6 ವರ್ಷಗಳ ಶ್ರಮದ ಫಲ: ನಟಿ ಮೇಘನಾ ಗಾಂವ್ಕರ್ಗೆ ಡಾಕ್ಟರೇಟ್ ಪದವಿ
ಚಾರ್ಮಿನಾರ್, ಛೂ ಮಂಥರ್ ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಮೇಘನಾ ಗಾಂವ್ಕರ್ ಅವರಿಗೆ ಡಾಕ್ಟರೇಟ್ ಪದವಿ ದೊರೆತಿದೆ. ಸಿನಿಮಾ ಮತ್ತು ಸಾಹಿತ್ಯ ವಿಚಾರದಲ್ಲಿ ಮೇಘನಾ ಗಾಂವ್ಕರ್ ಡಾಕ್ಟರೇಟ್ ಪದವಿ ಪಡೆದಿದ್ದು, ಈ ಹೆಮ್ಮೆಯ ವಿಚಾರವನ್ನು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
'ನಿಮಗೆಲ್ಲರಿಗೂ ಡಾ. ಮೇಘನಾ ಗಾಂವ್ಕರ್ ಅವರನ್ನು ಪ್ರಸ್ತುತಪಡಿಸುತ್ತಿದ್ದೇನೆ. ಈ ಮಹಿಳೆಯ ಬಗ್ಗೆ ತುಂಬಾ ಹೆಮ್ಮೆಯಿದೆ. ಕಳೆದ 6 ವರ್ಷಗಳಿಂದ ಈ ಪಿಎಚ್ಡಿ ಪ್ರಯಾಣ ಸುಲಭವಾಗಿರಲಿಲ್ಲ ಆದರೆ ನಾನು ನನ್ನ ಶ್ರದ್ಧೆ ಹಾಗೂ ಇಚ್ಛಾಶಕ್ತಿಯಿಂದ ಇದನ್ನು ಪೂರ್ಣಗೊಳಿಸಿದ್ದೇನೆ' ಎಂದು ಪಿಎಚ್ಡಿ ಪ್ರಮಾಣ ಪತ್ರದೊಂದಿಗಿನ ಫೋಟೋವನ್ನು ಮೇಘನಾ ಗಾಂವ್ಕರ್ ಹಂಚಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಹಂಚಿಕೊಂಡಿರುವ ಅವರು, 'ಇವತ್ತು ನಾನು ನಿಮ್ಮೆಲ್ಲರ ಜೊತೆ ಖುಷಿಯ ವಿಚಾರ, ಹೆಮ್ಮೆಯ ವಿಚಾರ, ಸಿಹಿ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇನೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಕಳೆದ ಆರು ವರ್ಷಗಳಿಂದ ನಾನು ನನ್ನ ಪಿಎಚ್ಡಿ ಮಾಡುತ್ತಿದ್ದೆ. 2024ರ ಅಕ್ಟೋಬರ್ನಲ್ಲಿ ನಾನು ನನ್ನ ಪಿಎಚ್ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿದ್ದೇನೆ. ಇದು ತುಂಬಾ ವಿಶೇಷವಾದದ್ದು. ಯಾಕೆಂದರೆ ಈ ಪಿಎಚ್ಡಿ ಪಯಣ ಅಷ್ಟು ಸುಲಭ ಆಗಿರಲಿಲ್ಲ' ಎಂದರು.
'ನಾನು ನನ್ನ ಈ ಪಿಎಚ್ಡಿ ಡಾಕ್ಟರೇಟ್ ಪದವಿಯನ್ನು ನನ್ನ ತಂದೆಗೆ ಅರ್ಪಿಸುತ್ತೇನೆ. ಯಾಕೆಂದರೆ ನಾನು ಪಿಎಚ್ಡಿ ಮಾಡಬೇಕು ಎನ್ನುವುದು ನನ್ನ ತಂದೆಯ ಕನಸು. ನನ್ನ ಪಿಎಚ್ಡಿ ವಿಷಯ ಸಿನಿಮಾ ಮತ್ತು ಸಾಹಿತ್ಯ. ಈ ವಿಷಯ ನನಗೆ ತುಂಬಾ ಹತ್ತಿರವಾಗಿತ್ತು. ಈ ವಿಡಿಯೋ ಮೂಲಕ ನಾನು ನಿಮಗೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ಯಾಕೆಂದರೆ ನಾನು ಮೊದಲು ಪಿಎಚ್ಡಿ ಬಗ್ಗೆ ಹೇಳಿಕೊಂಡ ದಿನದಿಂದ ಈವರೆಗೆ ನೀವೆಲ್ಲರೂ ನನಗೆ ತುಂಬಾ ಬೆಂಬಲ ಕೊಟ್ಟಿದ್ದೀರಿ. ಈ ಪಯಣದಲ್ಲಿ ನನ್ನ ಜೊತೆಯಲ್ಲಿ ನಿಂತಿರುವುದಕ್ಕಾಗಿ ನಿಮಗೆ ತುಂಬಾ ಧನ್ಯವಾದಗಳು' ಎಂದು ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications