ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ
ಬೆಂಗಳೂರು, ಡಿಸೆಂಬರ್ 08:ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(86) ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಲೀಲಾವತಿ ಅವರು ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ ನಟಿ ಲೀಲಾವತಿ ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಲೀಲಾವತಿ 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದ ನಟ ದಿಗ್ಗಜರಾದ ಡಾ. ರಾಜ್ಕುಮಾರ್, ವಿಷ್ಣುವರ್ಧನ್ ಅಂತವರ ಜೊತೆ ನಟಿಸಿ ಅಭಿಮಾನಿಗಳ ಮನಸ್ಸು ಗೆದ್ದು, ಸೈ ಎನಿಸಿಕೊಂಡಿದ್ದರು. ನಟನೆ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳ ಮೂಲಕವೂ ಲೀಲಾವತಿ ಗುರುತಿಸಿಕೊಂಡಿದ್ದರು.

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಸುಬ್ಬಯ್ಯ ನಾಯ್ಡು ಅವರ 'ಭಕ್ತ ಪ್ರಹ್ಲಾದ'ದಲ್ಲಿ ಕೂಡಾ ಲೀಲಾವತಿ ಅಭಿನಯಿಸಿದ್ದರು.
ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ. ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳಲ್ಲಿ ಕಾಣಿಸಿಕೊಂಡರು. ಅಲ್ಲದೆ ನಾಯಕರಿಗಿಂತಲೂ ಹೆಚ್ಚಿನ ಸಂಭಾವನೆ ಪಡೆಯುತ್ತಿದ್ದರು.
ಲೀಲಾವತಿ ಅವರು ತಮ್ಮ 50 ವರ್ಷಗಳ ವೃತ್ತಿಜೀವನದಲ್ಲಿ 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. 'ಭಕ್ತ ಕುಂಬಾರ', 'ಮನ ಮೆಚ್ಚಿದ ಮಡದಿ' ಮತ್ತು 'ಸಂತ ತುಕಾರಂ' ಚಿತ್ರಗಳಲ್ಲಿನ ಸ್ಮರಣೀಯ ನಟನೆ ಅವರಿಗೆ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿತ್ತು. ರಾಜಕುಮಾರ್ ಅವರ ಮಗಳಾಗಿ ('ಭೂದಾನ'ದಲ್ಲಿ), ತಂಗಿಯಾಗಿ ('ವಾತ್ಸಲ್ಯ'ದಲ್ಲಿ), ಅತ್ತಿಗೆಯಾಗಿ ('ಪ್ರೇಮಮಯಿ'ಯಲ್ಲಿ) ಸೇರಿದಂತೆ ಹಲವು ಚಿತ್ರಗಳಲ್ಲಿ ರಾಜ್ಕುಮಾರ್ ಅವರೊಂದಿಗೆ ಕೆಲಸ ಮಾಡುವ ಅವಕಾಶವೂ ಅವರಿಗೆ ಸಿಕ್ಕಿತು. ಲೀಲಾವತಿ ಅವರ ಮಗ ವಿನೋದ್ ರಾಜ್ ಕೂಡ ನಟನಾಗಿದ್ದು, 'ಡ್ಯಾನ್ಸ್ ರಾಜಾ ಡ್ಯಾನ್ಸ್', 'ಕೃಷ್ಣಾ ನೀ ಕುಣಿದಾಗ', 'ಕಾಲೇಜ್ ಹೀರೋ' ಮತ್ತು 'ಮಹಾಭಾರತ' ಸೇರಿದಂತೆ ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ.
ನಟಿ ಲೀಲಾವತಿ ಅಗಲಿಕೆಗೆ ಸಿಎಂ ಸಂತಾಪ
ಹಿರಿಯ ನಟಿ ಲೀಲಾವತಿ ಅವರ ಅಗಲಿಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications