ಭಾಷೆ, ನೆಲ ಹಾಗೂ ಜಲ ವಿಚಾರದಲ್ಲಿ ರಾಜಿ ಇಲ್ಲ: ಕನ್ನಡಿಗರ ಕ್ಷಮೆ ಕೇಳುವಂತೆ ಕಮಲ್ ಹಾಸನ್ಗೆ ಕರ್ನಾಟಕ ಹೈಕೋರ್ಟ್ ಸೂಚನೆ!
Kamal Haasan: ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು ನೀಡಿರುವ ಹೇಳಿಕೆಯು ಇದೀಗ ತಾರಕಕ್ಕೇರಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಹೈ - ಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದೆ. ಕಮಲ್ ಹಾಸನ್ ಅವರು ಕರ್ನಾಟಕದಲ್ಲಿ ಅವರ ತಮಿಳುಚಿತ್ರ ಥಗ್ ಲೈಫ್ ಬಿಡುಗಡೆ ಮಾಡುವುದಕ್ಕೆ ಅವಕಾಶ ನೀಡಬೇಕು ಹಾಗೂ ಸೂಕ್ತ ರಕ್ಷಣೆ ನೀಡಬೇಕು ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈ - ಕೋರ್ಟ್ ಈ ಸಂಬಂಧ ಕಮಲ್ ಹಾಸನ್ ಅವರಿಗೆ ಮಹತ್ವದ ಸೂಚನೆ ನೀಡಿದೆ. ಕಮಲ್ ಹಾಸನ್ ಕನ್ನಡ vs ತಮಿಳು ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಕ್ಷಮೆ ಕೇಳುವಂತೆ ಕಮಲ್ಗೆ ಹೈಕೋರ್ಟ್ನಿಂದ ಸೂಚನೆ ನೀಡಿದೆ. ಈ ಪ್ರಕರಣದ ಅಂತಿಮ ತೀರ್ಪನ್ನು ಮಧ್ಯಾಹ್ನ 2.30ಕ್ಕೆ ಪ್ರಕಟಿಸಲಿದೆ. ಈಗ ಕೋರ್ಟ್ ಹೇಳಿರುವುದೇನು ಎನ್ನುವ ವಿವರ ಇಲ್ಲಿದೆ.
ತಮಿಳು ಚಿತ್ರ ಥಗ್ ಲೈಫ್ ಪ್ರದರ್ಶನದ ಮೇಲೆ ನಿಷೇಧ ಹೇರುವುದನ್ನು ಪ್ರಶ್ನಿಸಿ ಕಮಲ್ ಹಾಸನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕರ್ನಾಟಕ ಹೈಕೋರ್ಟ್ ಮಂಗಳವಾರ ನಟ-ರಾಜಕಾರಣಿ ಕಮಲ್ ಹಾಸನ್ ಅವರ ಕೇಸ್ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದೆ. ಕಮಲ್ ಹಾಸನ್ ಅವರ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ತಮಿಳು ಭಾಷೆ ಕನ್ನಡದ ತಾಯಿ, ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಕಮಲ್ ಹಾಸನ್ ಹೇಳಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಕಮಲ್ ಅವರು ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಲು ನಿರಾಕರಿಸಿದ್ದನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಪೀಠ ಪ್ರಶ್ನಿಸಿದೆ.
ದೇಶದ ಯಾವುದೇ ಜನರ ಭಾವನೆಗಳನ್ನು ನೋವುಂಟು ಮಾಡುವುದಕ್ಕೆ ಯಾರಿಗೂ ಹಕ್ಕಿಲ್ಲ. ಜಲ, ನೀಲಾ, ಭಾಷೆ - ಮೂರು ವಿಷಯಗಳು ಮುಖ್ಯ. ಈ ದೇಶದ ವಿಭಜನೆಯು ಭಾಷಾವಾರು ವಿಷಯವಾಗಿದೆ. ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯೊಬ್ಬರು ಈ ರೀತಿಯ ಹೇಳಿಕೆ ನೀಡಲು ಸಾಧ್ಯವಿಲ್ಲ. ಈ ಹೇಳಿಕೆಯಿಂದಾಗಿ ಇದೀಗ ಅಶಾಂತಿ ನಿರ್ಮಾಣವಾಗಿದೆ ಎಂದು ನ್ಯಾಯಾಲಯ ಹೇಳಿತು ಎಂದು ಲೈವ್ ಲಾ ವರದಿ ಮಾಡಿದೆ.
ಕಮಲ್ಗೆ ಕೋರ್ಟ್ ತರಾಟೆ: ಇನ್ನು ನಟ ಕಮಲ್ ಹಾಸನ್ ಅವರ ಹೇಳಿಕೆಗೆ ಹೈ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನೀವು ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿ. ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ ಎಂದು ನೀವು ಹೇಗೆ ಹೇಳಬಹುದು, ನೀವು ಇತಿಹಾಸಕಾರರೇ ಅಥವಾ ನೀವು ಭಾಷಾಶಾಸ್ತ್ರಜ್ಞರೇ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ ಎಂದು ವರದಿಯಾಗಿದೆ.
ಇನ್ನು ಈ ವಿಚಾರವನ್ನು ಸರಳವಾಗಿ ಇತ್ಯಾರ್ಥ ಮಾಡಿಕೊಳ್ಳಬಹುದಾಗಿತ್ತು ಎಂದೂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದು ಕ್ಷಮೆ ಕೇಳುವ ಮೂಲಕ ಎಲ್ಲವೂ ಇತ್ಯಾರ್ಥವಾಗುತ್ತಿತ್ತು. ಇದೀಗ ನೀವು ವಾಣಿಜ್ಯ ಹಿತಾಸಕ್ತಿಗಾಗಿ & ನೀವೇ ಸೃಷ್ಟಿಸಿದ ಸನ್ನಿವೇಶದಿಂದಾಗಿ ಪೊಲೀಸ್ ರಕ್ಷಣೆಯನ್ನು ಕೇಳುತ್ತಿದ್ದೀರಿ ಎಂದು ಹೇಳಿದೆ.
Karnataka Highcourt lashes out against #KamalHaasan for his wrongful statement.
— 👑Che_Krishna🇮🇳💛❤️ (@CheKrishnaCk_) June 3, 2025
Court asks him to Apologise to Kannadigas if his movies want to release in Karnataka.
Say sorry and put an end to this. #ThugLife #Kannada
Video credit : Karnataka Highcourt Channel YT pic.twitter.com/EnaZskn3zd
ಏನಿದು ಪ್ರಕರಣ: ಇನ್ನು ನಟ ಕಮಲ್ ಹಾಸನ್ ಅವರು ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳುವ ಮೂಲಕ ಈ ವಿವಾದ ಸೃಷ್ಟಿಯಾಗಿತ್ತು. ಇದಕ್ಕೆ ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು. ಕಮಲ್ ಹಾಸನ್ ಅವರು ಕ್ಷಮೆ ಕೇಳಬೇಕು ಎಂದು ಇದೀಗ ಕೋರ್ಟ್ ಹೇಳಿದೆ. ಆದರೆ ಅಂತಿಮ ತೀರ್ಪು ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.
ಇನ್ನು ಕಮಲ್ ಹಾಸನ್ ಅವರು ಈ ವಿಚಾರವಾಗಿ ಕ್ಷಮೆ ಕೇಳದೆ ಇದ್ದರೆ, ಅವರ ಸಿನಿಮಾ ಥಗ್ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಅಥವಾ ಬಹಿಷ್ಕಾರ ಮಾಡುವುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ಸಿಸಿ) ಹೇಳಿತ್ತು. ಹೀಗಾಗಿ ಕಮಲ್ ಕೋರ್ಟ್ ಮೊರೆ ಹೋಗಿದ್ದರು.
ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ನಿಂದ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಪ್ರದರ್ಶನಕ್ಕೆ ಅಡ್ಡಿಪಡಿಸದಂತೆ ಹಾಗೂ ರಕ್ಷಣೆ ನೀಡುವಂತೆ ಕೋರಲಾಗಿತ್ತು. ಪೊಲೀಸ್ ರಕ್ಷಣೆ ನೀಡಬೇಕು ಎಂದೂ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಕನ್ನಡ ಭಾಷೆಯ ವಿಚಾರದಲ್ಲಿ ಕನ್ನಡಿಗರ ಭಾವನೆಗೆ ಧಕ್ಕೆ ತಂದಿರುವ ನಟ ಕಮಲ್ ಹಾಸನ್ಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮೊದಲು ಕನ್ನಡಿಗರ ಕ್ಷಮೆಯಾಚಿಸಿ ಎಂದು ತಾಕೀತು ಮಾಡಿದ ನ್ಯಾಯಾಧೀಶರು.
ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ʼನಲ್ಲಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರು,@ikamalhaasan ಕ್ಷಮೆ ಕೇಳಿದರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ ? ಅವರೇನು ಇತಿಹಾಸಕಾರರಾ ? ಈ ಹಿಂದೆ ತಮಿಳುನಾಡಿನ ರಾಜಗೋಪಾಲಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಮೊದಲು ಕ್ಷಮೆ ಕೇಳಲಿ ಎಂದು ಕರ್ನಾಟಕ ಹೈಕೋರ್ಟ್ ತಾಕೀತು ಮಾಡಿದೆ ಎಂದು ಜೆಡಿಎಸ್ ಸಹ ಪೋಸ್ಟ್ ಮಾಡಿದೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications