Rishab Shetty: ಕಾಂತಾರ ನಟ ರಿಷಬ್ ಶೆಟ್ಟಿ ಮನೆಗೆ ಹೊಸ ಅತಿಥಿ ಆಗಮನ
ಬೆಂಗಳೂರು, ಏಪ್ರಿಲ್ 14: 'ಕಾಂತಾರ' ಸಿನಿಮಾ ಸಕ್ಸಸ್ಬೆನ್ನಲ್ಲೆ 'ಕಾಂತಾರ' ಚಾಪ್ಟರ್ 1 (ಪ್ರಿಕ್ವೆಲ್) ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ರಿಷಬ್ ಶೆಟ್ಟಿ ಮತ್ತವರ ಪತ್ನಿ ಇಬ್ಬರು ಮಕ್ಕಳು ಸೇರಿ ಕುಟುಂಬ ಸಮೇತ ಹೊಸ ಅತಿಥಿಯನ್ನು ಸ್ವಾಗತಿಸಿದ್ದಾರೆ. ಹೌದು, ರಿಷಬ್ ಅವರು ಹೊಸ ಐಶಾರಾಮಿ ಕಾರು ಖರೀದಿಸಿದ್ದಾರೆ.
ಸುಮಾರು ಒಂದೂವರೆಗೆ ಕೋಟಿ ರೂಪಾಯಿ ಬೆಲೆ ಬಾಳುವ ಟೊಯೋಟಾ ಐಶಾರಾಮಿ ಕಾರನ್ನು ರಿಷಬ್ ಶೆಟ್ಟಿ ಅವರು ಖರೀದಿಸಿದ್ದಾರೆ. ಹೊಚ್ಚ ಹೊಸ ಕಾರಿನ ಖರೀದಿ ಜೊತೆಗೆ ಅವರ ಮನೆಯಲ್ಲಿ ಸಂತಷ ಇನ್ನೂ ಹೆಚ್ಚಾಗಿದೆ. ಕಪ್ಪು ಬಣ್ಣದ ಟೊಯೋಟಾ ವೆಲ್ಫೈರ್ ಕಾರು ಇದಾಗಿದ್ದು, ಇದರ ಆನ್ರೋಡ್ ಬೆಲೆ ಬರೋಬ್ಬರಿ 1.40 ಕೋಟಿ ರೂಪಾಯಿ ಎನ್ನಲಾಗುತ್ತಿದೆ.

ಕಾರಿಗೆ ಪೂಜೆ ನೆರವೇರಿಸಿ ಕುಟುಂಬ ಸಮೇತರಾಗಿ ಸುತ್ತಾಡಿದ್ದಾರೆ. ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಫ್ಯಾನ್ಸ್ ರಿಷಬ್ಗೆ ಶುಭ ಕೋರಿದ್ದಾರೆ. ಮೂಲಗಳ ಪ್ರಕಾರ, ಯುಗಾದಿ ಹಬ್ಬಕ್ಕೆ ಬುಕ್ ಮಾಡಿದ ಈ ಕಾರು ಇಂದು ಮನೆಗೆ ಬಂದು ಕೊಟ್ಟು ಹೋಗಿದ್ದಾರೆ ಎನ್ನಲಾಗಿದೆ.
ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವ ವಾರ್ನಿಂಗ್...
ಕಾಂತಾರಾ ಸಿನಿಮಾ ಮಾಡುವಾಗ ಪಂಜುರ್ಲಿ ದೈವದ ಒಪ್ಪಿಗೆ ಪಡೆದಿದ್ದ ನಟ ರಿಷಬ್ ಚಾಪ್ಟರ್ 1 ಮಾಡುವಾಗಲೂ ದೇವರ ಒಪ್ಪಿಗೆ ಪಡೆದಿದ್ದರು. ಹೀಗಿದ್ದರು ಅವರು ಇತ್ತೀಚೆಗೆ ಮಂಗಳೂರಿನ ಕದ್ರಿಯ ಪಂಜುರ್ಲಿ ದೈವವನ್ನು ಭೇಟಿ ಮಾಡಿದ್ದಾರೆ. ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ದೈವ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದೆ.
ಈ ವೇಳೆ ಪಂಜುರ್ಲಿ ದೈವವು ನಿನಗೆ ಶತ್ರುಗಳ ಕಾಟ ಇದೆ. ಎಚ್ಚರಿಕೆಯಿಂದ ಇರಬೇಕು. ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ಗಳಿದ್ದಾರೆ. ನನಗೆ ಸೇವೆ ನೀಡುವ ಹರಕೆ ಕಟ್ಟಿಕೋ.. ಮುಂದಿನ ಐದು ತಿಂಗಳಲ್ಲಿ ನಿನ್ನ ಸಮಸ್ಯೆ ಪರಿಹಾರ ಒದಗಿಸುತ್ತೇನೆ. ಈ ಮೂಲಕ ರಿಷಬ್ ಶೆಟ್ಟಿ ಕುಟುಂಬಕ್ಕೆ ದೈವ ಅಭಯ ನೀಡಿದೆ. ದೈವದ ಮುಂದೆ ರಿಷಬ್ ಜೊತೆಗೆ ಪತ್ನಿ ಪ್ರಗತಿ ಶೆಟ್ಟಿ ಹಾಗೂ ಇಬ್ಬರು ಮಕ್ಕಳು ತೆರಳಿದ್ದರು. ಬೆಳಗ್ಗೆವರೆಗೂ ನಿಂತು ದೈವದ ಪೂಜೆ ನೆರವೇರಿಸಿದ್ದರು.

ಕಾಂತಾರಾ ಸಿನಿಮಾ ಈಗಾಗಲೇ ಭರ್ಜರಿ ಹಿಟ್ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದ್ದು ಮಾಡಿದ್ದಲ್ಲದೇ ರಿಷಬ್ ಶೆಟ್ಟಿಗೆ ಸಾಕಷ್ಟು ಹೆಸರು ತಂದುಕೊಟ್ಟಿದೆ. ಅದೇ ಜವಾಬ್ದಾರಿಯಲ್ಲಿ ಅವರು ಕಾಂತಾರಾ ಫೆಕ್ವೆಲ್ ಸಿನಿಮಾ ಮಾಡುತ್ತಿದ್ದಾರೆ. ಇದೇ ವರ್ಷ ಬಿಡುಗಡೆ ಆಗಲಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications