Oscars 2025: ಆಸ್ಕರ್ ಅಂಗಳಕ್ಕೆ ಕನ್ನಡ ಕಿರುಚಿತ್ರ
ಕನ್ನಡ ಸಿನಿಮಾರಂಗ ಸದ್ಯ ಸಂಕಷ್ಟದ ದಿನಗಳಲ್ಲಿದೆ. ಈ ವರ್ಷ ಹೇಳಿಕೊಳ್ಳುವಂತ ಮೆಗಾ ಹಿಟ್ ಸಿನಿಮಾ ಬರದೇ ಇರುವುದು, ಪರಭಾಷಾ ಸಿನಿಮಾಗಳ ಹಾವಳಿ, ದರ್ಶನ್ ಬಂಧನ ಸೇರಿದಂತೆ ಹಲವು ಸಮಸ್ಯೆಗಳು ಕನ್ನಡ ಚಿತ್ರರಂಗವನ್ನು ಬಾಧಿಸಿವೆ. ಇದೆಲ್ಲದರ ನಡುವೆ ಕನ್ನಡ ಸಿನಿಮಾ ಪ್ರೇಮಿಗಳು, ಕನ್ನಡಿಗರು ಹೆಮ್ಮೆ ಪಡುವ ಸುದ್ದಿಯೊಂದು ಸಿಕ್ಕಿದೆ. ಕನ್ನಡದ ಕಿರುಚಿತ್ರವೊಂದು ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ.
ಚಿದಾನಂದ ಎಸ್ ನಾಯಕ್ ನಿರ್ದೇಶಿಸಿರುವ ಕನ್ನಡ ಕಿರುಚಿತ್ರ ಸೂರ್ಯಕಾಂತಿ ಹೂಗೆ ಮೊದಲು ಗೊತ್ತಾಗಿತ್ತು (Sunflowers Were the First Ones to Know) ಲೈವ್ ಆಕ್ಷನ್ ಕಿರುಚಿತ್ರ ವಿಭಾಗದಲ್ಲಿ ಆಸ್ಕರ್ 2025 ಗೆ ಅರ್ಹತೆ ಪಡೆದಿದೆ. ಚಿದಾನಂದ ಎಸ್ ನಾಯಕ್ ಅಧ್ಯಯನ ಮಾಡಿದ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್ಟಿಐಐ) ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಕಾನ್ ಚಿತ್ರೋತ್ಸವದಲ್ಲಿ ಪ್ರಶಸ್ತಿಯ ಗರಿ
ಸೂರ್ಯಕಾಂತಿ ಹೂಗೆ ಮೊದಲು ಗೊತ್ತಾಗಿತ್ತು ಕಿರುಚಿತ್ರ ಈ ವರ್ಷದ ಆರಂಭದಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ನ ಲಾ ಸಿನೆಫ್ ಸೆಲೆಕ್ಷನ್ನಲ್ಲಿ ಮೊದಲ ಬಹುಮಾನ ಗೆದ್ದುಕೊಂಡಾಗ ಸಾಕಷ್ಟು ಸುದ್ದಿ ಮಾಡಿತ್ತು. ಭಾರತೀಯ ಜಾನಪದ ಕಥೆಗಳು ಮತ್ತು ಸಂಪ್ರದಾಯಗಳ ಕುರಿತಾದ ಈ ಕಿರುಚಿತ್ರವು 16 ನಿಮಿಷಗಳ ಅವಧಿಯದ್ದಾಗಿದೆ. ಈ ಕಿರುಚಿತ್ರಕ್ಕೆ ಚಿತ್ರದ ತಂಡದಲ್ಲಿ ಸೂರಜ್ ಠಾಕೂರ್ ಛಾಯಾಗ್ರಾಹಣವಿದ್ದು, ಮನೋಜ್ ವಿ ಸಂಕಲನ ಮತ್ತು ಅಭಿಷೇಕ್ ಕದಮ್ ಧ್ವನಿ ವಿನ್ಯಾಸ ಮಾಡಿದ್ದಾರೆ. ಕಾನ್ನ ಲಾ ಸಿನೆಫ್ ಜ್ಯೂರಿಯು ಚಲನಚಿತ್ರವನ್ನು ಕಿರು ಚಿತ್ರದ ಕಥೆ ಹೇಳುವಿಕೆ ಮತ್ತು ಅತ್ತುತ್ತಮ ನಿರ್ದೇಶನಕ್ಕಾಗಿ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿತ್ತು.
ತಮ್ಮ ಸಿನಿಮಾ ಆಸ್ಕರ್ ಪ್ರಶಸ್ತಿಗೆ ಸ್ಪರ್ಧೆಗೆ ಆಯ್ಕೆಯಾದ ಬೆನ್ನಲ್ಲೇ ಪತ್ರಿಕಾ ಹೇಳಿಕೆ ನೀಡಿರುವ ನಿರ್ದೇಶಕ ಚಿದಾನಂದ್, "ನನಗೆ ನೆನಪಿರುವವರೆಗೂ ಈ ಕಥೆಯನ್ನು ಹೇಳಬೇಕು ಎನ್ನುವುದು ಆಸೆಯಾಗಿದೆ. ನಮ್ಮ ಗುರಿ ಈ ಕಥೆಗಳನ್ನು ಕೇಳುವ ಅನುಭವವನ್ನು ಮರುಸೃಷ್ಠಿಸುವುದಷ್ಟೇ ಅಲ್ಲದೆ, ಅವುಗಳನ್ನು ಪ್ರಾಮಾಣಿಕವಾಗಿ ಬದುಕುವ ಅನುಭವಾಗಿದೆ, ಇದು ಜಗತ್ತಿನಾದ್ಯಂತ ಪ್ರೇಕ್ಷಕರಿಗೆ ಕನೆಕ್ಟ್ ಆಗುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದಿದ್ದಾರೆ.
ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವದಲ್ಲಿ ಅತ್ಯುತ್ತಮ ಭಾರತೀಯ ಸ್ಪರ್ಧಾತ್ಮಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಈಗ ವಿಶ್ವದ ಅತ್ಯುತ್ತಮ ಕಿರುಚಿತ್ರಗಳ ಜೊತೆಗೆ ಸ್ಪರ್ಧಿಸಲಿದೆ.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications