Kantara Kannada: ಯಶ್ ಕೆಜಿಎಫ್ ದಾಖಲೆ ಮುರಿದ ರಿಷಬ್ ಕಾಂತಾರ ಚಾಪ್ಟರ್-1?
ಕನ್ನಡ ಸಿನಿಮಾ ಇಂಡಸ್ಟ್ರಿ ಅಂದ್ರೆ ಒಂದು ಕಾಲದಲ್ಲಿ ಸಿನಿಮಾಗಳು ಓಡುವುದೇ ಇಲ್ಲ, ಕನ್ನಡದಲ್ಲಿ ರಿಲೀಸ್ ಆಗುವ ಸಿನಿಮಾಗಳಿಗೆ ಮಾರ್ಕೆಟ್ ಇಲ್ಲ ಅಂತಾ ಕೆಲವು ಹುಳಗಳು ಬಾಯಿ ಬಡಿದುಕೊಂಡು ಮಾತನಾಡುತ್ತಿದ್ದರು. ಆದರೆ ಈ ಮಾತನ್ನು ಕನ್ನಡಿಗರ ಕೆಜಿಎಫ್ ಸಿನಿಮಾ ಸುಳ್ಳು ಮಾಡಿ, ಮಂಡ್ಯ ಟು ಇಂಡಿಯಾ ಹವಾ ಎಬ್ಬಿಸಿತ್ತು. ಆ ನಂತರ 2022 ಕೊನೆಯಲ್ಲಿ ರಿಲೀಸ್ ಆಗಿದ್ದ ಕಾಂತಾರ ಸಿನಿಮಾ ಮತ್ತೆ ಕನ್ನಡ ಸಿನಿಮಾ ರಂಗದ ಶಕ್ತಿ ಪ್ರದರ್ಶನ ಮಾಡಿತ್ತು. ಈಗ ಅದೇ ಕಾಂತಾರ ಸಿನಿಮಾದ ಮತ್ತೊಂದು ಭಾಗ ಬಾಕ್ಸ್ ಆಫಿಸ್ ಪುಡಿ ಪುಡಿ ಮಾಡಿದೆ!
ಹೌದು, ರಿಷಬ್ ಶೆಟ್ಟಿ ಅವರು ಏನೇ ಮಾಡಿದ್ರೂ ವಿಶಿಷ್ಟವಾಗಿ ಮಾಡ್ತಾರೆ. ಹೀಗಾಗಿ ಅವರ ಸಕ್ಸಸ್ ರೇಟ್ ತುಂಬಾ ಜಾಸ್ತಿ ಇದೆ. ಪ್ರತಿ ಹೆಜ್ಜೆಯಲ್ಲೂ ಅವರು ಅದ್ಭುತವಾದ ಆಯ್ಕೆ ಎದುರು ನೋಡ್ತಾರೆ, ಇಂತಿಪ್ಪ ರಿಷಬ್ ಶೆಟ್ಟಿ ಅವರು ಮತ್ತೊಮ್ಮೆ ಮಿಂಚಿನ ಸಂಚಲನ ಸೃಷ್ಟಿ ಮಾಡಿದ್ದಾರೆ. ಅಂದಹಾಗೆ 2022 ರಲ್ಲಿ ರಿಲೀಸ್ ಆಗಿದ್ದ ರಿಷಬ್ ಶೆಟ್ಟಿ ಅಭಿನಯಿಸಿ & ನಿರ್ದೇಶನ ಮಾಡಿದ್ದ ಕಾಂತಾರ ಸಿನಿಮಾ ಭಾರಿ ದೊಡ್ಡ ಸಕ್ಸಸ್ ಕಂಡಿತ್ತು. ಈ ಸಿನಿಮಾ ಮೂಲಕ ರಿಷಬ್ ಪ್ಯಾನ್ ಇಂಡಿಯಾ ಮೀರಿ ಪ್ಯಾನ್ ವರ್ಲ್ಡ್ ಸ್ಟಾರ್ ಆಗಿ ಅಬ್ಬರಿಸುತ್ತಿದ್ದಾರೆ. ಈಗ ಕಾಂತಾರ ಸಿನಿಮಾದ ಮತ್ತೊಂದು ಭಾಗ ಕೂಡ ಪ್ರಪಂಚದ ಮೂಲೆ ಮೂಲೆಗೆ ಹಬ್ಬಿದೆ. ಹಾಗಾದ್ರೆ, ಯಶ್ ಕೆಜಿಎಫ್ ದಾಖಲೆ ಮುರಿದ ರಿಷಬ್ ಕಾಂತಾರ ಚಾಪ್ಟರ್-1?

ಕೆಜಿಎಫ್ ದಾಖಲೆ ಮುರಿದ ಕಾಂತಾರ?
ಅಂದಹಾಗೆ ಮೊದಲ ದಿನವೇ ಬಾಕ್ಸ್ ಆಫಿಸ್ ಅಖಾಡದಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡಿರುವ ಕನ್ನಡ ಸಿನಿಮಾ ರಂಗದ ಕಾಂತಾರ, ಬೇರೆ ಬೇರೆ ಭಾಷೆಯ ಸಿನಿಮಾಗಳು ಅಲ್ಲಾಡಿ ಹೋಗುವಂತೆ ಮಾಡಿದೆ. ಅಲ್ಲದೆ ಕಾಂತಾರ ಸಿನಿಮಾ ಅಬ್ಬರ ಕಂಡು ಸ್ವತಃ ಕನ್ನಡ ಪ್ರೇಕ್ಷಕರೇ ಆಶ್ಚರ್ಯಗೊಂಡಿದ್ದಾರೆ. ಇದೇ ಸಮಯದಲ್ಲಿ ಯಶ್ ಕೆಜಿಎಫ್ & ರಿಷಬ್ ಕಾಂತಾರ ನಡುವೆ ರೇಸ್ ಶುರುವಾಯ್ತಾ? ಎಂಬ ಪ್ರಶ್ನೆ ಕೂಡ ಮೂಡಿದೆ. ಆದರೆ ಸಂಪೂರ್ಣವಾಗಿ ಕೆಜಿಎಫ್ ದಾಖಲೆ ಮುರಿಯಲು ಕಾಂತಾರ ಸಿನಿಮಾಗೆ ಇನ್ನೂ ಹೆಚ್ಚಿನ ಸಮಯ ಬೇಕು ಎನ್ನುತ್ತಾರೆ ತಜ್ಞರು.
ಹೌದು, ಕಾಂತಾರ 2ನೇ ಭಾಗ ಈಗ 3 ವರ್ಷಗಳ ನಂತರ ಮತ್ತೆ ಬಂದಿದೆ. ಕಾಂತಾರ ಹೊಸ ಭಾಗದಲ್ಲಿ ವಿಸ್ಮಯಗಳ ರಾಶಿ ಶತಕೋಟಿ ಭಾರತೀಯರ ಎದುರು ಇಟ್ಟಿದ್ದಾರೆ ರಿಷಬ್ ಶೆಟ್ಟರು. ಹೀಗೆಲ್ಲಾ ಕಾಂತಾರ ಎಂಬ ಅದ್ಭುತ ಸಿನಿಮಾ ನೋಡಲು ಕಾಯುತ್ತಿದ್ದ ಕೋಟ್ಯಂತರ ಅಭಿಮಾನಿಗಳಿಗೆ ಆನಂದವಾಗಿದೆ. ಈ ಸಿನಿಮಾ ನೋಡಲು ಥಿಯೇಟರ್ ಎದುರು ಮುಗಿಬೀಳುವ ಪರಿಸ್ಥಿತಿ ಕೂಡ ಇದೆ. ಮೊದಲ ಭಾಗದಲ್ಲೇ ಸುಮಾರು 400 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಬಾಚಿಕೊಂಡು ಸಂಚಲನ ಸೃಷ್ಟಿ ಮಾಡಿದ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಈಗ ಮತ್ತೊಂದು ವಿಶ್ವದಾಖಲೆ ಬರೆಯುತ್ತಿದೆ...
-
Chandan Shetty: ವಯಸ್ಸಾದ್ಮೇಲೆ ಒಂಟಿತನ ಕಾಡುತ್ತೆ, ಆಗ ಕೊರಗುವ ಬದಲು ಈಗಲೇ ಒಳ್ಳೆಯ ಸಂಗಾತಿ ಹುಡುಕುವೆ: ಚಂದನ್ ಶೆಟ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications