ನನ್ನೊಂದಿಗೆ ಮಲಗು ಎಂದು ಕನ್ನಡದ ಖ್ಯಾತ ನಟಿಗೆ ಟಾರ್ಚರ್, ನಿರ್ಮಾಪಕ ಅರೆಸ್ಟ್
ಚಿತ್ರರಂಗದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ ಎನ್ನುವ ಆರೋಪ ಮೊದಲಿನಿಂದಲೂ ಇದೆ. ಈಗಂತೂ ಸಿನಿಮಾ ಅವಕಾಶ ನೀಡುವ ನೆಪದಲ್ಲಿ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ನೋಡುವುದು, ಆಮಿಷವೊಡ್ಡುವುದು, ನೇರವಾಗಿ ತನ್ನೊಂದಿಗೆ ದೈಹಿಕವಾಗಿ ಸಹಕರಿಸು ಎಂದು ಕೇಳುವ ಕಾಸ್ಟಿಂಗ್ ಕೌಚ್ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇಂತಹ ಬೀದಿ ಕಾಮುಕರ ಮುಖವಾಡಗಳು ಸಹ ಕಳಚುತ್ತಲೇ ಇವೆ. ಇದೀಗ ಕನ್ನಡದ ಖ್ಯಾತ ನಟಿಯೊಬ್ಬರಿಗೆ ನಿರ್ಮಾಪಕ ನಿರಂತರವಾಗಿ ಟಾರ್ಚರ್ ಕೊಟ್ಟಿದ್ದಾನೆ. ನನ್ನೊಂದಿಗೆ ದೈಹಿಕವಾಗಿ ಸಹಕರಿಸು ಎಂದು ಪೀಡಿಸಿದ್ದಾನೆ.
ನಿರ್ಮಾಪಕನ ಕಾಟಕ್ಕೆ ಬೇಸತ್ತು ನಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆತನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಎಂಬುವವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈತ ರಿಯಲ್ ಎಸ್ಟೇಟ್ ಉದ್ಯಮಿ, ಎವಿಆರ್ ಗ್ರೂಪ್ ಸಂಸ್ಥಾಪಕ, ಅಲ್ಲದೆ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕ ಕೂಡ ಎಂದು ತಿಳಿದುಬಂದಿದೆ.

ನಟಿ ಕೊಟ್ಟ ದೂರಿನ ಮೇಲೆ ನಿರ್ಮಾಪಕ ಕಂ ಉದ್ಯಮಿ ಅರವಿಂದ ವೆಂಕಟೇಶ ರೆಡ್ಡಿ ಅರೆಸ್ಟ್ ಆಗಿದ್ದಾರೆ. ನಟಿ ಕೊಟ್ಟ ದೂರಿನಲ್ಲಿ ತಿಳಿಸಿರುವಂತೆ 2021ರಲ್ಲಿ ಅರವಿಂದ್ ವೆಂಕಟೇಶರೆಡ್ಡಿ ಪರಿಚಯವಾಗಿತ್ತು. ಶ್ರೀಲಂಕಾದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಕಪ್ ಮ್ಯಾಚ್ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಪಾಲ್ಗೊಳ್ಳುವಂತೆ ಕೇಳಿದ್ದರು. ನಂತರ ವೆಂಕಟೇಶ್ ರೆಡ್ಡಿ ನನ್ನೊಂದಿಗೆ ಆತ್ಮೀಯವಾಗಿ ವರ್ತಿಸಲು ಶುರು ಮಾಡಿದ. ಬಳಿಕ ಕೆಲಕಾಲ ನನ್ನಿಂದ ಅಂತರ ಕಾಯ್ದುಕೊಂಡು ಮತ್ತೆ ಸಂಪರ್ಕಕ್ಕೆ ಬಂದಿದ್ದ. ಅಷ್ಟೊತ್ತಿಗೆ ಆತನ ಕುಡಿತದ ವರ್ತನೆ ಗೊತ್ತಾಗಿ ದೂರವಿದ್ದೆ ಎಂದು ವಿವರಿಸಿದ್ದಾರೆ.
ಫೋಟೋ ಮಾರ್ಫ್ ಮಾಡಿ ಕಿರುಕುಳ
ಆತನಿಂದ ಎಷ್ಟು ಅಂತರ ಕಾಯ್ದು ಕೊಳ್ಳಲು ಪ್ರಯತ್ನ ಪಟ್ಟರು ಬಲವಂತವಾಗಿ ನನ್ನ ಹಿಂದೆ ಓಡಾಡುವುದು, ಲೋಕೇಷನ್ ಟ್ರ್ಯಾಕ್ ಮಾಡುವುದು, ಇನ್ಸ್ಟಾಗ್ರಾಂನಲ್ಲಿ ನನ್ನ ಫೋಟೋ ಮಾರ್ಫ್ ಮಾಡಿ ಪೋಸ್ಟ್ ಮಾಡಿ ಅವಮಾನ ಮಾಡುವುದು, ಮನೆಗೆ ಹುಡುಗರನ್ನು ಕಳುಹಿಸಿ ಗಲಾಟೆ ಮಾಡಿಸುವುದು, ನನ್ನ ತಮ್ಮ ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನೊಂದಿಗೆ ಬಲವಂತದಿಂದ ಸಂಬಂಧ ಇಟ್ಟುಕೊಳ್ಳುವಂತೆ ಕಿರುಕುಳ ನೀಡುತ್ತಿದ್ದ. ಕಳೆದ ವರ್ಷ ಆತನ ಮಾನಸಿಕ, ದೈಹಿಕ ಕಿರುಕುಳ ತಾಳಲಾರದೆ ಮಾನಸಿಕ ಒತ್ತಡ ಹೆಚ್ಚಾಗಿತ್ತು. ನಾಳೆ ನಿಮ್ಮ ನಿವಾಸಕ್ಕೆ ಬರುತ್ತಿದ್ದೇನೆ, ನಿನ್ನ ಜೊತೆಗೆ ಮದುವೆಯಾಗುತ್ತೇನೆ ಎಂದು ಹೆದರಿಸಿದ್ದ. ಆಗ ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದಿದ್ದಾರೆ.
ಅದಾದ ನಂತರವೂ ಆತನ ಕಿರುಕುಳ ನಿಲ್ಲಲಿಲ್ಲ. ನಟಿ ವಾಸ ಮಾಡ್ತಿದ್ದ ಮನೆಯ ಅಕ್ಕ ಪಕ್ಕದವರಿಗೆ, ಮನೆಯ ಮಾಲೀಕರಿಗೆ, ನಟಿ ವೇಶ್ಯಾವಾಟಿಕೆ ನಡೆಸ್ತಿದ್ದಾಳೆ ಎಂದು ಸುದ್ದಿ ಹಬ್ಬಿಸಿದ್ದ. ನಂತರ ನಟಿ ಮಹಿಳಾ ಆಯೋಗಕ್ಕೆ ಪತ್ರ ಬರೆದು ದೂರು ನೀಡಿದ್ದರು. ಆಗ ಇನ್ಮುಂದೆ ನಟಿಯ ತಂಟೆಗೆ ಬರಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿದ್ದ. ಆದರೂ ಮತ್ತೆ ಆತನ ಕಿರುಳುಳ ಮುಂದುವರಿದಿದ್ದರಿಂದ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ಈ ಆರೋಪದ ಮೇರೆಗೆ ಆ ನಿರ್ಮಾಪಕನನ್ನ ಪೊಲೀಸರು ಬಂಧಿಸಿದ್ದಾರೆ.
-
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications