ಕರಾವಳಿ ಪ್ರತಿಭೆ & ‘ದಿಯಾ’ ಸಿನಿಮಾ ಹೀರೋ ಮಲಯಾಳಂಗೆ ಭರ್ಜರಿ ಎಂಟ್ರಿ!
ಕನ್ನಡ ಸಿನಿಮಾಗಳ ಗತ್ತು ಬದಲಾಗಿದ್ದು, ಜಗತ್ತಿನಾದ್ಯಂತ ಕನ್ನಡ ಸಿನಿಮಾಗಳಿಗು ಕೋಟಿ ಕೋಟಿ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಅದರಲ್ಲೂ ಕೆಜಿಎಫ್ & ಕಾಂತಾರ ಸಿನಿಮಾ ಇಂಡಸ್ಟ್ರಿ ಹಿಟ್ ಆದ ಬಳಿಕ ಸ್ಯಾಂಡಲ್ವುಡ್ ಅಬ್ಬರ ಬಲು ಜೋರಾಗಿದೆ. ಹೀಗಾಗಿ ಹೊರ ರಾಜ್ಯದಲ್ಲೂ ಕನ್ನಡ ನಟ & ನಟಿಯರಿಗೆ ಬೇಡಿಕೆ ಹೆಚ್ಚಾಗಿದೆ. ಇದೀಗ 'ದಿಯಾ' ಸಿನಿಮಾ ಹೀರೋ ದೀಕ್ಷಿತ್ ಶೆಟ್ಟಿ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
'ದಿಯಾ' ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಆದರು. ನ್ಯಾಚುರಲ್ ಸ್ಟಾರ್ ನಾನಿ ಜೊತೆ ನಟಿಸಿ ಗೆದ್ದಿದ್ದ ಕರಾವಳಿ ಪ್ರತಿಭೆ ಈಗ ಮತ್ತೊಂದು ಎಕ್ಸ್ಪೆರಿಮೆಂಟ್ ಮಾಡೋದಕ್ಕೆ ಮುಂದಾಗಿದ್ದಾರೆ. ಈ ಚಾಕ್ಲೇಟ್ ಹೀರೋ ಈಗ ಮಲಯಾಳಂ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದು, ಸದ್ಯ ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಇರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಯಾವ ಕ್ಯಾರೆಕ್ಟರ್ ನಿಭಾಯಿಸಲಿದ್ದಾರೆ ದಿಯಾ ಹೀರೋ? ಶೂಟಿಂಗ್ ಶೂರುವಾಗೋದು ಯಾವಾಗ ಅನ್ನೋದರ ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ಸಿನಿಮಾ ಟೈಟಲ್ ಏನು ಗೊತ್ತಾ?
ಒಪ್ಪೀಸ್ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ಕೇರಳದಲ್ಲಿ ಸರಳವಾಗಿ ನಡೆದಿದೆ. 10 ವರ್ಷ ವಿದೇಶದಲ್ಲಿದ್ದ ವ್ಯಕ್ತಿ ತಾನು ಹುಟ್ಟಿ ಬೆಳೆದ ಕೇರಳಗೆ ವಾಪಸ್ ಬಂದ್ರೆ ಏನಾಗುತ್ತೆ? ಎಂಬ ಕಥೆಯ ತಿರುಳು ಇಟ್ಟುಕೊಂಡು ಸಿನಿಮಾ ಹೆಣೆಯಲಾಗಿದೆ. ಫೆಬ್ರವರಿ ತಿಂಗಳಿಂದ 'ಒಪ್ಪೀಸ್' ಸಿನಿಮಾ ಶೂಟಿಂಗ್ ಶುರು ಆಗಲಿದೆ. ಇನ್ನು, ಸೌಜನ್ ಜೋಸೆಫ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಾ ಇದ್ದಾರೆ. ಪ್ರದ್ಯುಮನ್ಹಾ ಕೊಳ್ಳೇಕಾಲ ಬಂಡವಾಳವನ್ನು ಹೂಡಿದ್ದಾರೆ. ಎಂ. ಜಯಚಂದ್ರನ್ ಮ್ಯೂಸಿಕ್ ಈ ಚಿತ್ರಕ್ಕೆ ಇದೆ.
ದೀಕ್ಷಿತ್ ಶೆಟ್ಟಿ ಪಯಣ ಹೇಗಿತ್ತು?
ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಬಂದು 'ದಿಯಾ' ಚಿತ್ರದ ಮೂಲಕ ಪ್ರೇಕ್ಷಕರ ಮನಸ್ಸು ಸೆಳೆದಿದ್ರು ದೀಕ್ಷಿತ್ ಶೆಟ್ಟಿ. ಈಗ ದೀಕ್ಷಿತ್ ಅಲ್ಲು ಅರವಿಂದ್ ಪ್ರೆಸೆಂಟ್ ಮಾಡುತ್ತಿರುವ ಗರ್ಲ್ ಫ್ರೆಂಡ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ದೀಕ್ಷಿತ್ ನಟನೆ ಮಾಡಿರುವ, 'ಕೆಟಿಎಂ' ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಆಗುತ್ತಿದೆ. ಇದರ ಜೊತೆಗೆ, ತಮಿಳು ಸಿನಿಮಾ ಒಂದು ಕೂಡ ತೆರೆಗೆ ಬರಲು ಅಣಿಯಾಗಿದೆ. ಇಷ್ಟೆಲ್ಲದರ ಮಧ್ಯೆ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಹೊಸ ನಿರೀಕ್ಷೆಯಲ್ಲಿದ್ದಾರೆ.

ಒಟ್ನಲ್ಲಿ ಕನ್ನಡದಲ್ಲಿ ವಿಭಿನ್ನ ಕಥಾಹಂದರದ ಸಿನಿಮಾ ಮೂಲಕ ದೊಡ್ಡ ಹೆಸರು ಗಳಿಸಿ, ಮಿಂಚಿದ್ದ ನಟ ಈಗ ಮತ್ತೊಮ್ಮೆ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಅದೂ ನೆರೆ ರಾಜ್ಯದ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿರುವ ದೀಕ್ಷಿತ್ ಅವರಿಗೆ, ಅವರ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.
-
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications