ಚಂದನ್-ನಿವೇದಿತಾ ದೂರಾಗಲು ಇವರೇ ಕಾರಣನಾ? ಕೊನೆಗೂ ಹೊರಬಿದ್ದ ಸಿಕ್ರೇಟ್ ಏನು?
ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ನಟ ಚಂದನ್ ಶೆಟ್ಟಿ ಹಾಗೂ ಕಿರುತೆರೆ ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಪಡೆದಿರುವ ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡು ವರ್ಷಗಳು ಕಳೆಯುತ್ತಾ ಬಂದರೂ, ಚೆನ್ನಾಗಿದ್ದ ಈ ಜೋಡಿ ದಿಢೀರ್ ದೂರಾಗಿದ್ದೇಕೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ ಕಳೆದ ವರ್ಷ ಜೂನ್ ತಿಂಗಳಲ್ಲಿ ವಿಚ್ಛೇದನ ಪಡೆದುಕೊಂಡರು.
ಸದ್ಯ ಚಂದನ್ ಶೆಟ್ಟಿ ತಮ್ಮ ಕಾಟನ್ ಕ್ಯಾಂಡಿ ಹಾಡಿನ ಯಶಸ್ಸಿನಲ್ಲಿದ್ದರೆ, ನಿವೇದಿತಾ ಗೌಡ ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿ ಬಾಯ್ಸ್ ಆ್ಯಂಡ್ ಗರ್ಲ್ಸ್ ಕಾರ್ಯಕ್ರಮದ ಸ್ಪರ್ಧಿಯಾಗಿದ್ದಾರೆ. ಸದ್ಯ ತಮ್ಮ ತಮ್ಮ ಜೀವನದಲ್ಲಿ ಬ್ಯೂಸಿಯಾಗಿರುವ ಈ ಮಾಜಿ ಜೋಡಿಯ ಬಗ್ಗೆ ಆಗಾಗ ಗಾಸಿಪ್ಗಳು ಹರಿದಾಡುತ್ತಲೇ ಇರುತ್ತದೆ.

ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಡಿವೋರ್ಸ್ ವಿಚಾರದಲ್ಲಿ ಅನೇಕ ಗಾಳಿ ಸುದ್ದಿಗಳು ಕೇಳಿಬಂದಿದ್ದವು. ವಿಚ್ಛೇದನ ಬಳಿಕ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಹೆಸರುಗಳು ಕೆಲ ನಟ ನಟಿಯರ ಜೊತೆ ತಳುಕು ಹಾಕಿಕೊಂಡಿತ್ತು. ಆದರೆ ಅದು ಸತ್ಯಕ್ಕೆ ಬಹು ದೂರಾದ ವಿಚಾರವಾಗಿತ್ತು. ಆದರೂ ಕೆಲವರು ಚಂದನ್ ಶೆಟ್ಟಿ ಹೆಸರನ್ನು ಸಲಗ ಸಿನಿಮಾ ಖ್ಯಾತಿಯ ನಟಿ ಸಂಜನಾ ಆನಂದ್ ಅವರ ಜೊತೆ ತಳುಕು ಹಾಕಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು.
ನೋಡಿದ ಎಂತವರಿಗಾದರೂ ಇದೊಂದು ಸುಳ್ಳು ಸುದ್ದಿ ಎಂದು ಗೊತ್ತಾಗುತ್ತಿದ್ದರೂ, ಕೆಲವು ಪೋಸ್ಟ್ಗಳು ವೈರಲ್ ಆಗುತ್ತಲೇ ಇದ್ದವು. ಈ ಬಗ್ಗೆ ಫಿಲ್ಮಿಬೀಟ್ ಕನ್ನಡದ ಜೊತೆ ಮಾತನಾಡಿದ್ದ ಸಂಜನಾ ಆನಂದ್, 'ಇತ್ತೀಚಿಗೆ ನನಗೆ ಮತ್ತು ಚಂದನ್ ಶೆಟ್ಟಿ ಅವರಿಗೆ ಮದುವೆಯಾಗಿತ್ತು ಎನ್ನುವ ಗಾಸಿಪ್ ಹಡಿದಾಡಿತ್ತು. ಅಷ್ಟೇ ಅಲ್ಲದೇ ಅವರ ಡಿವೋರ್ಸ್ಗೆ ನಾನು ಕಾರಣ ಅಂತಾ ಆಯ್ತು. ಮೊದಲು ನನಗೆ ಆ ಸುದ್ದಿ ಗೊತ್ತೇ ಇರಲಿಲ್ಲ. ಇದೆಲ್ಲಾ ಇಷ್ಟು ದೊಡ್ಡದಾಗಿ ಯಾವಾಗ ಆಯ್ತು ಅಂತಾ ಅನಿಸಿಬಿಡ್ತು. ಎಲ್ಲಿಯವರೆಗೂ ಅಂದರೆ ಎಐನಲ್ಲಿ ನಮ್ಮಿಬ್ಬರಿಗೂ ಮದುವೆ ಡ್ರೆಸ್ ಹಾಕಿಸಿದ್ದರು. ಮಂಗಳೂರಿನಲ್ಲಿ ಮದುವೆ ಅಂತೆಲ್ಲಾ ಹಾಕಿದರು. ಆಗ ಸ್ವಲ್ಪ ಗಂಭೀರವಾಗಿ ತೆಗೆದುಕೊಂಡು ಇದೆಲ್ಲಾ ಸುಳ್ಳು ಅಂತಾ ಸ್ಪಷ್ಟನೆ ಕೊಟ್ಟೆ' ಎಂದು ಸಂಜನಾ ಆನಂದ್ ಹೇಳಿದ್ದರು. ಈ ಮೂಲಕ ತಮ್ಮ ಬಗ್ಗೆ ಬಂದಿದ್ದ ಬಹುದೊಡ್ಡ ಗಾಸಿಪ್ಗೆ ಸಂಜನಾ ಆನಂದ್ ಸ್ಪಷ್ಟನೆ ನೀಡಿದ್ದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications