Kantara Kannada: ಯಶ್ ಕೆಜಿಎಫ್ ದಾಖಲೆ ಮುರಿದ ರಿಷಬ್ ಕಾಂತಾರ ಚಾಪ್ಟರ್-1?
ಕನ್ನಡ ಸಿನಿಮಾ ಇಂಡಸ್ಟ್ರಿ ಅಂದ್ರೆ ಒಂದು ಕಾಲದಲ್ಲಿ ಸಿನಿಮಾಗಳು ಓಡುವುದೇ ಇಲ್ಲ, ಕನ್ನಡದಲ್ಲಿ ರಿಲೀಸ್ ಆಗುವ ಸಿನಿಮಾಗಳಿಗೆ ಮಾರ್ಕೆಟ್ ಇಲ್ಲ ಅಂತಾ ಕೆಲವು ಹುಳಗಳು ಬಾಯಿ ಬಡಿದುಕೊಂಡು ಮಾತನಾಡುತ್ತಿದ್ದರು. ಆದರೆ ಈ ಮಾತನ್ನು ಕನ್ನಡಿಗರ ಕೆಜಿಎಫ್ ಸಿನಿಮಾ ಸುಳ್ಳು ಮಾಡಿ, ಮಂಡ್ಯ ಟು ಇಂಡಿಯಾ ಹವಾ ಎಬ್ಬಿಸಿತ್ತು. ಆ ನಂತರ 2022 ಕೊನೆಯಲ್ಲಿ ರಿಲೀಸ್ ಆಗಿದ್ದ ಕಾಂತಾರ ಸಿನಿಮಾ ಮತ್ತೆ ಕನ್ನಡ ಸಿನಿಮಾ ರಂಗದ ಶಕ್ತಿ ಪ್ರದರ್ಶನ ಮಾಡಿತ್ತು. ಈಗ ಅದೇ ಕಾಂತಾರ ಸಿನಿಮಾದ ಮತ್ತೊಂದು ಭಾಗ ಬಾಕ್ಸ್ ಆಫಿಸ್ ಪುಡಿ ಪುಡಿ ಮಾಡಿದೆ!
ಹೌದು, ರಿಷಬ್ ಶೆಟ್ಟಿ ಅವರು ಏನೇ ಮಾಡಿದ್ರೂ ವಿಶಿಷ್ಟವಾಗಿ ಮಾಡ್ತಾರೆ. ಹೀಗಾಗಿ ಅವರ ಸಕ್ಸಸ್ ರೇಟ್ ತುಂಬಾ ಜಾಸ್ತಿ ಇದೆ. ಪ್ರತಿ ಹೆಜ್ಜೆಯಲ್ಲೂ ಅವರು ಅದ್ಭುತವಾದ ಆಯ್ಕೆ ಎದುರು ನೋಡ್ತಾರೆ, ಇಂತಿಪ್ಪ ರಿಷಬ್ ಶೆಟ್ಟಿ ಅವರು ಮತ್ತೊಮ್ಮೆ ಮಿಂಚಿನ ಸಂಚಲನ ಸೃಷ್ಟಿ ಮಾಡಿದ್ದಾರೆ. ಅಂದಹಾಗೆ 2022 ರಲ್ಲಿ ರಿಲೀಸ್ ಆಗಿದ್ದ ರಿಷಬ್ ಶೆಟ್ಟಿ ಅಭಿನಯಿಸಿ & ನಿರ್ದೇಶನ ಮಾಡಿದ್ದ ಕಾಂತಾರ ಸಿನಿಮಾ ಭಾರಿ ದೊಡ್ಡ ಸಕ್ಸಸ್ ಕಂಡಿತ್ತು. ಈ ಸಿನಿಮಾ ಮೂಲಕ ರಿಷಬ್ ಪ್ಯಾನ್ ಇಂಡಿಯಾ ಮೀರಿ ಪ್ಯಾನ್ ವರ್ಲ್ಡ್ ಸ್ಟಾರ್ ಆಗಿ ಅಬ್ಬರಿಸುತ್ತಿದ್ದಾರೆ. ಈಗ ಕಾಂತಾರ ಸಿನಿಮಾದ ಮತ್ತೊಂದು ಭಾಗ ಕೂಡ ಪ್ರಪಂಚದ ಮೂಲೆ ಮೂಲೆಗೆ ಹಬ್ಬಿದೆ. ಹಾಗಾದ್ರೆ, ಯಶ್ ಕೆಜಿಎಫ್ ದಾಖಲೆ ಮುರಿದ ರಿಷಬ್ ಕಾಂತಾರ ಚಾಪ್ಟರ್-1?

ಕೆಜಿಎಫ್ ದಾಖಲೆ ಮುರಿದ ಕಾಂತಾರ?
ಅಂದಹಾಗೆ ಮೊದಲ ದಿನವೇ ಬಾಕ್ಸ್ ಆಫಿಸ್ ಅಖಾಡದಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡಿರುವ ಕನ್ನಡ ಸಿನಿಮಾ ರಂಗದ ಕಾಂತಾರ, ಬೇರೆ ಬೇರೆ ಭಾಷೆಯ ಸಿನಿಮಾಗಳು ಅಲ್ಲಾಡಿ ಹೋಗುವಂತೆ ಮಾಡಿದೆ. ಅಲ್ಲದೆ ಕಾಂತಾರ ಸಿನಿಮಾ ಅಬ್ಬರ ಕಂಡು ಸ್ವತಃ ಕನ್ನಡ ಪ್ರೇಕ್ಷಕರೇ ಆಶ್ಚರ್ಯಗೊಂಡಿದ್ದಾರೆ. ಇದೇ ಸಮಯದಲ್ಲಿ ಯಶ್ ಕೆಜಿಎಫ್ & ರಿಷಬ್ ಕಾಂತಾರ ನಡುವೆ ರೇಸ್ ಶುರುವಾಯ್ತಾ? ಎಂಬ ಪ್ರಶ್ನೆ ಕೂಡ ಮೂಡಿದೆ. ಆದರೆ ಸಂಪೂರ್ಣವಾಗಿ ಕೆಜಿಎಫ್ ದಾಖಲೆ ಮುರಿಯಲು ಕಾಂತಾರ ಸಿನಿಮಾಗೆ ಇನ್ನೂ ಹೆಚ್ಚಿನ ಸಮಯ ಬೇಕು ಎನ್ನುತ್ತಾರೆ ತಜ್ಞರು.
ಹೌದು, ಕಾಂತಾರ 2ನೇ ಭಾಗ ಈಗ 3 ವರ್ಷಗಳ ನಂತರ ಮತ್ತೆ ಬಂದಿದೆ. ಕಾಂತಾರ ಹೊಸ ಭಾಗದಲ್ಲಿ ವಿಸ್ಮಯಗಳ ರಾಶಿ ಶತಕೋಟಿ ಭಾರತೀಯರ ಎದುರು ಇಟ್ಟಿದ್ದಾರೆ ರಿಷಬ್ ಶೆಟ್ಟರು. ಹೀಗೆಲ್ಲಾ ಕಾಂತಾರ ಎಂಬ ಅದ್ಭುತ ಸಿನಿಮಾ ನೋಡಲು ಕಾಯುತ್ತಿದ್ದ ಕೋಟ್ಯಂತರ ಅಭಿಮಾನಿಗಳಿಗೆ ಆನಂದವಾಗಿದೆ. ಈ ಸಿನಿಮಾ ನೋಡಲು ಥಿಯೇಟರ್ ಎದುರು ಮುಗಿಬೀಳುವ ಪರಿಸ್ಥಿತಿ ಕೂಡ ಇದೆ. ಮೊದಲ ಭಾಗದಲ್ಲೇ ಸುಮಾರು 400 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಬಾಚಿಕೊಂಡು ಸಂಚಲನ ಸೃಷ್ಟಿ ಮಾಡಿದ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಈಗ ಮತ್ತೊಂದು ವಿಶ್ವದಾಖಲೆ ಬರೆಯುತ್ತಿದೆ...
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications