Anchor Anushree Wedding : ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಅನುಶ್ರೀ; ಖುಷಿಯಿಂದ ಪತ್ನಿ ಹಣೆಗೆ ಮುತ್ತಿಟ್ಟ ರೋಷನ್
ಕರಾವಳಿ ಚೆಲುವೆ. ಕನ್ನಡದ ಜನಪ್ರಿಯ ನಿರೂಪಕಿ ಅನುಶ್ರೀ ಇಂದು (ಆಗಸ್ಟ್ 28) ಬೆಂಗಳೂರಿನಲ್ಲಿ ಕೊಡಗಿನ ಉದ್ಯಮಿ ರೋಷನ್ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಹಲವು ವರ್ಷಗಳಿಂದ ಆಂಕರ್ ಅನುಶ್ರೀ ಮದುವೆ ಯಾವಾಗ ಎನ್ನುವ ಪ್ರಶ್ನೆಯನ್ನ ಅಭಿಮಾನಿಗಳು ಕೇಳುತ್ತಿದ್ದರು. ಇದೀಗ ಅನುಶ್ರೀ ವಿವಾಹದ ಬಗ್ಗೆ ಅಭಿಮಾನಿಗಳ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಇಂದು (ಆಗಸ್ಟ್ 28) ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸುವ ಮೂಲಕ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಇನ್ನೂ ಅನುಶ್ರೀ ಅವರು ತಾಳಿ ತಟ್ಟುವ ವೇಳೆ ಭಾವುಕರಾಗಿದ್ದು, ಪತ್ನಿ ಅನುಶ್ರಿಗೆ ರೋಷನ್ ಅವರು ಮುತ್ತಿಟ್ಟಿದ್ದಾರೆ.
ಗೌರಿ ಗಣೇಶ ಹಬ್ಬದಂದು ಬೆಂಗಳೂರಿನ ಹೊರವಲಯದಲ್ಲಿರುವ ರೆಸಾರ್ಟ್ನಲ್ಲಿ ಅದ್ದೂರಿಯಾಗಿ ಮೆಹೆಂದಿ ಶಾಸ್ತ್ರ, ಹಳದಿ ಶಾಸ್ತ್ರ ನೆರವೆರಿತ್ತು. ಮದುವೆ ಮಂಟಪ ಸೇರಿದಂತೆ ರೆಸಾರ್ಟ್ನಾದ್ಯಂತ ಹೂವಿನ ಅಲಂಕಾರ ಮಾಡಲಾಗಿತ್ತು. ಇದೀಗ ಆಂಕರ್ ಅನುಶ್ರೀ ಹಾಗೂ ರೋಷನ್ ಅವರ ವಿವಾಹ ಮಹೋತ್ಸವ ಸಂಪನ್ನಗೊಂಡಿದೆ. ಕೊಡಗು ಮೂಲದ ರಾಮಮೂರ್ತಿ ಮತ್ತು ಸಿಸಿಲಿಯಾ ಪುತ್ರ ರೋಷನ್ ಅವರನ್ನು ಅನುಶ್ರೀ ಮದುವೆಯಾಗಿದ್ದಾರೆ.

ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಬೆಳಗ್ಗೆ 10.56ಕ್ಕೆ ಮಾಂಗಲ್ಯ ಧಾರಣೆ ನಡೆಯಿತು. ಪ್ರೀತಿಸಿದ ಹುಡುಗ ಜೊತೆಗೆ 37 ವರ್ಷದ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಖಾಸಗಿ ವಿವಾಹ ಸಮಾರಂಭದಲ್ಲಿ ಸ್ಯಾಂಡಲ್ವುಡ್ನ ತಾರೆಯರು ಹಾಗೂ ಆಪ್ತರು ಭಾಗಿಯಾಗಿದ್ದರು. ಅಲ್ಲದೇ ನಟ ಶಿವರಾಜ್ ಕುಮಾರ್,ಗೀತಾ ಶಿವರಾಜ್ ಕುಮಾರ್, ವಿಜಯ್ ರಾಘವೇಂದ್ರ, ನಟ ರಾಜ್ ಬಿ. ಶೆಟ್ಟಿ, ಜೀ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು, ಕಾವ್ಯಾ ಶಾ, ಚೈತ್ರಾ ಜೆ. ಆಚಾರ್, ಶರಣ್, ಸೋನಲ್ ಮೊಂಥೆರೋ ಸೇರಿದಂತೆ ಅನೇಕರು ನವಜೋಡಿಗೆ ಶುಭ ಹಾರೈಸಿದರು.
ಇನ್ನೂ ಮದುವೆ ಬಳಿಕ ಅನುಶ್ರೀ ಅವರು ಮಾತನಾಡಿ, ಸಿಂಪಲ್ ಆಗಿ ಮದುವೆ ಆಗಬೇಕು ಎಂಬುದು ದೊಡ್ಡ ಆಸೆ ಆಗಿತ್ತು. ಅದರಂತೆಯೇ ಮದುವೆ ನೆರವೇರಿದೆ. ಮದುವೆ ಬಹಳ ಸುಂದರವಾಗಿ, ಸರಳವಾಗಿ ನಡೆದಿದೆ. ಬಹಳ ಕಡಿಮೆ ಜನರ ಎದುರು ನಮ್ಮಿಬ್ಬರ ವಿವಾಹ ಆಗಬೇಕು ಎಂಬುದು ಆಸೆ ಆಗಿತ್ತು. ಇವರ ಹೆಸರು ರೋಷನ್ ರಾಮಮೂರ್ತಿ. ಕುಶಾಲ ನಗರದಲ್ಲಿ ಇರುವವರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಾ ಇದ್ದಾರೆ. ಈಗ ನನ್ನ ಮದುವೆ ಆಗಿದ್ದಾರೆ. ಮದುವೆಗೆ ಬಂದಿರುವ ಎಲ್ಲರಿಗೂ ಧನ್ಯವಾದಗಳು ಎಂದು ಅನುಶ್ರೀ ಅವರು ಹೇಳಿದರು.
ನಮ್ಮದು ಸಿಂಪಲ್ ಲವ್ ಸ್ಟೋರಿ. ಅದನ್ನು ಯಾರು ಹೇಳಿದರೂ ನಂಬುತ್ತಾ ಇರಲಿಲ್ಲ. ನಾವಿಬ್ಬರು ಫ್ರೆಂಡ್ಸ್ ಆದೆವು. ನನಗೆ ಅವರು ಇಷ್ಟ ಆದರು. ಅವರಿಗೆ ನಾನು ಇಷ್ಟ ಆದೆ. ಲವ್ ಆಯಿತು. ಮದುವೆ ಆದೆವು. ರೋಷನ್ ಕೂಡ ಅಪ್ಪು ಸರ್ ಅವರನ್ನು ಬಹಳ ಇಷ್ಟಪಡುವವರು. ಪುನೀತ ಪರ್ವ ಕಾರ್ಯಕ್ರಮದಲ್ಲಿ ನಾವು ಭೇಟಿ ಮಾಡಿದ್ದು. ಒಂದು ಲೆಕ್ಕದಲ್ಲಿ ಅಪ್ಪು ಸರ್ ಅವರೇ ನಮ್ಮನ್ನು ಸೇರಿಸಿದ್ದಾರೆ ಎಂದು ಆಂಕರ್ ಅನುಶ್ರೀ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications