Actress Nandini: ಕನ್ನಡ ಕಿರುತೆರೆಯ ನಟಿ ನಂದಿನಿ ಆತ್ಮಹತ್ಯೆ: ಬದುಕು ದುರಂತ ಅಂತ್ಯ
ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ತಮ್ಮ ನಟನೆ ಮೂಲಕವೇ ಜನಪ್ರಿಯತೆ ಪಡೆದಿದ್ದ 'ಗೌರಿ' ಧಾರವಾಹಿ ಖ್ಯಾತಿಯ ನಟಿ ನಂದಿನಿ (Serial Actress Nandini) ಅವರು ಇಂದು ಸೋಮವಾರ ಸಂಜೆ ಬೆಂಗಳೂರಿನಲ್ಲಿ ನಿಧನರಾಗಿದರು. ನಂದಿನಿ ಡೆತ್ನೋಟ್ ಬರೆದಿಟ್ಟು ಆರ್ಆರ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾವಿಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಪೊಲೀಸ್ ತನಿಖೆಯಿಂದ ಗೊತ್ತಾಗಬೇಕಿದೆ.
ಕನ್ನಡ ಹಾಗೂ ತಮಿಳು ಧಾರವಾಹಿಯಲ್ಲಿ ನಟಿಸಿ ಮನೆ ಮಾತಾಗಿದ್ದರು. ಕನ್ನಡದಲ್ಲಿ 'ಗೌರಿ' ಧಾರವಾಹಿಯಲ್ಲಿ ಅವರು ತಮ್ಮ ಪಾತ್ರದಿಂದಲೇ ಜನಪ್ರಿಯತೆ ಪಡೆದುಕೊಂಡಿದ್ದರು. ಕನ್ನಡದಲ್ಲಿ 'ಜೀವ ಹೂವಾಗಿದೆ, ನೀನಾದೆ ನಾ, ಸಂಘರ್ಷ, ಮಧುಮಗಳು' ಧಾರವಾಹಿಯಲ್ಲಿ ನಟಿಸಿದ್ದರು. ಬಣ್ಣದ ಲೋಕದಲ್ಲಿ ಅದ್ಭುತ ಯಶಸ್ಸು ಕಾಣಬೆಂಕೆಂದು ನಂದಿನಿ ಆಸೆ ಹೊಂದಿದ್ದರು. ಆದರೆ ಅವರ ಬದುಕು ಈ ಸಾವಿನೊಂದಿಗೆ ದುರಂತ ಅಂತ್ಯ ಕಂಡಿದೆ.

'ಗೌರಿ' ಧಾರವಾಹಿಯಲ್ಲಿ ದ್ವಿಪಾತ್ರದಲ್ಲಿ ನಟಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದದ್ದ ನಂದಿನಿ ಅವರ ದುರ್ಗಾ ಹಾಗೂ ಕನಕ ಪಾತ್ರಗಳು ವೀಕ್ಷಕರಿಗೆ ಇಷ್ಟವಾಗಿದ್ದವು. ಅವರ ಈ ಸಾವಿನಿಂದ ಸ್ನೇಹಿತರು, ಧಾರವಾಹಿ ತಂಡಕ್ಕೆ, ಸಹ ಕಲಾವಿದರಿಗೆ ಆಘಾತ ಉಂಟಾಗಿದೆ.
ಪಿಜಿಯಲ್ಲಿ ವಾಸವಿದ್ದ ನಂದಿನಿ
ಮೂಲತಃ ಕೊಟ್ಟೂರಿನವರಾಗಿದ್ದ ನಂದಿನಿ ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸ ಮಾಡುತ್ತಿದ್ದರು. ತಾಯಿಗೆ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಅವರು ಖಿನ್ನತೆಗೆ ಒಳಗಾಗಿದ್ದರು ಅಂತಲೂ ಹೇಳಲಾಗುತ್ತಿದೆ. ಸದ್ಯ ಅವರ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅದರ ವರದಿ ಬಳಿಕವೇ ಸತ್ಯಾಸತ್ಯತೆ ಗೊತ್ತಾಗಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕಿರುತೆರೆಯಲ್ಲಿ ಮಿಂಚಿ ಜನರಿಗೆ ಚಿರಪರಿಚಿತರಾಗಿದ್ದರು. ಇನ್ನೇನು ಅವರಿಗೆ ಬೇರೆ ಬೇರೆ ಸಿನಿಮಾಗಳಲ್ಲಿ ಅವಕಾಶ ಬರುವ ಸನ್ನಿವೇಶ ಸೃಷ್ಟಿಯಾಗಿತ್ತು. ಅವರು ಅಂದುಕೊಂಡ ಬಣ್ಣದ ಕನಸುಗಳು ನನಸಾಗಲು ದಾರಿ ಸಿಗುವ ಹೊತ್ತಿನಲ್ಲೇ ನಟಿಯು ನಿಧನರಾಗಿದ್ದು, ಅನೇಕರಿಗೆ ಅಚ್ಚರಿ ಉಂಟು ಮಾಡಿದೆ. ಸಹ ಕಲಾವಿದರು, ಸ್ನೇಹಿತರು ಮೃತ ನಂದಿನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications