Actress Nandini: ಕನ್ನಡ ಕಿರುತೆರೆಯ ನಟಿ ನಂದಿನಿ ಆತ್ಮಹತ್ಯೆ: ಬದುಕು ದುರಂತ ಅಂತ್ಯ
ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ತಮ್ಮ ನಟನೆ ಮೂಲಕವೇ ಜನಪ್ರಿಯತೆ ಪಡೆದಿದ್ದ 'ಗೌರಿ' ಧಾರವಾಹಿ ಖ್ಯಾತಿಯ ನಟಿ ನಂದಿನಿ (Serial Actress Nandini) ಅವರು ಇಂದು ಸೋಮವಾರ ಸಂಜೆ ಬೆಂಗಳೂರಿನಲ್ಲಿ ನಿಧನರಾಗಿದರು. ನಂದಿನಿ ಡೆತ್ನೋಟ್ ಬರೆದಿಟ್ಟು ಆರ್ಆರ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾವಿಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಪೊಲೀಸ್ ತನಿಖೆಯಿಂದ ಗೊತ್ತಾಗಬೇಕಿದೆ.
ಕನ್ನಡ ಹಾಗೂ ತಮಿಳು ಧಾರವಾಹಿಯಲ್ಲಿ ನಟಿಸಿ ಮನೆ ಮಾತಾಗಿದ್ದರು. ಕನ್ನಡದಲ್ಲಿ 'ಗೌರಿ' ಧಾರವಾಹಿಯಲ್ಲಿ ಅವರು ತಮ್ಮ ಪಾತ್ರದಿಂದಲೇ ಜನಪ್ರಿಯತೆ ಪಡೆದುಕೊಂಡಿದ್ದರು. ಕನ್ನಡದಲ್ಲಿ 'ಜೀವ ಹೂವಾಗಿದೆ, ನೀನಾದೆ ನಾ, ಸಂಘರ್ಷ, ಮಧುಮಗಳು' ಧಾರವಾಹಿಯಲ್ಲಿ ನಟಿಸಿದ್ದರು. ಬಣ್ಣದ ಲೋಕದಲ್ಲಿ ಅದ್ಭುತ ಯಶಸ್ಸು ಕಾಣಬೆಂಕೆಂದು ನಂದಿನಿ ಆಸೆ ಹೊಂದಿದ್ದರು. ಆದರೆ ಅವರ ಬದುಕು ಈ ಸಾವಿನೊಂದಿಗೆ ದುರಂತ ಅಂತ್ಯ ಕಂಡಿದೆ.

'ಗೌರಿ' ಧಾರವಾಹಿಯಲ್ಲಿ ದ್ವಿಪಾತ್ರದಲ್ಲಿ ನಟಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದದ್ದ ನಂದಿನಿ ಅವರ ದುರ್ಗಾ ಹಾಗೂ ಕನಕ ಪಾತ್ರಗಳು ವೀಕ್ಷಕರಿಗೆ ಇಷ್ಟವಾಗಿದ್ದವು. ಅವರ ಈ ಸಾವಿನಿಂದ ಸ್ನೇಹಿತರು, ಧಾರವಾಹಿ ತಂಡಕ್ಕೆ, ಸಹ ಕಲಾವಿದರಿಗೆ ಆಘಾತ ಉಂಟಾಗಿದೆ.
ಪಿಜಿಯಲ್ಲಿ ವಾಸವಿದ್ದ ನಂದಿನಿ
ಮೂಲತಃ ಕೊಟ್ಟೂರಿನವರಾಗಿದ್ದ ನಂದಿನಿ ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸ ಮಾಡುತ್ತಿದ್ದರು. ತಾಯಿಗೆ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಅವರು ಖಿನ್ನತೆಗೆ ಒಳಗಾಗಿದ್ದರು ಅಂತಲೂ ಹೇಳಲಾಗುತ್ತಿದೆ. ಸದ್ಯ ಅವರ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅದರ ವರದಿ ಬಳಿಕವೇ ಸತ್ಯಾಸತ್ಯತೆ ಗೊತ್ತಾಗಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕಿರುತೆರೆಯಲ್ಲಿ ಮಿಂಚಿ ಜನರಿಗೆ ಚಿರಪರಿಚಿತರಾಗಿದ್ದರು. ಇನ್ನೇನು ಅವರಿಗೆ ಬೇರೆ ಬೇರೆ ಸಿನಿಮಾಗಳಲ್ಲಿ ಅವಕಾಶ ಬರುವ ಸನ್ನಿವೇಶ ಸೃಷ್ಟಿಯಾಗಿತ್ತು. ಅವರು ಅಂದುಕೊಂಡ ಬಣ್ಣದ ಕನಸುಗಳು ನನಸಾಗಲು ದಾರಿ ಸಿಗುವ ಹೊತ್ತಿನಲ್ಲೇ ನಟಿಯು ನಿಧನರಾಗಿದ್ದು, ಅನೇಕರಿಗೆ ಅಚ್ಚರಿ ಉಂಟು ಮಾಡಿದೆ. ಸಹ ಕಲಾವಿದರು, ಸ್ನೇಹಿತರು ಮೃತ ನಂದಿನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications