ಕುಡಿದ ಮತ್ತಿನಲ್ಲಿ ರಂಪಾಟ: 'ಜೈಲರ್' ಸಿನಿಮಾ ನಟ ವಿನಾಯಗನ್ ಬಂಧನ
ಕುಡಿದ ಅಮಲಿನಲ್ಲಿ ರಂಪಾಟ ಮಾಡಿದ 'ಜೈಲರ್' ಸಿನಿಮಾ ನಟ ವಿನಾಯಗನ್ ಅವರನ್ನು ಕೇರಳದ ಕೊಚ್ಚಿಯಲ್ಲಿ ಪಲೀಸರು ಬಂಧಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜೈಲರ್ ಸಿನಿಮಾದಲ್ಲಿ ವಿಲನ್ ವರ್ಮಾ ಪಾತ್ರಧಾರಿಯಾಗಿದ್ದ ವಿನಾಯಗನ್, ನಿಜ ಜೀವನದಲ್ಲಿಯೂ ವಿಲನ್ ಪ್ರವೃತ್ತಿ ತೋರಿಸಿದ್ದಾರೆ.
ನಟ ವಿನಾಯಗನ್ ತಮ್ಮ ಅಪಾರ್ಟ್ಮೆಂಟ್ನಲ್ಲಿ ಕುಡಿದು ಗಲಾಟೆ ಮಾಡಿದ ಹಿನ್ನೆಲೆ ಆತನ ವಿರುದ್ಧ ನಿವಾಸಿಗಳಿಂದ ದೂರು ದಾಖಲಾಗಿತ್ತು. ದೂರಿನ ವಿಚಾರಣೆ ಕೈಗೆತ್ತಿಕೊಂಡ ಪೊಲೀಸರು ಆತನನ್ನು ಎರ್ನಾಕುಲಂ ಟೌನ್ ನಾರ್ತ್ ಪೊಲೀಸ್ ಠಾಣೆಗೆ ಕರೆದಿದ್ದರು. ವಿಚಾರಣೆಗಾಗಿ ಬಂದ ಅವರು ಠಾಣೆಯಲ್ಲೂ ತಮ್ಮ ವರಸೆ ತೆಗೆದಿದ್ದಾರೆ. ಕೂಗಾಡಿ ಗೊಂದಲ ಸೃಷ್ಟಿ ಮಾಡಿದ್ದಾರೆ. ಹೀಗಾಗಿ ಅಕ್ಟೋಬರ್ 24ರಂದು ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಬಂಧನದ ಬಳಿಕ ಅವರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸಿರುವ ವಿನಾಯಕನ್ ಟಿಕೆ ಜೈಲರ್ ಸಿನಿಮಾದಲ್ಲಿ ವಿಚಿತ್ರ ವಿಲನ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಸೈ ಎಸಿನಿಕೊಂಡಿದ್ದರು.
ಇವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ದುಲ್ಕರ್ ಸಲ್ಮಾನ್ ಜೊತೆಗೆ ನಟಿಸಿದ್ದ 'ಕಪಾಟಿಪದಂ'ಸಿನಿಮಾ ವಿನಾಯಗನ್ಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು. ಅದಾದ ಬಳಿಕ ಹಲವು ಸಿನಿಮಾಗಳಲ್ಲಿ ವಿನಾಯಗನ್ ನಟಿಸಿದ್ದಾರೆ.
ಮಾತ್ರವಲ್ಲದೆ ಬಿಗುಗಡೆಗೆ ಸಜ್ಜಾಗಿರುವ 'ಧ್ರುವ ನಚ್ಚತ್ತಿರಂ' ಸಿನಿಮಾದಲ್ಲಿಯೂ ಅವರು ನಟಿಸಿದ್ದಾರೆ. ಸೈಡ್ ಡ್ಯಾನ್ಸರ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಇವರು ಕಂಪೋಸರ್ ಕೂಡ ಹೌದು.
-
ಕೇರಳ ವಿಧಾನಸಭೆ ಚುನಾವಣೆಗೆ 55 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ | Kerala Assembly Elections 2026 -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Tea: ಟೀ ವಿಚಾರಕ್ಕೆ ಅತ್ತೆ - ಸೊಸೆ ಜಗಳ: ಸಣ್ಣ ಮಕ್ಕಳ ಮುಂದೆಯೇ ಸೊಸೆ ಕೊಂದ ಅತ್ತೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications