ಶ್ರೀಧರ್ಗೆ ಹುಡುಗಿಯರ ಸಹವಾಸ ಇತ್ತು, ಏಡ್ಸ್ ಬಂದಿತ್ತು: ಪತ್ನಿಯ ಆಡಿಯೋ ವೈರಲ್
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟ ಶ್ರೀಧರ್ ನಾಯಕ್ ಅವರು ಇಂದು ನಿಧನರಾಗಿದ್ದಾರೆ. ಸುರದ್ರೂಪಿಯಾಗಿದ್ದ ಅವರು ದಿಢೀರನೆ ಅನಾರೋಗ್ಯ ಸಮಸ್ಯೆಯಿಂದಾಗಿ ಗುರುತೇ ಸಿಗದಂತೆ ಬದಲಾಗಿದ್ದರು. ಹಲವು ತಿಂಗಳಿನಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದ ಅವರು ತಮ್ಮ ಚಿಕಿತ್ಸೆಗಾಗಿ ಸಹಾಯ ಕೋರಿದ್ದರು. ಶ್ರೀಧರ್ ತಮ್ಮ ದಾಂಪತ್ಯ ಜೀವನದ ಬಗ್ಗೆಯೂ ಬೇಸರ ತೋಡಿಕೊಂಡಿದ್ದರು. ಪತ್ನಿ ವಿರುದ್ಧವೂ ಆರೋಪಗಳನ್ನು ಮಾಡಿದ್ದರು. ಅದಕ್ಕೆ ಅವರ ಪತ್ನಿ ಕೂಡ ಪ್ರತಿಕ್ರಿಯಿಸಿ ಪತಿ ಶ್ರೀಧರ್ ಮೇಲೆ ಹಲವು ಗಂಭೀರ ಆರೋಪಗಳನ್ನು ಮಾಡಿದ್ದ ಆಡಿಯೋ ಈಗ ವೈರಲ್ ಆಗಿದೆ.
ಆಡಿಯೋ ಮೂಲಕ ಕ್ಲಾರಿಟಿ ಕೊಟ್ಟಿದ್ದ ಶ್ರೀಧರ್ ಪತ್ನಿ ಜ್ಯೋತಿ, ʼ ನಾನು ಗಾಯಕಿ ಆಗಬೇಕು ಎಂದು ಬಂದವಳು, ಈ ವೇಳೆ ಶ್ರೀಧರ್ ಪರಿಚಯವಾಗಿ ಪ್ರೀತಿ ಮೂಡಿತು. ಶ್ರೀಧರ್ ಪ್ರಪೋಸ್ ಮಾಡಿದ. ನಮ್ಮ ಮನೇಲಿ ಬಂದು ಮಾತನಾಡಿದ್ರೂ ಜಾತಕ ಕೂಡಲಿಲ್ಲ. ಯಾರೂ ಒಪ್ಪದಿದ್ರೂ ನನಗೆ ಇಷ್ಟವಾಗಿದ್ದರಿಂದ ಮದುವೆ ಆದ್ವಿ. ಶ್ರೀಧರ್ ನನ್ನ ಮದುವೆಯಾದ ಎರಡೇ ವರ್ಷಕ್ಕೆ ನನ್ನಿಂದ ದೂರವಾಗಿದ್ದರು. ನಾವಿಬ್ಬರೂ ಬಡತನದಲ್ಲೇ ಬೆಳೆದಿದ್ದವರು. ಇಬ್ಬರೂ ಒಟ್ಟಿಗೆ ಒಂದು ಫಿಲಂ ಸಂಸ್ಥೆಯಲ್ಲಿ ಪರಿಚಯವಾಗಿ ಬಳಿಕ ಮದುವೆ ಆಗಿದ್ದೆವು. ಆದರೆ ಮದುವೆಯಾದ ಬಳಿಕ ಸಣ್ಣ ಪುಟ್ಟ ವಿಚಾರಕ್ಕೂ ಗಲಾಟೆ ನಡೆಯುತ್ತಿತ್ತುʼ ಎಂದಿದ್ದಾರೆ.

ಮದುವೆಯಾದ ಮೇಲೆ ಶ್ರೀಧರ್ ತುಂಬಾ ಬದಲಾದ. ತುಂಬಾ ರಿಸ್ಟ್ರಿಕ್ಷನ್ ಹಾಕುತ್ತಿದ್ದ. ಸುಮಾರು 11 ವರ್ಷಗಳ ಹಿಂದಿನ ಮಾತನ್ನು ಈಗ ಹೇಳಲು ಆಗಲ್ಲ, ಅವನು ಸಾಕಷ್ಟು ಬಾರಿ ನನಗೆ ಹೊಡೆದಿದ್ದಾನೆ. ಇದನ್ನು ನಾನು ಎಲ್ಲಿಯೂ ಹೇಳಿಕೊಂಡಿಲ್ಲ. ನಾನು ಅವರ ಕ್ಯಾರೆಕ್ಟರ್ ಮೇಲೆ ಎಂದೂ ಅನುಮಾನ ಪಟ್ಟಿಲ್ಲ. ಅವನಿಗೆ ಎಚ್ಐವಿ, ಕ್ಯಾನ್ಸರ್ ಕೂಡ ಬಂದಿದೆ ಎಂದು ಹೇಳಿದ್ದರು. ಅವನಿಗೆ ತುಂಬಾ ಅಹಂಕಾರ ಇತ್ತು, ದೇವರು ಕೊಟ್ಟ ಎಲ್ಲವನ್ನೂ ಕಳೆದುಕೊಂಡ ಎಂದಿದ್ದಾರೆ.
ʼಪತಿ ಶ್ರೀಧರ್ಗೆ ಹುಡುಗಿಯರ ಸಹವಾಸ ಇತ್ತು ಎಂದು ಪತ್ನಿ ಜ್ಯೋತಿ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಧರ್ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರು, ಅವರಿಗೆ ಕ್ಯಾನ್ಸರ್ ಕೂಡ ಇತ್ತು. ಆದರೆ ನನಗೆ ಬೇರೊಬ್ಬರ ಜೊತೆ ಸಂಬಂಧ ಎಂದು ಆರೋಪಿಸಿ ಶ್ರೀಧರ್ ನನ್ನಿಂದ ದೂರವಾಗಿದ್ದರು ಎಂದು ಶಾಕಿಂಗ್ ವಿಚಾರಗಳನ್ನು ತಿಳಿಸಿದ್ದಾರೆ. ನಾನು ಈಗಲೂ ಒಂಟಿಯಾಗಿಯೇ ನನ್ನ ಜೀವನ ಸಾಗಿಸುತ್ತಿದ್ದೇನೆ. ನನಗೆ ಈಗ ನನ್ನ ಹಾಗೂ ಮಗನ ಜೀವನ ಮುಖ್ಯ. ನಾನು ಯಾರೊಂದಿಗೂ ಓಡಿ ಹೋಗಿಲ್ಲ. ನಾನು ಹಾಗೂ ಮಗ ಇಬ್ಬರೇ ಜೀವನ ಮಾಡುತ್ತಿದ್ದೇವೆʼ ಎಂದು ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications