NTR-Devara: ಸಿನಿಮಾ ಶೂಟಿಂಗ್ ವೇಳೆ ಜಾನ್ವಿ ಕಪೂರ್ ಸೊಂಟಕ್ಕೆ ಕಚ್ಚಿದ ಜೇನುಹುಳುಗಳು...
'ದೇವರ' ಸಿನಿಮಾ ಶೂಟಿಂಗ್ ವೇಳೆ ಜೇನುಹುಳುಗಳು ದಾಳಿ ಮಾಡಿದ ಘಟನೆ ನಡೆದಿದೆ. 'ದೇವರ' ಸಿನಿಮಾ ತಂಡದ ಮೇಲೆ ಜೇನುಹುಳಗಳು ದಾಳಿ ಮಾಡಿದ್ದು ಇದರಿಂದ ಕೆಲವರು ಆಸ್ಪತ್ರೆ ಸೇರಿದ್ದಾರೆಂದು ವರದಿಯಾಗಿದೆ.
ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ಕಪೂರ್ ಅಭಿನಯದ 'ದೇವರ' ಸಿನಿಮಾ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಇದರಲ್ಲಿ ಸೈಫ್ ಅಲಿ ಖಾನ್ ಅವರು ವಿಲನ್ ರೋಲ್ ಮಾಡುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ಸಿದ್ಧವಾಗುತ್ತಿದ್ದು ಈ ಸಿನಿಮಾ ಶೂಟಿಂಗ್ನಲ್ಲಿ ತಂಡ ಬ್ಯೂಸಿ ಆಗಿದೆ.

ಆದರೆ ಸಿನಿಮಾ ಸೂಟಿಂಗ್ ವೇಳೆ ಜೇನುಹುಳುಗಳು ತಂಡದ ಮೇಲೆ ದಾಳಿ ಮಾಡಿರುವ ಸುದ್ದಿ ಸಾಕಷ್ಟು ವೈರಲ್ ಆಗಿದೆ. ಇದರಿಂದ ಚಿತ್ರದ ಶೂಟಿಂಗ್ ಕೆಲ ಹೊತ್ತು ಸ್ಥಗಿತಗೊಳಿಸಲಾಗಿತ್ತು ಎಂದು ತಿಳಿದು ಬಂದಿದೆ. ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ಕಪೂರ್ ಅಭಿನಯದ ಸಿನಿಮಾ ಶೂಟಿಂಗ್ ವೇಳೆ ಜೇನು ಹುಳುಗಳು ದಾಳಿ ಮಾಡಿವೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.
ಜೇನು ಗೂಡಿನ ಮೇಲೆ ಯಾರೋ ಕಿಡಿಗೇಡಿಗಳು ಕಲ್ಲನ್ನು ಎಸೆದಿದ್ದಾರೆ ಎಂದು ಚಿತ್ರ ತಂಡ ಅನುಮಾನಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆನ್ನಲಾಗುತ್ತಿದ್ದು ಯಾರಿಗೂ ಹೆಚ್ಚಿನ ತೊಂದರೆ ಆಗಿಲ್ಲ. ಹಾಗಾದರೆ ಸಿನಿಮಾ ಶೂಟಿಂಗ್ ವೇಳೆ ಯಾರೆಲ್ಲಾ ಇದ್ದರು ಎಂದು ಈಗ ತಿಳಿಯೋಣ.
ಸಿನಿಮಾ ಶೂಟಿಂಗ್ ವೇಳೆ ಯಾರೆಲ್ಲಾ ಇದ್ದರು?
ಯಂಗ್ ಟೈಗರ್ ಎನ್ಟಿಆರ್ ರಾಜಮೌಳಿ ನಿರ್ದೇಶನದ RRR ಚಿತ್ರದಲ್ಲಿ ನಟಿಸಿದ್ದರು. ಪ್ಯಾನ್ ಇಂಡಿಯಾ ರೇಂಜ್ನಲ್ಲು ಸೂಪರ್ ಕ್ರೇಜ್ ಪಡೆದರು. ಆ ಚಿತ್ರದಲ್ಲಿ ಅವರು ಕೊಮುರಂ ಭೀಮ್ ಪಾತ್ರದಲ್ಲಿ ನಟಿಸಿದ್ದರು.

RRR ನಂತರ NTR ಸದ್ಯ ದೇವರ ಸಿನಿಮಾ ಮಾಡುತ್ತಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾದಲ್ಲಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಅನಿರುದ್ಧ ರವಿಚಂದ್ರ ಸಂಗೀತ ನೀಡಿದ್ದಾರೆ.
ಈ ಚಿತ್ರವು ಅಕ್ಟೋಬರ್ 10, 2024 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಅನೌನ್ಸ್ ಮಾಡಲಾಗಿದೆ.
ಯುವ ಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ ಬ್ಯಾನರ್ನಡಿಯಲ್ಲಿ ಸುಧಾಕರ್ ಮಿಕ್ಕಿಲಿನೇನಿ, ಕೆ.ಹರಿಕೃಷ್ಣ ಮತ್ತು ನಂದಮೂರಿ ಕಲ್ಯಾಣ್ ರಾಮ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದರೆ ವಿಲನ್ ಪಾತ್ರದಲ್ಲಿ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ.

ಏಪ್ರಿಲ್ 5ಕ್ಕೆ ರಿಲೀಸ್ ಆಗಬೇಕಿದ್ದ 'ದೇವರ' ಸಿನಿಮಾ
ಆಗಸ್ಟ್ 15ಕ್ಕೆ ಪುಷ್ಪ 2 ಚಿತ್ರ ಬಿಡುಗಡೆಯಾಗದೇ ಇದ್ದರೆ ಅದೇ ದಿನಾಂಕಕ್ಕೆ ಈ ಸಿನಿಮಾ ಬಿಡುಗಡೆಯಾಗ್ತಿತ್ತು ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಸಿನಿಮಾದ ಓವರ್ ಸೀಸ್ ಡೀಲ್ ಕ್ಲೋಸ್ ಆಗಿದೆ.
ದೇವರ ಸಿನಿಮಾದ ಓವರ್ ಸೀಸ್ ರೈಟ್ಸ್ 27 ಕೋಟಿಗೆ ಕ್ಲೋಸ್ ಆಗಿದ್ದು ದಿಲ್ ರಾಜು ಈ ಸಿನಿಮಾ ರೈಟ್ಸ್ಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ ದಿಲ್ ರಾಜು ಡೀಲ್ ಕ್ಲೋಸ್ ಮಾಡಿದ್ದಾರೆ ಎಂಬ ಮಾತು ಬಹುತೇಕ ಕೇಳಿಬರುತ್ತಿದೆ.
ಈ ಸಿನಿಮಾ ಏಪ್ರಿಲ್ 5ಕ್ಕೆ ರಿಲೀಸ್ ಆಗುತ್ತೆ ಅಂತ ಹೇಳಲಾಗಿತ್ತು. ಆದರೆ ಈ ಚಿತ್ರಕ್ಕೆ ಸಂಬಂಧಿಸಿದ ಗ್ರಾಫಿಕ್ಸ್ ಕೆಲಸಗಳು ಬಾಕಿ ಉಳಿದಿವೆ. ಸರಿಯಾದ ಔಟ್ಫುಟ್ ಪಡೆಯಲು ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಇನ್ನೊಂದು ಮುಖ್ಯ ವಿಚಾರ ಏನೆಂದರೆ ಎಪಿಯಲ್ಲಿ ಏಪ್ರಿಲ್ ತಿಂಗಳ ಚುನಾವಣೆಯ ಹಿನ್ನಲೆಯಲ್ಲಿ ಆ ವೇಳೆಗೆ ದೇವರನ್ನು ರಿಲೀಸ್ ಮಾಡಿದರೆ ದೊಡ್ಡ್ ಮಟ್ಟದಲ್ಲಿ ವರ್ಕೌಟ್ ಆಗುವ ಸಾಧ್ಯತೆ ಇಲ್ಲ ಎಂಬುದು ಚಿತ್ರತಂಡದ ಭಾವನೆ.
ಜಾನ್ವಿ ಕಪೂರ್ ಸೊಂಟಕ್ಕೆ ಕಚ್ಚಿದ ಜೇನುಹುಳುಗಳು
'ದೇವರ' ಸಿನಿಮಾ ಶೂಟಿಂಗ್ ವೇಳೆ ಜೇನುಹುಳುಗಳು ದಾಳಿ ಮಾಡಿದ್ದು ಜಾನ್ವಿ ಕಪೂರ್ ಸೊಂಟಕ್ಕೆ ಕಚ್ಚಿವೆ ಎಂಬ ಸುದ್ದಿ ವೈರಲ್ ಆಗುತ್ತಿದೆ. ಆದರೆ ಶೂಟಿಂಗ್ ವೇಳೆ ಜೇನುಹುಳುಗಳು ದಾಳಿ ಮಾಡಿದ್ದು ನಿಜವಾದರೂ ಜಾನ್ವಿ ಕಪೂರ್ಗೆ ಕಚ್ಚಿಲ್ಲ.
ತಂಡದ ಕೆಲ ಸದಸ್ಯರಿಗೆ ಮಾತ್ರ ಜೇನುಹುಳುಗಳು ಕಚ್ಚಿವೆ. ಈ ಸಮಯದಲ್ಲಿ ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ಕಪೂರ್ ಇರಲೇ ಇಲ್ಲ. ಇದರಿಂದ ಎನ್ಟಿಆರ್ ಹಾಗೂ ಜಾನ್ವಿ ಕಪೂರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಅದಾಗ್ಯೂ ಕೆಲವೆಡೆ ಜಾನ್ವಿ ಅವರಿಗೆ ಜೇನುಹುಳುಗಳು ಕಚ್ಚಿವೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications