'ಜನ ನಾಯಗನ್' ಬಿಡುಗಡೆಗೆ ವಿಘ್ನ: ಕ್ಷಮೆಯಾಚಿಸಿ ಅಸಲಿ ವಿಚಾರ ತಿಳಿಸಿದ ನಿರ್ಮಾಪಕ
ನಟ ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರವಾದ ಜನ ನಾಯಗನ್ ಬಿಡುಗಡೆಗೆ ಪದೇ ಪದೇ ಅಡ್ಡಿ ಆತಂಕಗಳು ಎದುರಾಗುತ್ತಲೇ ಇವೆ. ಸದ್ಯ ಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಇದು ಮುಗಿಯುವವರೆಗೆ ಸಿನಿಮಾ ಬಿಡುಗಡೆಯ ಭಾಗ್ಯವಿಲ್ಲ. ಈ ಬಗ್ಗೆ ಕೆವಿಎನ್ ಪ್ರೊಡಕ್ಷನ್ಸ್ನ ಜನ ನಾಯಗನ್ ನಿರ್ಮಾಪಕ ವೆಂಕಟ್ ಕೆ.ನಾರಾಯಣ ಅವರು ಅಂತಿಮವಾಗಿ ವಿಡಿಯೋ ಮೂಲಕ ಮಾತನಾಡಿದ್ದಾರೆ. ಸಿನಿಮಾ ಬಿಡುಗಡೆ ಯಾವಾಗ ಎಂಬುದನ್ನೂ ತಿಳಿಸಿದ್ದಾರೆ.
ಬಿಡುಗಡೆಗೆ ಕೆಲವೇ ದಿನಗಳ ಮೊದಲು ಜನವರಿ 5ರಂದು, ಒಂದು ದೂರಿನ ಆಧಾರದ ಮೇಲೆ ಚಿತ್ರವನ್ನು ಪರಿಷ್ಕರಣಾ ಸಮಿತಿಗೆ ಕಳಿಸಿರುವುದಾಗಿ ನಮಗೆ ತಿಳಿಸಲಾಯಿತು. ಸಮಯ ಮೀರುತ್ತಿದೆ ಮತ್ತು ದೂರು ನೀಡಿದವರು ಯಾರು ಎಂದು ತಿಳಿದಿರಲಿಲ್ಲ. ದೂರುದಾರರು ಯಾರೆಂದು ತಿಳಿಯದೆ, ನಾವು ಗೌರವಾನ್ವಿತ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದೇವೆ. ಬಿಡುಗಡೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಬೇರೆ ದಾರಿ ಕಾಣಲಿಲ್ಲ. ನಮ್ಮ ಸಿನಿಮಾವನ್ನು ಡಿಸೆಂಬರ್ 18ರಂದು ಸಿಬಿಎಫ್ಸಿಗೆ ಸಲ್ಲಿಸಲಾಯಿತು. ಅದನ್ನು ಪರಿಶೀಲನಾ ಸಮಿತಿಯು ವೀಕ್ಷಿಸಿತು. ಡಿಸೆಂಬರ್ 22ರಂದು ಚಿತ್ರಕ್ಕೆ UA 16+ ಪ್ರಮಾಣಪತ್ರವನ್ನು ನೀಡಲಾಗುವುದು ಎಂದು ತಿಳಿಸುವ ಇಮೇಲ್ ನಮಗೆ ಬಂದಿತು. ಕೆಲವು ಬದಲಾವಣೆಗಳನ್ನು ಸೇರಿಸಿ, ಸಿನಿಮಾ ಸಲ್ಲಿಸಿದೆವು. ಚಿತ್ರವನ್ನು ಪರಿಷ್ಕರಣಾ ಸಮಿತಿಗೆ ಕಳುಹಿಸಲಾಗುವುದು ಎಂದು ಅವರಿಗೆ ತಿಳಿಸಲಾಯಿತು ಎಂದು ವಿವರಿಸಿದ್ದಾರೆ.

ವಿಜಯ್ ಅವರಿಗೆ ಒಳ್ಳೆಯ ವಿದಾಯ ಸಿಗಬೇಕು
ಇಡೀ ಪ್ರಕ್ರಿಯೆಯು ಭಾಗಿಯಾಗಿರುವ ಎಲ್ಲರಿಗೂ ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ದಣಿದಿದೆ ಎಂದು ಅವರು ಬಹಿರಂಗವಾಗಿ ಹೇಳಿದ್ದಾರೆ. ದಶಕಗಳ ಕಾಲ ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲದ ನಂತರ ನಟ ವಿಜಯ್ ಅವರು ಒಂದು ಒಳ್ಳೆಯ ವಿದಾಯಕ್ಕೆ ಅರ್ಹರು ಎಂದಿದ್ದಾರೆ. ಈ ಹಂತವು ತುಂಬಾ ನೋವಿನಿಂದ ಕೂಡಿದೆ. ಈ ಚಿತ್ರಕ್ಕಾಗಿ ತಮ್ಮ ಹೃದಯ, ಆತ್ಮ ಮತ್ತು ವರ್ಷಗಳ ಕಠಿಣ ಪರಿಶ್ರಮವನ್ನು ಸುರಿದ ಪ್ರತಿಯೊಬ್ಬರಿಗೂ ಇದು ಅತ್ಯಂತ ಭಾವನಾತ್ಮಕ ಮತ್ತು ಕಷ್ಟಕರ ಕ್ಷಣವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ದಳಪತಿ ವಿಜಯ್ ಸರ್ ತಮ್ಮ ಅಭಿಮಾನಿಗಳಿಂದ ದಶಕಗಳ ಪ್ರೀತಿಯಿಂದ ಗಳಿಸಿದ ವಿದಾಯಕ್ಕೆ ಅರ್ಹರು ಎಂದು ನಾವು ದೃಢವಾಗಿ ನಂಬುತ್ತೇವೆ ಎಂದಿದ್ದಾರೆ.
ಜನವರಿ 6 ಮತ್ತು 7ರಂದು ನಡೆದ ವಿಚಾರಣೆಯ ನಂತರ ಜನವರಿ 9ರಂದು ಚಿತ್ರಕ್ಕೆ ಅನುಮತಿ ನೀಡುವಂತೆ ಸಿಬಿಎಫ್ಸಿಗೆ ಕೋರ್ಟ್ ನಿರ್ದೇಶನ ನೀಡಿತು. ಆದರೆ ಕೆಲವೇ ಗಂಟೆಗಳಲ್ಲಿ, ವಿಭಾಗೀಯ ಪೀಠವು ಆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು. ಪ್ರಕರಣವನ್ನು ಈಗ ಜನವರಿ 21ಕ್ಕೆ ಮುಂದೂಡಲಾಗಿದೆ. ಜನವರಿ 14ರಂದು ಚಿತ್ರವನ್ನು ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದರು. ಆದರೆ ಅದು ಕೂಡ ಸಾಧ್ಯವಾಗುತ್ತಿಲ್ಲ. ನಮ್ಮ ಜನ ನಾಯಗನ್ ಬಿಡುಗಡೆಯ ಮೇಲೆ ನಂಬಿಕೆ ಇಟ್ಟಿದ್ದ ಅಭಿಮಾನಿಗಳು, ವಿತರಕರು ಮತ್ತು ಪ್ರದರ್ಶಕರಿಗೆ ನಿರ್ಮಾಪಕರಿಗೆ ಕ್ಷಮೆಯಾಚಿಸುತ್ತೇವೆ. ಈ ವಿಷಯವು ನಿಯಂತ್ರಣ ಮೀರಿದೆ ಎಂದಿದ್ದಾರೆ. ಸದ್ಯಕ್ಕೆ ಸಿನಿಮಾ ಬಿಡುಗಡೆ ಇಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications