Kantara Chapter 1: ದೈವಗಳ ಅನುಕರಣೆ: ಮಹತ್ವದ ಪೋಸ್ಟ್ ಹಂಚಿಕೊಂಡ ಕಾಂತಾರ ಸಿನಿಮಾ ತಂಡ
Kantara Chapter 1: ಕಾಂತಾರ ಚಾಪ್ಟರ್ 01 ಸಿನಿಮಾ ಇದೀಗ ದೇಶದಾದ್ಯಂತ ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಅತ್ಯುತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡುತ್ತಿದೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ವಿವಿಧ ಭಾರೀ ಬಜೆಟ್ ಹಾಗೂ ಅದ್ಧೂರಿ ಬಜೆಟ್ ಸಿನಿಮಾಗಳಿಗೆ ಈ ಸಿನಿಮಾ ಪೈಪೋಟಿ ಕೊಡುತ್ತಿದೆ. ಈ ಸಿನಿಮಾ ಹಲವು ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಮುನ್ನುಗ್ಗುತ್ತಿರುವಾಗಲೇ ಕಾಂತಾರ ಚಾಪ್ಟರ್ 01 ಚಿತ್ರತಂಡ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ.
ಪ್ರೇಕ್ಷಕರೇ..ಅವಾಹನೆ ಮಾಡಿಕೊಳ್ಳುವುದನ್ನು ಬಿಡಿ ಎಂದು ಚಿತ್ರತಂಡ, ನಟ & ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಮನವಿ ಮಾಡಿದೆ. ಸಿನಿಪ್ರಿಯರೇ,

ದೈವಾರಾಧನೆ ತುಳುನಾಡಿನ ನಂಬಿಕೆಯ ಪ್ರತೀಕ. ಅದು ತುಳುವರ ಅಸ್ಮಿತೆ. ದೈವದ ಬಗೆಗಿನ ಅಪಾರ ಗೌರವ ಮತ್ತು ಅಚಲ ಶ್ರದ್ಧೆಗೆ ಕಿಂಚಿತ್ತೂ ಚ್ಯುತಿ ಬಾರದಂತೆ ದೈವಗಳ ಮಹಿಮೆಯನ್ನು ಸಾರುವ ಭಕ್ತಿಪೂರ್ವಕ ಕಥೆಯನ್ನು ನಾವು ಕಾಂತಾರ ಸಿನೆಮಾದಲ್ಲಿ ತೋರಿಸಿದ್ದೇವೆ.
ತುಳು ಮಣ್ಣಿನ ಮಹತ್ವ ಹಾಗೂ ಪರಂಪರೆಯನ್ನು ಇಡೀ ಜಗತ್ತಿಗೆ ಸಾರುವಲ್ಲಿ ನಮ್ಮದ್ದಾದ ಕೊಡುಗೆಯನ್ನು ಕೊಟ್ಟಿದ್ದೇವೆ. ಆದರೆ ಕೆಲವರು ಸಿನೆಮಾದಲ್ಲಿ ಬರುವ ಪಾತ್ರಗಳನ್ನು ಅನುಕರಿಸಿ ಎಲ್ಲೆಂದರಲ್ಲಿ ಅನುಚಿತ ರೀತಿಯ ವರ್ತನೆಗಳನ್ನು ಮಾಡುವುದು ಚಿತ್ರತಂಡದ ಗಮನಕ್ಕೆ ಬಂದಿದೆ. ಇದು ನಮ್ಮ ನಂಬಿಕೆಗೆ ಮಾಡುವ ಅಪಚಾರವೂ ಹೌದು, ಅಕ್ಷಮ್ಯ ಅಪರಾಧವೂ ಹೌದು. ಇಂತಹ ವರ್ತನೆಗಳನ್ನು ನಾವು ಖಂಡಿತ ಸಹಿಸುವುದಿಲ್ಲ. ಆದುದರಿಂದ ಚಿತ್ರಮಂದಿರ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ, ಸಭೆ, ಸಮಾರಂಭಗಳಲ್ಲಿ ಯಾರೂ ದೈವಗಳನ್ನು ಅನುಕರಣೆ ಮಾಡಬೇಡಿ ಎಂದು ಚಿತ್ರತಂಡವು ಮನವಿ ಮಾಡಿದೆ.
To the cinephiles and the global audience,
— Hombale Films (@hombalefilms) October 7, 2025
Dhaivaradhane stands as a profound symbol of faith and cultural pride within Tulunadu, the coastal region of Karnataka. Our films, Kantara and Kantara Chapter-1, were created with the purpose of respectfully portraying this devotion and… pic.twitter.com/y6B9NjvfLr
ಇನ್ನು ಈಚೆಗೆ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದ ಸಿನಿಮಾ ತಂಡವು, ಆತ್ಮೀಯ ಕಾಂತಾರ ಕುಟುಂಬ ಮತ್ತು ಸಿನಿಮಾಭಿಮಾನಿಗಳೇ.. 'ಕಾಂತಾರ' ಕೇವಲ ಒಂದು ಸಿನಿಮಾ ಅಲ್ಲ; ಅದು ನಮ್ಮ ಸಂಸ್ಕೃತಿ, ನಮ್ಮ ನೆಲದ ಕಥೆ. ಆರಂಭದಿಂದಲೂ ಈ ಪಯಣ ನಮ್ಮ ಜೊತೆ ನಿಮ್ಮದೂ ಕೂಡ . ನಿಮ್ಮ ಅಪಾರ ಪ್ರೀತಿ, ಬೆಂಬಲವೇ ಈ ಚಿತ್ರವನ್ನು ಇಷ್ಟು ಎತ್ತರಕ್ಕೆ ಕೊಂಡೊಯ್ದಿದೆ. ಆ ಋಣ ಯಾವಾಗಲೂ ನಮ್ಮ ಮೇಲಿರುತ್ತದೆ. ಈಗ ನಮ್ಮದೊಂದು ವಿನಂತಿ: ಈ ಚಿತ್ರದಲ್ಲಿ ತೆರೆಯ ಮುಂದೆ, ತೆರೆಯ ಹಿ೦ದೆ ಇರುವ ಸಾವಿರಾರು ಜನರ ಕನಸು ಇದೆ.
ಪೈರಸಿಯಿಂದ ಈ ಕನಸನ್ನು ಪೋಲಾಗಲು ಬಿಡಬೇಡಿ, ದಯವಿಟ್ಟು ಚಿತ್ರಮಂದಿರಗಳಲ್ಲಿ ಯಾವುದೇ ಚಿತ್ರದ ದೃಶ್ಯವನ್ನು ಚಿತ್ರೀಕರಿಸಬೇಡಿ ಅಥವಾ ಹಂಚಿಕೊಳ್ಳಬೇಡಿ. ಸಣ್ಣ ವಿಡಿಯೋ ತುಣುಕೂ ಸಿನಿಮಾದ ಅಸಲಿ ಮಾಯೆಯನ್ನು ಮಲಿನ ಮಾಡುತ್ತದೆ. ಈ ಸಂಭ್ರಮ ದೊಡ್ಡ ಪರದೆಯಲ್ಲಿಯೇ ಇರಲಿ. ಈ ಅದ್ಭುತ ಪ್ರಯಾಣವನ್ನು ಒಟ್ಟಾಗಿ ಕಾಪಾಡೋಣ. 'ಕಾಂತಾರ'ದ ಅನುಭವ ಎಂದೆಂದಿಗೂ ಚಿತ್ರಮಂದಿರಕ್ಕೆ ಮೀಸಲಾಗಲಿ ಎಂದೂ ಹೇಳಲಾಗಿತ್ತು.
-
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications