Darshan Thoogudeepa: ಉಮಾಪತಿ ಶ್ರೀನಿವಾಸ್ ಗೌಡ ವಿರುದ್ಧ ನಟ ದರ್ಶನ್ ತೂಗುದೀಪ್ ವಿಚಾರದಲ್ಲಿ ಸಿಕ್ಕಿದೆ ಸ್ಫೋಟಕ ಸಾಕ್ಷಿ!
ಉಮಾಪತಿ ಶ್ರೀನಿವಾಸ್ ಗೌಡ ಯಾವಾಗ ದರ್ಶನ್ ತೂಗುದೀಪ್ ವಿರುದ್ಧ ಮಾತನಾಡಿದರೋ ಆ ಕ್ಷಣದಿಂದಲೇ ಭಾರಿ ದೊಡ್ಡ ಗಲಾಟೆ ಶುರುವಾಗಿದೆ. ದರ್ಶನ್ ತೂಗುದೀಪ್ ಅಭಿಮಾನಿ ಬಳಗ & ಉಮಾಪತಿ ಶ್ರೀನಿವಾಸ್ ಗೌಡ ನಡುವೆ ಯುದ್ಧ ಶುರುವಾಗಿದೆ. ಇಂತಹ ಸಮಯದಲ್ಲೇ ಉಮಾಪತಿ ಶ್ರೀನಿವಾಸ್ ಗೌಡ ವಿರುದ್ಧ ನಟ ದರ್ಶನ್ ತೂಗುದೀಪ್ ವಿಚಾರದಲ್ಲಿ ಸ್ಫೋಟಕ ಸಾಕ್ಷಿ ಸಿಕ್ಕಿಬಿದ್ದಿದೆ!
ಸರಿಯಾಗಿ 3 ವರ್ಷಗಳ ಹಿಂದೆ ಅಂದ್ರೆ 2021 ರಲ್ಲಿ ನಿರ್ಮಾಪಕ ಉಮಾಪತಿ & ನಟ ದರ್ಶನ್ ನಡುವೆ ದೊಡ್ಡ ಕಿರಿಕ್ ಆಗಿತ್ತು. ದೇಶಾದ್ಯಂತ ಈ ಸುದ್ದಿ ದೊಡ್ಡ ಸದ್ದು ಕೂಡ ಮಾಡಿತ್ತು. ಉಮಾಪತಿ ಶ್ರೀನಿವಾಸ್ ಗೌಡ ಮತ್ತು ದರ್ಶನ್ ತೂಗುದೀಪ್ ನಡುವೆ ದೊಡ್ಡ ಗಲಾಟೆಯೇ ನಡೆದಿತ್ತು. ಸಿನಿಮಾ ಮ್ಯಾಟರ್ಗೆ ಶುರುವಾಗಿದ್ದ ಗಲಾಟೆ ಕೊನೆಗೆ ಬಂದು ನಿಂತಿದ್ದು ಮಾತ್ರ ಹೊಡಿ & ಬಡಿ ಎನ್ನುವ ಹಂತಕ್ಕೆ. ಹೀಗೆ ಒಬ್ಬರಿಗೆ ಮತ್ತೊಬ್ಬರು ಅಣ್ಣ & ತಮ್ಮ ರೀತಿಯೇ ಇದ್ದ ಉಮಾಪತಿ ಶ್ರೀನಿವಾಸ್ ಗೌಡ ಮತ್ತು ದರ್ಶನ್ ತೂಗುದೀಪ್ ಹೊಡೆದಾಡಿಕೊಂಡಿದ್ದು ಉಂಟು ಎಂಬ ಆರೋಪವೂ ಇದೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ್ರ ಫ್ಯಾನ್ಸ್ ಉಮಾಪತಿ ವಿರುದ್ಧ ರೊಚ್ಚಿಗೆದ್ದು ಎಂತಹ ಮಹತ್ವದ ಸಾಕ್ಷಿ ತಂದಿದ್ದಾರೆ ಗೊತ್ತಾ?

ಉಮಾಪತಿ ವಿರುದ್ಧ ಮಹತ್ವದ ಸಾಕ್ಷಿ??
ದರ್ಶನ್ ತೂಗುದೀಪ್ ಸಿನಿಮಾ 'ರಾಬರ್ಟ್' ನಿರ್ಮಿಸಿದ್ದ ಉಮಾಪತಿ ಶ್ರೀನಿವಾಸ್ ಗೌಡಗೆ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದವು. ಆದರೆ ಅದಕ್ಕೂ ಮೊದಲು ಸಿನಿಮಾ ನಿರ್ಮಿಸುವ ಸಮಯದಲ್ಲಿ, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ದರ್ಶನ್ ತೂಗುದೀಪ್ ಬಗ್ಗೆ ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗುತ್ತಿದ್ದು. ಹಾಗೇ ದರ್ಶನ್ ಅವರ ಅಭಿಮಾನಿಗಳು ಈ ವಿಡಿಯೋ ಎಳೆದು ತಂದು ಛಡಿ ಏಟು ಕೊಡುತ್ತಿದ್ದೀವಿ ತಗೋ ಅಂತಿದ್ದಾರೆ.
ಉಮಾಪತಿ ಗೌಡ ಅವರು ಮಾತನಾಡಿದ್ದ ಹಳೆಯ ವಿಡಿಯೋದಲ್ಲಿ, 'ನಾನು ಕೂಡ ದರ್ಶನ್ ಸರ್ ಫ್ಯಾನ್. ಇದೇ ಕಾರಣಕ್ಕೆ ನಾನು ನಿರ್ಮಾಪಕನಾಗಿ ಸಿನಿಮಾ ಮಾಡ್ತಿಲ್ಲ ನಿಮ್ಮ ಅಭಿಮಾನಿ ಆಗಿ ಈ ಸಿನಿಮಾ ಮಾಡುತ್ತಿದ್ದೀನಿ ಅಂತಾ ಹೇಳಿದ್ದೆ. ನಾನು 7ನೇ ಕ್ಲಾಸ್ ಓದುವಾಗಿನಿಂದ ಕೂಡ ದರ್ಶನ್ ಸರ್ ಫ್ಯಾನ್' ಎಂಬುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಈ ಹಿಂದೆ 'ರಾಬರ್ಟ್' ಚಿತ್ರದ ನಿರ್ಮಾಣ ಸಮಯದಲ್ಲಿ ಮಾತನಾಡಿದ್ದ ವಿಡಿಯೋ ಈಗ ವೈರಲ್ ಆಗುತ್ತಿದೆ.
'ಇದಕ್ಕೆ ಹೇಳೋದು ಎರಡು ನಾಲಿಗೆ'
ಹೀಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ವಿರುದ್ಧ ಈ ವಿಡಿಯೋ ಸಾಕ್ಷಿ ತಂದಿರುವ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು, 'ಆಗ ಒಂದು ಮಾತು ಹೇಳಿರುವ ಉಮಾಪತಿ ಈಗ ನಮ್ಮ ಡಿ-ಬಾಸ್ ವಿರುದ್ಧವೇ ಮಾತನಾಡುತ್ತಿದ್ದಾರೆ. ಇದಕ್ಕೆ ಹೇಳೋದು ಎರಡು ನಾಲಿಗೆ' ಅಂತಾ ಕಮೆಂಟ್ ಮಾಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ವಿಡಿಯೋ, ಸೋಷಿಯಲ್ ಮೀಡಿಯಾ ತುಂಬಾ ವೈರಲ್ ಆಗುತ್ತಿದೆ. ಅಲ್ಲದೆ ಪರ & ವಿರೋಧದ ಮಾತುಗಳೂ, ಇದೇ ಸಮಯದಲ್ಲಿ ಕೇಳಿಬರುತ್ತಿದ್ದು. ಇದೆಲ್ಲಾ ಎಲ್ಲಿಗೆ ಬಂದು ನಿಲ್ಲುತ್ತೋ ಕಾದು ನೋಡಬೇಕಿದೆ.
ದರ್ಶನ್ ರಿಲೀಸ್ ಆಗುವುದು ಯಾವಾಗ?
ಅಂದಹಾಗೆ ದರ್ಶನ್ ತೂಗುದೀಪ್ ಅವರು ಇನ್ನೂ ಪರಪ್ಪನ ಅಗ್ರಹಾರ ಜೈಲಲ್ಲಿ ಪರದಾಡುತ್ತಾ ಇದ್ದಾರೆ. ಯಾಕಂದ್ರೆ ದರ್ಶನ್ ಅವರಿಗೆ ಜಾಮೀನು ನೀಡಲು ಇನ್ನು ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ತನಿಖೆ ನಡೆಸುತ್ತಿರುವ ಪೊಲೀಸರು. ಆ ಚಾರ್ಜ್ ಶೀಟ್ ಹಾಕುವ ತನಕ ಕೂಡ ಬೇಲ್ ಪಡೆಯಲು ಆಗಲ್ಲ. ದರ್ಶನ್ ಅವರ ಪರ ವಕೀಲರು ಜಾಮಿನು ಪಡೆಯೋದಕ್ಕಾಗಿ ಅರ್ಜಿ ಸಲ್ಲಿಸಲು ಆಗಲ್ಲ. ಹೀಗಾಗಿ ದರ್ಶನ್ ಅವರು ಜೈಲಿಂದ ಹೊರಬರುವುದು ಭಾರಿ ತಡವಾಗ್ತಿದ್ದು, ಆದರೆ ಶೀಘ್ರದಲ್ಲೇ ಅವರು ಹೊರಗೆ ಬರ್ತಾರೆ ಅನ್ನೋದು ಅಭಿಮಾನಿಗಳ ನಂಬಿಕೆಯಾಗಿದೆ.
ದರ್ಶನ್ & ಜೈಲು ಸಿಬ್ಬಂದಿ ಕಿತ್ತಾಟ?
ಪರಪ್ಪನ ಅಗ್ರಹಾರದ ವಿಐಪಿ ಸೆಲ್ನಲ್ಲಿ ನಟ ದರ್ಶನ್ ತೂಗುದೀಪ್ ಅವರು ಇದ್ದಾರೆ. ಈ ರೀತಿ ವಿಐಪಿ ಸೆಲ್ ಅಂದ್ರೆ ಪ್ರಮುಖ ವ್ಯಕ್ತಿಗಳ ಜೈಲಿನ ಕೋಣೆಗಳ ಬಳಿ ಯಾವುದೇ ಖೈದಿ & ವ್ಯಕ್ತಿಗಳನ್ನ ಸುಳಿಯಲು ಕೂಡ ಬಿಡುವುದಿಲ್ಲ. ಆದರೆ ನಟ ದರ್ಶನ್ ಅವರು ಮಾತ್ರ ಇಲ್ಲಿ ಕೊಲೆ ಆರೋಪಿ ಆಗಿ ಪರಪ್ಪನ ಅಗ್ರಹಾರದ ವಿಐಪಿ ಸೆಲ್ನಲ್ಲಿ ಇದ್ದರೂ, ಜೈಲಿನ ಕೋಣೆ ಬಿಟ್ಟು ಹೊರಬಂದು ಓಡಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ಪರಪ್ಪನ ಅಗ್ರಹಾರದಲ್ಲು ಕಿರಿಕ್ ಶುರುವಾಗಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ ಇದೆಲ್ಲಾ ಸುಳ್ಳು ಅಂತಿದ್ದಾರೆ, ಅವರ ಸೆಲೆಬ್ರಿಟಿಗಳು ಅಂದ್ರೆ ಅಭಿಮಾನಿಗಳು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications