ನಟ ಜ್ಯೂ.ಎನ್ಟಿಆರ್ ಆರೋಗ್ಯದಲ್ಲಿ ಏರುಪೇರು, ವಿಡಿಯೋ ವೈರಲ್
ಟಾಲಿವುಡ್ ನಟ ಜ್ಯೂನಿಯರ್ ಎನ್.ಟಿ.ಆರ್ (ತಾರಕ್) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ನಟ ಇತ್ತೀಚೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಕಳೆದ ಕೆಲವು ದಿನಗಳ ಹಿಂದೆ ಒಂದು ಜಾಹಿರಾತು ಶೂಟ್ ವೇಳೆ ಈ ಅವಘಡ ಸಂಭವಿಸಿತ್ತು. ಇದರಿಂದ ಅವರು ಹೆಚ್ಚಿನ ಹೊತ್ತು ನಿಲ್ಲಲು ಹಾಗೂ ಮಾತನಾಡಲು ಕೂಡ ಸಮಸ್ಯೆ ಎದುರಿಸುತ್ತಿದ್ದಾರೆ. ದೇಹದಲ್ಲಿ ಗಂಭೀರ ಗಾಯಗೊಂಡು ತೀವ್ರ ನೋವಿನಿಂದ ಒದ್ದಾಡುತ್ತಿದ್ದಾರೆ ಎಂದು ವರದಿಯಾಗಿದೆ.
ಜೂನಿಯರ್ ಎನ್ಟಿಆರ್ ಅವರು ಚಿತ್ರೀಕರಣದ ಸಮಯದಲ್ಲಿ ಗಾಯಗೊಂಡಿದ್ದನ್ನು ಕೇಳಿ ಅವರ ಅಭಿಮಾನಿಗಳ ಆಘಾತಕ್ಕೆ ಒಳಗಾಗಿದ್ದರು. ಆದರೆ ಯಾವುದೇ ಅಪಾಯವಿಲ್ಲ ಎಂದು ಅವರ ತಂಡ ಸ್ಪಷ್ಟಪಡಿಸಿತ್ತು. ಇದಾದ ಬಳಿಕ ನಟ ಕೆಲ ದಿನಗಳಿಂದ ವಿಶ್ರಾಂತಿಯಲ್ಲೇ ಇದ್ದರು. ಕಾರ್ಯಕ್ರಮಗಳಿಂದಲೂ ದೂರ ಉಳಿದಿದ್ದರು. ರಿಷಬ್ಗಾಗಿ ಅವರು ನೋವಿನ ನಡುವೆಯೂ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಹೈದರಾಬಾದ್ನಲ್ಲಿ ನಡೆದ ರಿಷಬ್ ಶೆಟ್ಟಿ ಅವರ 'ಕಾಂತಾರ: ಚಾಪ್ಟರ್ 1' ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ತಾರಕ್ ತನ್ನ ಗಾಯದ ನೋವಿನ ನಡುವೆಯೂ ಹಾಜರಾಗಿ ಗೆಳೆಯನ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಜಾಹಿರಾತು ಚಿತ್ರೀಕರಣ ವೇಳೆಯಲ್ಲಿ ಗಾಯಗೊಂಡಿದ್ದರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ವೇದಿಕೆ ಮೇಲೆ ಕುಳಿತುಕೊಳ್ಳುವಾಗ ಸ್ವಲ್ಪ ಕಷ್ಟಪಟ್ಟಿದ್ದಾರೆ. ಕಾರ್ಯಕ್ರಮದ ವೇದಿಕೆ ಎನ್ಟಿಆರ್ ಅಭಿಮಾನಿ ದಿಢೀರ್ ಬಂದಾಗ ತಮ್ಮ ಗಾಯದ ಮೇಲೆ ಕೈಇಟ್ಟುಕೊಂಡು ತಾರಕ್ ಸುಮ್ಮನಾದರು. ಬಳಿಕ ಎನ್.ಟಿ.ಆರ್ ತಮ್ಮ ಮನೆಗೆ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಅವರನ್ನು ಡಿನ್ನರ್ಗೆ ಆಹ್ವಾನಿಸಿದ್ದರು.
ವೈರಲ್ ವಿಡಿಯೋದಲ್ಲಿ ಏನಿದೆ?
ಭಾನುವಾರ ಸಂಜೆ ಹೈದರಾಬಾದ್ನಲ್ಲಿ ನಡೆದ ಕಾಂತಾರ ಪ್ರಚಾರ ಕಾರ್ಯಕ್ರಮದಲ್ಲಿ ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಭಾಗವಹಿಸಿ ರಿಷಬ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಅವರನ್ನು ಬೆಂಬಲಿಸಿದರು. ಹತ್ತು ದಿನಗಳ ಹಿಂದೆಯಷ್ಟೇ ಗಾಯಗೊಂಡಿರುವ ಅವರು ಈ ಕಾರ್ಯಕ್ರಮದಲ್ಲಿ ನಿರಂತರ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅಭಿಮಾನಿಯೊಬ್ಬರು ಅವರನ್ನು ತಬ್ಬಿಕೊಳ್ಳಲು ಬಂದಾಗ ನೋವಿನಿಂದ ಕಸಿವಿಸಿಗೊಂಡ ವಿಡಿಯೋಗಳು ವೈರಲ್ ಆಗಿವೆ.
ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ವೈರಲ್ ಆಗಿದ್ದು, ನಟ ಜೂನಿಯರ್ ಎನ್ಟಿಆರ್ ಈ ಕಾರ್ಯಕ್ರಮದಲ್ಲಿ ಸೋಫಾದಲ್ಲಿ ಕುಳಿತಾಗ ಪಕ್ಕೆಲುಬನ್ನು ಹಿಡಿದುಕೊಂಡಿರುವುದನ್ನು ಕಾಣಬಹುದು. ಕಾರ್ಯಕ್ರಮದುದ್ದಕ್ಕೂ ನಟ ತನ್ನ ಗಾಯದ ಜಾಗವನ್ನು ಹಿಡಿದು ಅನಾನುಕೂಲವಾಗಿ ಕಾಣುತ್ತಿದ್ದರು, ನೋವಿನಿಂದ ಕ್ಷಣಕಾಲ ಕಣ್ಣು ಮುಚ್ಚುತ್ತಿದ್ದರು ಈ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಇನ್ನೊಂದು ವಿಡಿಯೋದಲ್ಲಿ ರಿಷಬ್ ಜೊತೆ ತಾರಕ್ ನೋವಿನ ನಡುವೆಯೂ ವೇದಿಕೆಯಲ್ಲಿ ಸೇರಿದರು. ಅಭಿಮಾನಿಯೊಬ್ಬ ಸೆಲ್ಫಿ ಕೇಳಲು ಬಂದಾಗ ಅವರು ತಿರಸ್ಕರಿಸಿ ದೂರ ಸರಿದಿದ್ದಾರೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications