Kannada Bigg Boss: ಬಿಗ್ಬಾಸ್ ಮೇಲೆ ಗಂಭೀರ ಆರೋಪ ಮಾಡಿದ ವಿನ್ನರ್ ಹನುಮಂತ
ಕನ್ನಡ ಬಿಗ್ಬಾಸ್ ಸೀಸನ್-11ರ ವಿನ್ನರ್ ಆಗಿ ಹಳ್ಳಿಹೈದ ಹನುಮಂತ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇದರಿಂದ ಹನುಮಂತ ಜೀವನ ಸರಿ ಹೋಯಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಹನುಮಂತ ವೇದಿಕೆಯಲ್ಲೇ ಬಿಗ್ಬಾಸ್ ಕುರಿತು ಆರೋಪವೊಂದನ್ನು ಮಾಡಿದ್ದಾರೆ. ಇದನ್ನು ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ.
ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹನುಮಂತ ಮಾತನಾಡುವಾಗ ಈ ಶಾಕಿಂಗ್ ವಿಚಾರ ಹೇಳಿದ್ದಾರೆ. ಅಭಿಮಾನಿಯೊಬ್ಬ ಬಿಗ್ಬಾಸ್ನಿಂದ ಗೆದ್ದ ಹಣದಲ್ಲಿ ಏನೆಲ್ಲ ಮಾಡಿದ್ರಿ? ಎಂದು ಕೇಳಿದರು. ಇದಕ್ಕೆ ಅಚ್ಚರಿ ಉತ್ತರ ನೀಡಿರುವ ಹನುಮಂತು ಅಸಲಿ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಬಿಗ್ಬಾಸ್ ವಿಜೇತರಿಗೆ 50 ಲಕ್ಷ ರೂಪಾಯಿ ನಗದು ಬಹುಮಾನ ಘೋಷಣೆಯಾಗಿತ್ತು. ಅದರಂತೆ ಹನುಮಂತ ಈ ಸೀಸನ್ನ ಕಿರೀಟ ಗೆದ್ದುಬೀಗಿದ್ದಾರೆ. ಹೀಗಾಗಿ ಹನುಮಂತನಿಗೆ ಬಿಗ್ಬಾಸ್ನಿಂದ 50 ಲಕ್ಷ ರೂಪಾಯಿ ಬರುತ್ತೆ. ಆದರೆ ಅಸಲಿ ವಿಚಾರ ಅಂದ್ರೆ ಹನುಮಂತನಿಗೆ ಇಲ್ಲಿವರೆಗೆ ಹಣ ಕೈಸೇರಲೇ ಇಲ್ವಂತೆ. ಈ ವಿಚಾರವನ್ನು ಕಾರ್ಯಕ್ರಮದ ವೇದಿಕೆಯಲ್ಲೇ ಹನುಮಂತ ಹೇಳಿದ್ದಾರೆ.
ಬಿಗ್ಬಾಸ್ನಿಂದ ಇನ್ನೂ 50 ಲಕ್ಷ ರೂಪಾಯಿ ಬಂದಿಲ್ಲ. ಆ ಹಣ ಬರಲು ಸ್ವಲ್ಪ ತಡವಾಗುತ್ತೆ. ಬಂದ ಮೇಲೆ ಹೇಳ್ತೀನಿ ಅಣ್ಣ, ಆಗ ಬೇಕಾದ್ರೆ ಮನೆ ಕಡೆ ಬನ್ನಿ ಎಂದು ಅಭಿಮಾನಿ ಕೇಳಿದ ಪ್ರಶ್ನೆಗೆ ತಮಾಷೆಯಾಗಿ ಹೇಳಿದ್ದಾರೆ. ನನಗೆ ಅತಿ ಹೆಚ್ಚು ವೋಟ್ ಬಂದಿದೆ ಎಂದು ಗೊತ್ತೇ ಇರಲಿಲ್ಲ. ಸುದೀಪ್ ಅವರು ನನ್ನ ಕೈ ಎತ್ತಿದಾಗಲೇ ಈ ವಿಚಾರ ನನಗೂ ಗೊತ್ತಾಯ್ತು. ನಿಮ್ಮೆಲ್ಲರ ಆಶೀರ್ವಾದ, ಪ್ರೋತ್ಸಾಹ ಹೀಗೆ ಇರಲಿ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬಂದ ಬಿಗ್ ಬಾಸ್ 11ನೇ ಸೀಸನ್ ರಿಯಾಲಿಟಿ ಶೋನಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಚಿಲ್ಲೂರು ಬಡ್ನಿ ಗ್ರಾಮದ ನಿವಾಸಿ ಹನುಮಂತ ಲಮಾಣಿ ಅವರು ಜಯಶೀಲರಾಗಿದ್ರು. ಆನ್ಲೈನ್ ವೋಟಿಂಗ್ ಮೂಲಕ ಬರೋಬ್ಬರಿ 5.23 ಕೋಟಿ ಮತಗಳು ಹನುಮಂತ ಅವರಿಗೆ ಸಿಕ್ಕಿತ್ತು. ಈ ಮೂಲಕ ಹನುಮಂತ ಬಿಗ್ಬಾಸ್ ರಿಯಾಲಿಟಿ ಶೋ ಇತಿಹಾಸದಲ್ಲೇ ಅತಿ ಹೆಚ್ಚು ವೋಟ್ ಪಡೆದ ಸ್ಪರ್ಧಿ ಎಂಬ ದಾಖಲೆ ನಿರ್ಮಿಸಿದ್ದಾರೆ.

ಸವಣೂರಿನಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಚಿಲ್ಲೂರು ಬಡ್ನಿ ಗ್ರಾಮದ ತಾಂಡಾದ ಮನೆಯಲ್ಲಿ ಹನುಮಂತ ಅವರ ಕುಟುಂಬ ವಾಸವಿದೆ. ಮೇಘಪ್ಪ ಹಾಗೂ ಶೀಲವ್ವ ದಂಪತಿ ಪುತ್ರ ಹನುಮಂತ. ಕುರಿ ಕಾಯುವುದು ಇವರ ವೃತ್ತಿಯಾಗಿದ್ದು, ಹನುಮಂತನಿಗೆ ಒಬ್ಬರು ಸಹೋದರ ಹಾಗೂ ಮೂವರು ಸಹೋದರಿಯರಿದ್ದಾರೆ. ಬಿಗ್ಬಾಸ್ನಿಂದ ಬರುವ ಹಣದಲ್ಲಿ ಮನೆ ಕಟ್ಟಿಸುವುದು ಹಾಗೂ ಮದುವೆಯಾಗುವ ಕನಸನ್ನು ಹನುಮಂತ ಕಟ್ಟಿಕೊಂಡಿದ್ದಾರೆ.
ಬಿಗ್ಬಾಸ್ ಶುರುವಾದ ಆರಂಭದಲ್ಲೇ ಇಬ್ಬರು ಸ್ಪರ್ಧಿಗಳು ಜೋರು ಹೊಡೆದಾಟ ಮಾಡಿಕೊಂಡ ಕಾರಣ ಅವರನ್ನು ಮನೆಯಿಂದ ಹೊರಗೆ ಕಳಿಸಲಾಯಿತು. ಬಳಿಕ ಹನುಮಂತ ವೈಲ್ಡ್ಕಾರ್ಡ್ ಎಂಟ್ರಿ ಮೂಲಕ ಬಿಗ್ಬಾಸ್ ಮನೆಗೆ ಕಾಲಿಟ್ಟಿದ್ದರು. ಕೊನೆಯವರೆಗೆ ಸೈಲೆಂಟ್ ಆಗಿದ್ದ ಹನುಮಂತ ಉತ್ತಮ ಆಟವಾಡುವ ಮೂಲಕ ಕಪ್ ಗೆದ್ದೇಬಿಟ್ಟರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications