ಕನ್ನಡತಿ ಧಾರಾವಾಹಿ ನಟ ಕಿರಣ್ ರಾಜ್ಗೆ ಅಪಘಾತ: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ
ಬೆಂಗಳೂರು, ಸೆಪ್ಟೆಂಬರ್ 11: ಕಿರುತೆರೆಯ ಜನಪ್ರಿಯ ಧಾರಾವಾಹಿ ಕನ್ನಡತಿ ಹರ್ಷ ಪಾತ್ರದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟ ಕಿರಣ್ ರಾಜ್ ಕಾರು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ನಟ ಕಿರಣ್ ರಾಜ್ ಕಾರು ಬೆಂಗಳೂರಿನ ಕೆಂಗೇರಿ ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರು ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಆ ಕೂಡಲೇ ಕಿರಣ್ ರಾಜ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದ್ದು, ಕಿರಣ್ ರಾಜ್ ಹೇಗಿದ್ದಾರೆ ಎನ್ನುವುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಬಹಿರಂಗ ಪಡಿಸಿಲ್ಲ. ನಟ ಕಿರಣ್ ರಾಜ್ ಕಾರು ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ.

ಕನ್ನಡತಿ ಧಾರಾವಾಹಿ ಹರ್ಷ ಪಾತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಕಿರಣ್ ರಾಜ್ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ. ಕಿರಣ್ ರಾಜ್ ಅಭಿನಯದ ರಾನಿ ಸಿನಿಮಾ ನಾಳೆ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್, ಟ್ರೇಲರ್ ಮೂಲಕ ರಾನಿ ಸಿನಿಮಾ ಬಹಳ ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾಗೆ ಒಂದು ದಿನ ಬಾಕಿ ಇರುವಾಗಲೇ ನಟ ಕಿರಣ್ ರಾಜ್ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳಿಗೆ ನೋವಿನ ಸಂಗತಿಯಾಗಿದೆ.












Click it and Unblock the Notifications