ಶೂಟಿಂಗ್ ವೇಳೆ ಅಸಭ್ಯವಾಗಿ ಮುಟ್ಟುತ್ತಿದ್ದ, ಖಾಸಗಿ ವಿಡಿಯೋ ತೆಗೆದು ಬ್ಲಾಕ್ಮೇಲ್: ನಟಿ ದೂರು
ಸಿನಿಮಾರಂಗದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಟಿಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಕೊಡಿಸಿ, ಪ್ರಚಾರಕ್ಕೆಂದು ಬೇರೆ ರಾಜ್ಯಕ್ಕೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ನಟಿಗೆ ತಿಳಿಯದಂತೆ ಮದ್ಯ ಕುಡಿಸಿ, ಆಕೆಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ಮೇಲ್ ಕೂಡ ಮಾಡಿರುವ ಆರೋಪದ ಮೇರೆಗೆ ಸ್ಯಾಂಡಲ್ವುಡ್ ನಟನನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕನ್ನಡದ "ರಿಚ್ಚಿ" ಸಿನಿಮಾದ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾದ ಹೇಮಂತ್ ಮೇಲೆ ಈ ಆರೋಪ ಕೇಳಿಬಂದಿದ್ದು, ರಾಜಾಜಿನಗರ ಪೊಲೀಸರು ನಟನನ್ನು ಬಂಧಿಸಿದ್ದಾರೆ. 2022ರಲ್ಲಿ ನಟಿಗೆ ಈತ ನಿರ್ದೇಶಕ, ನಿರ್ಮಾಪಕ ಎಂದು ಹೇಳಿಕೊಂಡು ಪರಿಚಯವಾಗಿದ್ದ. ರಿಚ್ಚಿ ಸಿನಿಮಾ ಮಾಡುತ್ತಿದ್ದು, ಅದರಲ್ಲಿ ನಾಯಕಿಯಾಗಿ ನಟಿಸುವಂತೆ ಹೇಮಂತ್ ಆ ನಟಿಗೆ ಕೇಳಿದ್ದ. ಇದಕ್ಕೆ ₹2 ಲಕ್ಷ ಸಂಭಾವನೆ ನೀಡುವುದಾಗಿ ಮಾತುಕತೆ ನಡೆದು, ಶೂಟಿಂಗ್ ಕೂಡ ಆರಂಭವಾಗಿತ್ತು.

ಅಸಭ್ಯ ರೀತಿಯಲ್ಲಿ ಮುಟ್ಟುತ್ತಿದ್ದ
ಶೂಟಿಂಗ್ ವೇಳೆ ನಟ ಅಸಭ್ಯ ರೀತಿಯಲ್ಲಿ ಮುಟ್ಟುತ್ತಿದ್ದ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ಅರೆಬರೆ ಬಟ್ಟೆ ಧರಿಸಬೇಕು ಎಂದು ಪೀಡಿಸುತ್ತಿದ್ದ. ಶೂಟಿಂಗ್ ಮುಗಿದ ನಂತರ ಪ್ರಚಾರಕ್ಕಾಗಿ ಖಾಸಗಿ ಹೋಟೆಲ್ಗೆ ಒಬ್ಬಳೇ ಬಾ ಎಂದು ಕಿರುಕುಳ ನೀಡಿದ್ದ. ಇದಕ್ಕೆ ನಾನು ಒಪ್ಪದಿದ್ದಾಗ ರೌಡಿಗಳನ್ನು ಬಿಟ್ಟು ಹೆದರಿಸಿದ್ದ ಎಂದೂ ನಟಿ ಆರೋಪ ಮಾಡಿದ್ದಾರೆ.
2023ರ ಆಗಸ್ಟ್ನಲ್ಲಿ ಪ್ರಚಾರದ ಸುದ್ದಿಗೋಷ್ಠಿ ಇದೆ ಎಂದು ಮುಂಬೈಗೆ ಹೋದಾಗ ಮದ್ಯ ಕುಡಿಸಿದ್ದ. ನಟಿಗೆ ಮತ್ತು ಬರಿಸಿ ನಂತರ ಆಕೆಯ ಖಾಸಗಿ ವಿಡಿಯೋಗಳು, ಫೋಟೋಗಳನ್ನು ತೆಗೆದುಕೊಂಡಿದ್ದು, ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ನಂತರ ಅವುಗಳನ್ನು ಮುಂದಿಟ್ಟುಕೊಂಡು ಬ್ಲಾಕ್ಮೇಲ್ ಕೂಡ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆ ಹೇಮಂತ್ನನ್ನ ಪೊಲೀಸರು ಬಂಧಿಸಿದ್ದಾರೆ. ಸೆನ್ಸಾರ್ ಆಗದ ಪೋಟೋಗಳನ್ನು ಸೋಷಿಯಲ್ ಮೀಡಿಯದಲ್ಲಿ ವೈರಲ್ ಮಾಡುವುದಾಗಿ ಹೆದರಿಸಿದ್ದ. ನನ್ನ ತಾಯಿಗೂ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಟಿ ದೂರು ನೀಡಿದ್ದಾರೆ.
ನಟ ಹೇಮಂತ್ ಮತ್ತು ನಟಿಯ ನಡುವೆ ಈ ಹಿಂದೆಯೋ ಒಮ್ಮೆ ಗಲಾಟೆ ನಡೆದಿತ್ತು. ನಟಿ ಸಿನಿಮಾ ಪ್ರಚಾರಕ್ಕೆ ಬರುತ್ತಿಲ್ಲ, ಫೋನ್ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ ಎಂದು ಫಿಲಂ ಚೇಂಬರ್ಗೆ ದೂರು ಸಹ ನೀಡಲಾಗಿತ್ತು. ಇದಕ್ಕೂ ಮುನ್ನ ನಟಿ ಹಾಗೂ ಆಕೆಯ ತಾಯಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ನಂತರ ರಾಜಿ ಸಂಧಾನ ಮಾಡಿ ಸಮಸ್ಯೆ ಇತ್ಯರ್ಥ ಮಾಡಲಾಗಿತ್ತು. ಈಗ ನಟಿ ಮತ್ತೊಮ್ಮೆ ತಮ್ಮ ಮೇಲೆ ಲೈಂಗಿಕ ಕಿರುಕುಳದ ದೂರು ನೀಡಿದ್ದು, ನಟ ಹೇಮಂತ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications