ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶರಾಗಿದ್ದಾರೆ. ಅವರಲ್ಲಿ ವಯೋಸಹಜ ಕಾಯಿಲೆ ಕಾಣಿಸಿಕೊಂಡಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು (ಜನವರಿ 15) ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಸರಿಗಮ ವಿಜಿ ಎಂದೇ ಜನಪ್ರಿಯತೆ ಪಡೆದಿರುವ ಅವರ ಪೂರ್ತಿ ಹೆಸರು ಆರ್. ವಿಜಯ್ ಕುಮಾರ್. ಮೊದಲು ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದ ಇವರನ್ನು ಸರಿಗಮ ವಿಜಿ ಕರೆಯಲಾಗುತ್ತಿತ್ತು. 1980ರಲ್ಲಿ ಗೀತಪ್ರಿಯಾ ನಿರ್ದೇಶನದ ಬೆಳವಳದ ಮಡಿಲಲ್ಲಿ ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಕಾಲಿಟ್ಟ ಸರಿಗಮ ವಿಜಿ ಬಳಿಕ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ.

ನಿರ್ದೇಶನದಲ್ಲಿಯೂ ಅತೀವ ಆಸಕ್ತಿ ಹೊಂದಿದ್ದ ಅವರು, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. ಅಲ್ಲದೇ 2,400 ಧಾರಾವಾಹಿಗಳಲ್ಲಿ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ. ಅಲ್ಲದೇ 1390ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದು, ಇವರ ನಿರ್ದೇಶನದ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯಗಳಲ್ಲಿಯೂ ಪ್ರದರ್ಶನ ಕಂಡಿವೆ.
ಮದುವೆ ಮಾಡಿ ನೋಡು, ಬೆಳುವಲದ ಮಡಿಲಲ್ಲಿ, ಕಪ್ಪು ಕೋಲ, ಪ್ರತಾಪ್, ಮನ ಮೆಚ್ಚಿದ ಸೊಸೆ, ಕೆಂಪಯ್ಯ ಐಪಿಎಸ್, ಜಗತ್ ಕಿಲಾಡಿ, ಯಮಲೋಕದಲ್ಲಿ ವೀರಪ್ಪನ್, ದುರ್ಗಿ ಸೇರಿದಂತೆ ಅನೇಕ ಹಿಟ್ ಸಿನಿಮಾಗಳಲ್ಲಿ ಸರಿಗಮ ವಿಜಿ ನಟಿಸಿದ್ದರು. ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಸರಿಗಮ ವಿಜಿ ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಹಿರಿಯ ನಟರು ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.
ಸರಿಗಮ ವಿಜಿ ಆರೋಗ್ಯಕ್ಕೆ ಏನಾಗಿತ್ತು?
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅವರಿಗೆ ಕಳೆದ ಕೆಲ ದಿನಗಳಿಂದಲೂ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಏಕಾಏಕಿ ಶ್ವಾಸಕೋಶದಲ್ಲಿ ಸಮಸ್ಯೆ ಎದುರಾಗಿದೆ. ಕೂಡಲೇ ಅವರನ್ನು ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲೇ ಇದ್ದ ಅವರಿಗೆ ತಜ್ಞ ವೈದ್ಯರಿಂದ ನ್ಯುಮೋನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಕೊಡಿಸಲಾಗಿತ್ತು. ಈ ನಡುವೆ ಹಿರಿಯ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂಭೀರ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಬಗ್ಗೆ ಅವರ ಪುತ್ರನೇ ಸ್ಪಷ್ಟನೆ ಕೂಡ ನೀಡಿದ್ದರು. ಆದರೆ ದುರಾದೃಷ್ಟವಶಾತ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications