೆಟ್ಟಿ & ನಿವೇದಿತಾ ಇಬ್ಬರೂ ಒಬ್ಬರನ್ನ ಮತ್ತೊಬ್ಬರು ತುಂಬಾ ಇಷ್ಟಪಟ್ಟು ಮದುವೆ ಆಗಿದ್ದರು. ಈ ಇಬ್ಬರ ಪ್ರೀತಿ ಕೋಟಿ ಕೋಟಿ ಜನರ ಹೊಟ್ಟೆ ಉರಿಸಿತ್ತು ಕೂಡ ಆದ್ರೆ ಈಗ ಆಗಿದ್ದು ಉಲ್ಟಾ. ಅದು ಏನಂದ್ರೆ ಇಬ್ಬರು ದೂರವಾಗಲು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕೆ ಚಂದನ್ ಶೆಟ್ಟಿ & ನಿವೇದಿತಾ ವಿಚ್ಛೇದನ ಅಂದ್ರೆ ತಮ್ಮ ಮದುವೆ ಬಂಧನ ಮುರಿಯಲು ಮುಂದಾಗಿದ್ದಾರೆ. ಹೀಗಿದ್ದಾಗಲೇ ಅವರ ಅಭಿಮಾನಿಗಳು ಮಾತ್ರ ಈ ಇಬ್ಬರೂ ಮತ್ತೆ ಒಂದಾಗುತ್ತಾರೆ ಅಂತಿದ್ದಾರೆ.
ಚಂದನ್ ಶೆಟ್ಟಿ & ನಿವೇದಿತಾ ಗೌಡ ಅವರ ಡಿವೋರ್ಸ್ ವಿಚಾರ ಈಗ ಎಲ್ಲೆಲ್ಲೂ ಸದ್ದು ಮಾಡಿ, ಸುದ್ದಿಯಾಗುತ್ತಿದೆ. ಇದಕ್ಕೆಲ್ಲಾ ಕಾರಣ ಈ ಜೋಡಿ ಮದುವೆ ಆಗಿದ್ದ ರೀತಿ. ಕರ್ನಾಟಕವೇ ತಿರುಗಿ ನೋಡುವಂತೆ ಪ್ರಪೋಸ್ ಮಾಡಿದ್ದ ಚಂದನ್ ಶೆಟ್ಟಿ, ನಿವೇದಿತಾ ಗೌಡ ಮನಸ್ಸು ಗೆದ್ದು ಮದುವೆ ಆಗಿದ್ದರು. ಆದರೆ ಹೀಗೆ ಮದುವೆ ಆಗೋದಕ್ಕೆ ಮೊದಲು ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಅವರನ್ನ ತಂಗಿ.. ತಂಗಿ.. ಅಂತಾ ಕರೆದಿದ್ದರು ಗೊತ್ತಾ?
ತಂಗಿ ಅಂತಾ ಕರೆದಿದ್ದರು ಚಂದನ್!
ಹೌದು, ಬಿಗ್ಬಾಸ್ ಮನೆಯಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರೂ ಸ್ಪರ್ಧೆ ಮಾಡಿದ್ದರು. ಈ ವೇಳೆ ಇಬ್ಬರು ತುಂಬಾ ಕ್ಲೋಸ್ ಆಗಿದ್ದರು. ಆಗ ಅದೇ ಬಿಗ್ಬಾಸ್ ಮನೆ ಒಳಗೆ ಮತ್ತೊಬ್ಬರು ಸ್ಪರ್ಧಿ ಜೊತೆಗೆ ಮಾತನಾಡುವಾಗ, ಸ್ವತಃ ಇದೇ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಬಗ್ಗೆ ಮಾತನಾಡಿದ್ದರು. ಆಗ ನಾನು ಮತ್ತು ನಿವೇದಿತಾ, ಶಿವರಾಜ್ಕುಮಾರ್ ಹಾಗೂ ರಾಧಿಕಾ ಅವರ ರೀತಿ ಎಂದಿದ್ದರು.
ಆಗ ಈ ಮಾತು ಕೇಳಿದ್ದ ಮತ್ತೊಬ್ಬ ಬಿಗ್ಬಾಸ್ ಸ್ಪರ್ಧಿ, ಅಣ್ಣ & ತಂಗಿನಾ? ಎಂದು ಮರು ಪ್ರಶ್ನೆ ಮಾಡಿದ್ದರು. ಹೌದು ಎಂದು ಚಂದನ್ ಕೂಡ ಉತ್ತರ ನೀಡಿದ್ದರು. ಆದ್ರೆ ಆ ನಂತರ ನಿವೇದಿತಾ ಗೌಡ ಜೊತೆಗೆ ಮದುವೆ ಆಗಿದ್ದರು ಚಂದನ್. ಇದೀಗ ಈ ವಿಡಿಯೋ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಹಲ್ಚಲ್ ಎಬ್ಬಿಸಿದೆ. ಹಾಗೇ ಜನ ಕೂಡ ಚರ್ಚಿಸುತ್ತಿದ್ದಾರೆ.
-
Chandan Shetty: ವಯಸ್ಸಾದ್ಮೇಲೆ ಒಂಟಿತನ ಕಾಡುತ್ತೆ, ಆಗ ಕೊರಗುವ ಬದಲು ಈಗಲೇ ಒಳ್ಳೆಯ ಸಂಗಾತಿ ಹುಡುಕುವೆ: ಚಂದನ್ ಶೆಟ್ಟಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications