NTR-Devara: ಸಿನಿಮಾ ಶೂಟಿಂಗ್ ವೇಳೆ ಜಾನ್ವಿ ಕಪೂರ್ ಸೊಂಟಕ್ಕೆ ಕಚ್ಚಿದ ಜೇನುಹುಳುಗಳು...
'ದೇವರ' ಸಿನಿಮಾ ಶೂಟಿಂಗ್ ವೇಳೆ ಜೇನುಹುಳುಗಳು ದಾಳಿ ಮಾಡಿದ ಘಟನೆ ನಡೆದಿದೆ. 'ದೇವರ' ಸಿನಿಮಾ ತಂಡದ ಮೇಲೆ ಜೇನುಹುಳಗಳು ದಾಳಿ ಮಾಡಿದ್ದು ಇದರಿಂದ ಕೆಲವರು ಆಸ್ಪತ್ರೆ ಸೇರಿದ್ದಾರೆಂದು ವರದಿಯಾಗಿದೆ.
ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ಕಪೂರ್ ಅಭಿನಯದ 'ದೇವರ' ಸಿನಿಮಾ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಇದರಲ್ಲಿ ಸೈಫ್ ಅಲಿ ಖಾನ್ ಅವರು ವಿಲನ್ ರೋಲ್ ಮಾಡುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ಸಿದ್ಧವಾಗುತ್ತಿದ್ದು ಈ ಸಿನಿಮಾ ಶೂಟಿಂಗ್ನಲ್ಲಿ ತಂಡ ಬ್ಯೂಸಿ ಆಗಿದೆ.

ಆದರೆ ಸಿನಿಮಾ ಸೂಟಿಂಗ್ ವೇಳೆ ಜೇನುಹುಳುಗಳು ತಂಡದ ಮೇಲೆ ದಾಳಿ ಮಾಡಿರುವ ಸುದ್ದಿ ಸಾಕಷ್ಟು ವೈರಲ್ ಆಗಿದೆ. ಇದರಿಂದ ಚಿತ್ರದ ಶೂಟಿಂಗ್ ಕೆಲ ಹೊತ್ತು ಸ್ಥಗಿತಗೊಳಿಸಲಾಗಿತ್ತು ಎಂದು ತಿಳಿದು ಬಂದಿದೆ. ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ಕಪೂರ್ ಅಭಿನಯದ ಸಿನಿಮಾ ಶೂಟಿಂಗ್ ವೇಳೆ ಜೇನು ಹುಳುಗಳು ದಾಳಿ ಮಾಡಿವೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.
ಜೇನು ಗೂಡಿನ ಮೇಲೆ ಯಾರೋ ಕಿಡಿಗೇಡಿಗಳು ಕಲ್ಲನ್ನು ಎಸೆದಿದ್ದಾರೆ ಎಂದು ಚಿತ್ರ ತಂಡ ಅನುಮಾನಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆನ್ನಲಾಗುತ್ತಿದ್ದು ಯಾರಿಗೂ ಹೆಚ್ಚಿನ ತೊಂದರೆ ಆಗಿಲ್ಲ. ಹಾಗಾದರೆ ಸಿನಿಮಾ ಶೂಟಿಂಗ್ ವೇಳೆ ಯಾರೆಲ್ಲಾ ಇದ್ದರು ಎಂದು ಈಗ ತಿಳಿಯೋಣ.
ಸಿನಿಮಾ ಶೂಟಿಂಗ್ ವೇಳೆ ಯಾರೆಲ್ಲಾ ಇದ್ದರು?
ಯಂಗ್ ಟೈಗರ್ ಎನ್ಟಿಆರ್ ರಾಜಮೌಳಿ ನಿರ್ದೇಶನದ RRR ಚಿತ್ರದಲ್ಲಿ ನಟಿಸಿದ್ದರು. ಪ್ಯಾನ್ ಇಂಡಿಯಾ ರೇಂಜ್ನಲ್ಲು ಸೂಪರ್ ಕ್ರೇಜ್ ಪಡೆದರು. ಆ ಚಿತ್ರದಲ್ಲಿ ಅವರು ಕೊಮುರಂ ಭೀಮ್ ಪಾತ್ರದಲ್ಲಿ ನಟಿಸಿದ್ದರು.

RRR ನಂತರ NTR ಸದ್ಯ ದೇವರ ಸಿನಿಮಾ ಮಾಡುತ್ತಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾದಲ್ಲಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಅನಿರುದ್ಧ ರವಿಚಂದ್ರ ಸಂಗೀತ ನೀಡಿದ್ದಾರೆ.
ಈ ಚಿತ್ರವು ಅಕ್ಟೋಬರ್ 10, 2024 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಅನೌನ್ಸ್ ಮಾಡಲಾಗಿದೆ.
ಯುವ ಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ ಬ್ಯಾನರ್ನಡಿಯಲ್ಲಿ ಸುಧಾಕರ್ ಮಿಕ್ಕಿಲಿನೇನಿ, ಕೆ.ಹರಿಕೃಷ್ಣ ಮತ್ತು ನಂದಮೂರಿ ಕಲ್ಯಾಣ್ ರಾಮ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದರೆ ವಿಲನ್ ಪಾತ್ರದಲ್ಲಿ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ.

ಏಪ್ರಿಲ್ 5ಕ್ಕೆ ರಿಲೀಸ್ ಆಗಬೇಕಿದ್ದ 'ದೇವರ' ಸಿನಿಮಾ
ಆಗಸ್ಟ್ 15ಕ್ಕೆ ಪುಷ್ಪ 2 ಚಿತ್ರ ಬಿಡುಗಡೆಯಾಗದೇ ಇದ್ದರೆ ಅದೇ ದಿನಾಂಕಕ್ಕೆ ಈ ಸಿನಿಮಾ ಬಿಡುಗಡೆಯಾಗ್ತಿತ್ತು ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಸಿನಿಮಾದ ಓವರ್ ಸೀಸ್ ಡೀಲ್ ಕ್ಲೋಸ್ ಆಗಿದೆ.
ದೇವರ ಸಿನಿಮಾದ ಓವರ್ ಸೀಸ್ ರೈಟ್ಸ್ 27 ಕೋಟಿಗೆ ಕ್ಲೋಸ್ ಆಗಿದ್ದು ದಿಲ್ ರಾಜು ಈ ಸಿನಿಮಾ ರೈಟ್ಸ್ಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ ದಿಲ್ ರಾಜು ಡೀಲ್ ಕ್ಲೋಸ್ ಮಾಡಿದ್ದಾರೆ ಎಂಬ ಮಾತು ಬಹುತೇಕ ಕೇಳಿಬರುತ್ತಿದೆ.
ಈ ಸಿನಿಮಾ ಏಪ್ರಿಲ್ 5ಕ್ಕೆ ರಿಲೀಸ್ ಆಗುತ್ತೆ ಅಂತ ಹೇಳಲಾಗಿತ್ತು. ಆದರೆ ಈ ಚಿತ್ರಕ್ಕೆ ಸಂಬಂಧಿಸಿದ ಗ್ರಾಫಿಕ್ಸ್ ಕೆಲಸಗಳು ಬಾಕಿ ಉಳಿದಿವೆ. ಸರಿಯಾದ ಔಟ್ಫುಟ್ ಪಡೆಯಲು ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಇನ್ನೊಂದು ಮುಖ್ಯ ವಿಚಾರ ಏನೆಂದರೆ ಎಪಿಯಲ್ಲಿ ಏಪ್ರಿಲ್ ತಿಂಗಳ ಚುನಾವಣೆಯ ಹಿನ್ನಲೆಯಲ್ಲಿ ಆ ವೇಳೆಗೆ ದೇವರನ್ನು ರಿಲೀಸ್ ಮಾಡಿದರೆ ದೊಡ್ಡ್ ಮಟ್ಟದಲ್ಲಿ ವರ್ಕೌಟ್ ಆಗುವ ಸಾಧ್ಯತೆ ಇಲ್ಲ ಎಂಬುದು ಚಿತ್ರತಂಡದ ಭಾವನೆ.
ಜಾನ್ವಿ ಕಪೂರ್ ಸೊಂಟಕ್ಕೆ ಕಚ್ಚಿದ ಜೇನುಹುಳುಗಳು
'ದೇವರ' ಸಿನಿಮಾ ಶೂಟಿಂಗ್ ವೇಳೆ ಜೇನುಹುಳುಗಳು ದಾಳಿ ಮಾಡಿದ್ದು ಜಾನ್ವಿ ಕಪೂರ್ ಸೊಂಟಕ್ಕೆ ಕಚ್ಚಿವೆ ಎಂಬ ಸುದ್ದಿ ವೈರಲ್ ಆಗುತ್ತಿದೆ. ಆದರೆ ಶೂಟಿಂಗ್ ವೇಳೆ ಜೇನುಹುಳುಗಳು ದಾಳಿ ಮಾಡಿದ್ದು ನಿಜವಾದರೂ ಜಾನ್ವಿ ಕಪೂರ್ಗೆ ಕಚ್ಚಿಲ್ಲ.
ತಂಡದ ಕೆಲ ಸದಸ್ಯರಿಗೆ ಮಾತ್ರ ಜೇನುಹುಳುಗಳು ಕಚ್ಚಿವೆ. ಈ ಸಮಯದಲ್ಲಿ ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ಕಪೂರ್ ಇರಲೇ ಇಲ್ಲ. ಇದರಿಂದ ಎನ್ಟಿಆರ್ ಹಾಗೂ ಜಾನ್ವಿ ಕಪೂರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಅದಾಗ್ಯೂ ಕೆಲವೆಡೆ ಜಾನ್ವಿ ಅವರಿಗೆ ಜೇನುಹುಳುಗಳು ಕಚ್ಚಿವೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications