ಕಾಂತಾರ ಶೂಟಿಂಗ್ ಮುಗಿಸಿಬಂದ ರಾಕೇಶ್ ಪೂಜಾರಿಗೆ ಏನಾಯ್ತು?
ಕಾಮಿಡಿ ಕಿಲಾಡಿಗಳು ಸೀಸನ್ 3 ಖ್ಯಾತಿಯ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇದು ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಕಾಂತಾರ ಸಿನಿಮಾ ಯಶಸ್ವಿನ ಬಳಿಕ ಕಾಂತಾರ ಚಾಪ್ಟರ್ 1 ಸಿನಿಮಾವನ್ನು ರಿಷಬ್ ಶೆಟ್ಟಿ ಶುರು ಮಾಡಿದ್ರು. ಮೇ 11ರ ಬೆಳಿಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ ಚಾಪ್ಟರ್ 1'ರ ಶೂಟ್ನಲ್ಲಿ ನಟ ರಾಕೇಶ್ ಪೂಜಾರಿ ಇದ್ದರು. ಮಧ್ಯರಾತ್ರಿ ರಾಕೇಶ್ ಪೂಜಾರಿ ಸಾವನ್ನಾಪಿದ್ದಾರೆ.
ಇನ್ನೂ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಸಿನಿಮಾಗೆ ಅಪಶಕುನದ ಮೇಲೆ ಅಪಶಕುನಗಳು ಎದುರಾಗ್ತಾನೆ ಇದೆ. ಆದರೆ, ಕಾಂತಾರ ಚಿತ್ರ ಸೆಟ್ಟೇರಿದ ದಿನದಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗ್ತಾನೆ ಇದೆ. ಇತ್ತೀಚಿಗಷ್ಟೇ ಕಾಂತಾರ ಚಾಪ್ಟರ್ 1 ಸೆಟ್ನಲ್ಲಿದ್ದ ಜ್ಯೂನಿಯರ್ ಆರ್ಟಿಸ್ಟ್ ಕಪಿಲ್ ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ರು. ಇದೀಗ ಹಾಸ್ಯನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದು ಕಾಂತಾರ ಚಿತ್ರತಂಡಕ್ಕೆ ದೊಡ್ಡ ಆಘಾತವೇ ಆಗಿದೆ.

ಹಾಸ್ಯದ ಮೂಲಕ ಜನರನ್ನು ನಕ್ಕು ನಲಿಸುತ್ತಿದ್ದ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನದ ಸುದ್ದಿ ಕೇಳಿ ಚಿತ್ರತಂಡ ಬೆಚ್ಚಿಬಿದ್ದಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಾಕೇಶ್ ಪೂಜಾರಿ ನಿಧನರಾಗಿದ್ದು, ಮೇ 11ರ ಬೆಳಗ್ಗೆ 'ಕಾಂತಾರ ಚಾಪ್ಟರ್ 1'ರ ಶೂಟ್ನಲ್ಲಿ ರಾಕೇಶ್ ಭಾಗಿಯಾಗಿದ್ದರು. ಮಧ್ಯರಾತ್ರಿ ಅವರಿಗೆ ಸಾವು ಸಂಭವಿಸಿದೆ. ನಿನ್ನೆವರೆಗೂ ಆರೋಗ್ಯವಾಗಿಯೇ ಇದ್ದ ನಟ ರಾಕೇಶ್ ಪೂಜಾರಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದು, ಸಿನಿಮಾಗಳಲ್ಲಿ ರಾಕೇಶ್ ಪೂಜಾರ್ ನಟಿಸಿದ್ದಾರೆ. ರಿಷಬ್ ಶೆಟ್ಟಿಯ ಕಾಂತಾರ ಚಾಪ್ಟರ್ 1 ಚಿತ್ರದಲ್ಲೂ ರಾಕೇಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ರು.
ಎಲ್ಲರನ್ನೂ ನಗಿಸಿಕೊಂಡಿದ್ದ ಕಲಾವಿದ ರಾಕೆಶ್ ಪೂಜಾರಿ ನಿನ್ನೆಯವರೆಗೂ ಆರಾಮಾಗಿದ್ದರು. ಅವರಿಗೆ ಯಾವುದೇ ಕಾಯಿಲೆ ಅಥವಾ ಅನಾರೋಗ್ಯವಾಗಲಿ ಇರಲಿಲ್ಲ. ಲಭ್ಯವಾದ ಮಾಹಿತಿ ಅನ್ವಯ ನಿನ್ನೆ(ಮೇ 11) ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಖುಷಿಯಾಗೇ ಸಮಯ ಕಳೆದಿದ್ದರು. ಅಲ್ಲದೇ ಅಲ್ಲಿ ಡ್ಯಾನ್ಸ್ ಕೂಡಾ ಮಾಡಿ ಸಂಭ್ರಮಿಸಿದ್ದರು. ಮೆಹೆಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ರಾಕೇಜ್ ಪೂಜಾರಿ ಅವರನ್ನು ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಅವರ ಸ್ನೇಹಿತರು ಮಾಹಿತಿ ನೀಡಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.
-
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
ಕರ್ನಾಟಕದ 4 ರೈಲು ನಿಲ್ದಾಣ ಸೇರಿ 76 ಕಡೆ ಪ್ರಯಾಣಿಕರ ನಿಲುಗಡೆ ತಾಣ ನಿರ್ಮಾಣ, ಏನಿದರ ಪ್ರಯೋಜನ? -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್












Click it and Unblock the Notifications