Mayuri:ಅಂದು 'ಅಶ್ವಿನಿ ನಕ್ಷತ್ರ' ತೋರಿಸಿ ಹೋದವರು ಈಗ 'ನನ್ನ ದೇವ್ರು' ಎಂದು ವಾಪಸ್ ಆದ ನಟಿ ಮಯೂರಿ!
ಸೂಪರ್ ಹಿಟ್ ಧಾರಾವಾಹಿ ಅಶ್ವಿನಿ ನಕ್ಷತ್ರದಿಂದ 'ಅಶ್ವಿನಿ' ಎಂದು ಖ್ಯಾತಿ ಪಡೆದ ನಟಿ ಮಯೂರಿ ಕ್ಯಾತರಿ ಬಳಿಕ ಸಿನಿಮಾಗಳಲ್ಲಿ ಅವಕಾಶ ಪಡೆದವರು. ನಾಯಕಿಯಾಗಿ ಹಲವು ಸಿನಿಮಾಗಳನ್ನು ಮಾಡಿದ ಅವರು, ಮದುವೆ, ಮಗು ಎಂದು ಆರಾಮಾಗಿದ್ದರು. ಬಿಗ್ ಬಾಸ್ ಮೂಲಕ ಕಿರುತೆರೆಯಲ್ಲಿ ಕೆಲ ಕಾಲ ಕಾಣಿಸಿಕೊಂಡ ಅವರು ಮತ್ತೆ ನಾಯಕಿಯಾಗಿ ಕಿರುತೆರೆಗೆ ರಿಎಂಟ್ರಿ ನೀಡುತ್ತಿದ್ದಾರೆ.
ಅಶ್ವಿನಿ ಎಂದರೆ ಇಂದಿಗೂ ಜನ ನೆನಪಿಸಿಕೊಳ್ಳುವುದು ಅಶ್ವಿನಿ ನಕ್ಷತ್ರ ಧಾರಾವಾಹಿಯನ್ನು. ನಟ ಜಯರಾಮ್ ಕಾರ್ತಿಕ್ (ಜೆಕೆ) ಹಾಗೂ ನಟಿ ಮಯೂರಿ ಅಭಿನಯದ ಈ ಧಾರಾವಾಹಿ ಅದ್ಭುತವಾಗಿ ಮೂಡಿ ಬಂದಿತ್ತು. ಸುದೀರ್ಘ ವಿರಾಮದ ನಂತರ ಈಗ ಮತ್ತೊಂದು ಹೊಸ ಕಥೆ ಹೇಳಲು ಬರುತ್ತಿದ್ದಾರೆ ನಟಿ ಮಯೂರಿ ಕ್ಯಾತರಿ.

ನಕ್ಷತ್ರವನ್ನು ಧರೆಗಿಳಿಸಿದ್ದ ಅಶ್ವಿನಿಯ ಜೀವನ
ಅಶ್ವಿನಿ ನಕ್ರತ ಧಾರಾವಾಹಿ ಬಳಿಕ ಬೆಳ್ಳಿ ತರೆಗೆ ಕಾಲಿಟ್ಟ ಮಯೂರಿ, ಕೃಷ್ಣ ಲೀಲಾ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲು ಹಿರಿತೆರೆಗೆ ಪಾದಾರ್ಪಣೆ ಮಾಡಿದರು. ಈ ಚಿತ್ರದ ಬಳಿಕ ಇಷ್ಟಕಾಮ್ಯ, ಮೌನಂ, ರುಸ್ತುಂ, ನನ್ನ ಪ್ರಕಾರ, ನಟರಾಜ ಸರ್ವಿಸ್, ಪೊಗರು ಸಿನಿಮಾಗಳಲ್ಲಿ ನಟಿಸಿದ್ದಾರೆ. 2022 ರಲ್ಲಿ ವೀಲ್ ಚೇರ್ ರೋಮಿಯೋ ಎಂಬ ಸಿನಿಮಾದಲ್ಲಿ ನಟಿಸಿದ್ದರು.
2020 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಮಗುವಿಗೆ ತಾಯಿಯಾಗಿರುವ ಅವರು, ಕುಟುಂಬದತ್ತ ಗಮನಹರಿಸಲು ವಿರಾಮ ತೆಗೆದುಕೊಂಡಿದ್ದರು. ಬಿಗ್ ಬಾಸ್ ಸೀಸನ್ 9 ರಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. 2022 ರಲ್ಲಿ ಅಂಧೆಯಾಗಿ ವೀಲ್ ಚೇರ್ ರೋಮಿಯೋ ಎಂಬ ಸಿನಿಮಾದಲ್ಲಿ ನಟಿಸಿದರು. ಇದಾದ ಮೇಲೆ ಉಧೋ ಉಧೋ ಧಾರಾವಾಹಿಯಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಕಿರುತೆರೆಗೆ ಬರುತ್ತಿದ್ದಾರೆ.
ನನ್ನ ದೇವ್ರು ಎಂದು ಆರಾಧಿಸುತ್ತಾ ಬಂದ ಮಯೂರಿ
ಮಯೂರಿ 'ನನ್ನ ದೇವ್ರು' ಧಾರಾವಾಹಿ ಮೂಲಕ ತಮ್ಮ ನಟನೆಯ ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಧಾರಾವಾಹಿಯ ಪ್ರೋಮೋ ಆಕೆಯ ಅಭಿಮಾನಿಗಳಿಗೆ ಮೆಚ್ಚುಗೆಯಾಗಿದೆ. ಪ್ರೋಮೋದಲ್ಲಿ ಮಯೂರಿಯ ಸೌಂದರ್ಯ ಮತ್ತು ವರ್ಚಸ್ಸು ಎದ್ದು ಕಾಣಿಸುತ್ತಿದೆ. ಅನೇಕ ಅಭಿಮಾನಿಗಳು ಅವರ ಸೌಂದರ್ಯವನ್ನು ಹೊಗಳುತ್ತಿದ್ದು, ಕಿರುತೆರೆಗೆ ವಾಪಸ್ ಬಂದಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.
ನನ್ನ ದೇವ್ರು ಧಾರಾವಾಹಿಯಲ್ಲಿ ಮಯೂರಿ ಹಳ್ಳಿ ಹುಡುಗಿಯ ಪಾತ್ರವನ್ನು ನಿರ್ವಹಿಸಿದರೆ, ನಾಯಕ ಅವಿನಾಶ್, ಊರಿನ ರಾಜಕೀಯ ನಾಯಕ ಮತ್ತು ರಕ್ಷಕನಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಊರೇ ದೇವರು ಎಂದು ಕೊಂಡಾಡುವ ನಾಯಕನ ಕಥೆ ಇದು. ವೀಕ್ಷಕರು ಈಗಾಗಲೇ ಕಥೆಯನ್ನು ತೆಗೆದುಕೊಳ್ಳಬಹುದಾದ ತಿರುವುಗಳ ಬಗ್ಗೆ ತಮ್ಮದೆ ಅಭಿಪ್ರಾಯ ಹೊರಹಾಕುತ್ತಿದ್ದಾರೆ.
-
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು












Click it and Unblock the Notifications