Get Updates
Get notified of breaking news, exclusive insights, and must-see stories!

Kantara Chapter 1: ಕಾಂತಾರ ಕನ್ನಡವನ್ನು ಗೆಲ್ಲಿಸಿದೆ: ಕರವೇ ನಾರಾಯಣಗೌಡ

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ರಿಷಬ್‌ ಶೆಟ್ಟಿ ಅವರ ಕಾಂತಾರ ಚಾಪ್ಟರ್‌-1 ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಕನ್ನಡವನ್ನು ಗೆಲ್ಲಿಸಿದೆ ಎಂದು ಕೊಂಡಾಡಿದ್ದಾರೆ. ನನ್ನ ಕುಟುಂಬದವರು, ಕರವೇ ಮುಖಂಡರೊಂದಿಗೆ ಕಾಂತಾರ ಚಾಪ್ಟರ್-1 ಸಿನಿಮಾ ನೋಡಿದೆ. ಸಿನಿಮಾ ನೋಡಿದೆ ಅನ್ನುವುದಕ್ಕಿಂತ ಅನುಭವಿಸಿದೆ ಎಂದು ಹೇಳಿದರೆ ಸರಿಯಾಗುತ್ತದೆ. ಕಾಂತಾರ ಒಂದು ಅನುಭವ, ಸಿನಿಮಾವನ್ನು ಮೀರಿದ ಅದ್ಭುತ ಕಾಣಿಕೆ. ಇದನ್ನು ಪದಗಳಲ್ಲಿ ವಿವರಿಸಿ ಹೇಳಲಾಗದು. ಕಾಂತಾರ ನಮ್ಮ ಎಣಿಕೆಯನ್ನು, ಗ್ರಹಿಕೆಯನ್ನು ಮೀರಿದ್ದು. ಒಂದು ಸಿನಿಮಾ ನೋಡುಗರಲ್ಲಿ ಇಷ್ಟು ಭಾವತೀವ್ರತೆಯನ್ನು ಉಂಟುಮಾಡಬಹುದು ಎಂಬುದೇ ವಿಸ್ಮಯ ಎಂದಿದ್ದಾರೆ.

ರಿಷಬ್ ಶೆಟ್ಟಿ ತಮ್ಮ ನಿರ್ದೇಶನ, ನಟನೆಯಲ್ಲಿ ಭಾರತ ಚಿತ್ರರಂಗದಲ್ಲಿ ಒಂದು ಹೊಸ ಮಾರ್ಗವನ್ನೇ ಸೃಷ್ಟಿಸಿದ್ದಾರೆ. ಕಣ್ಣು, ಕಿವಿ ಮಾತ್ರವಲ್ಲ, ನಮ್ಮ ಇಡೀ ಅಂತರಾತ್ಮವೇ ಸಿನಿಮಾವನ್ನು ಅನುಭವಿಸುತ್ತ, ಒಂದು ಅಲೌಕಿಕ, ಮಾಂತ್ರಿಕ ಜಗತ್ತಿಗೆ ಕೊಂಡೊಯ್ಯುವಂತಹ ಮಾಯಾಜಾಲವನ್ನು ಸೃಷ್ಟಿಸಿದ್ದಾರೆ. ಒಂದು ಸಿನಿಮಾವನ್ನು ಹೀಗೂ ಮಾಡಬಹುದಾ ಎಂಬ ಬೆರಗನ್ನು ಮೂಡಿಸುತ್ತಲೇ ಸಿನಿಮಾ ನಿರ್ದೇಶಕರಿಗೆ ಒಂದು ಹೊಸ ದಾರಿಯನ್ನು ತೋರಿದ್ದಾರೆ. ಇಂಥ ಪವಾಡಗಳು ಪದೇಪದೇ ನಡೆಯುವುದಿಲ್ಲ. ಇದಕ್ಕಾಗಿ ರಿಷಬ್ ಅವರನ್ನು ಎಷ್ಟು ಅಭಿನಂದಿಸಿದರೂ ಕಡಿಮೆಯೇ. ಇಂಥಹ ಅನುಭವವನ್ನು ಕೊಟ್ಟಿದ್ದಕ್ಕಾಗಿ ಅವರಿಗೆ ಕನ್ನಡ ಜನತೆಯ ಪರವಾಗಿ ಪ್ರೀತಿಯ ಹಾರೈಕೆಗಳು ಎಂದು ಹೇಳಿದ್ದಾರೆ.

Karave TA Narayanagowda Praises Kantara Chapter 1 Has Won For Kannada

ಕರ್ನಾಟಕದ ನೆಲಮೂಲದ ಕಥೆಗಳನ್ನು ಒಂದಕ್ಕೊಂದು ಪೋಣಿಸಿ, ಅದನ್ನು ಒಂದು ಸಿನಿಮಾ ರೂಪಕ್ಕೆ ತರುವಾಗಿನ ಶ್ರದ್ಧೆ, ಕುಶಲತೆ ಕಾಂತಾರದ ಮೂಲ ಬಂಡವಾಳ. ಹೇಳಬೇಕಾಗಿದ್ದನ್ನು ಅಚ್ಚುಕಟ್ಟಾಗಿ ಹೇಳುವ ಪ್ರಾಮಾಣಿಕತೆಯೇ ಇಲ್ಲಿ ಗೆದ್ದಿದೆ. ಸಿನಿಮಾಗಾಗಿ ಸುರಿದಿರುವ ಹಣ, ತಾಂತ್ರಿಕ ಕೌಶಲ್ಯ ಇತ್ಯಾದಿಗಳು ಈ ಪ್ರಾಮಾಣಿಕತೆಯ ಅಡಿಪಾಯದ ಮೇಲೆಯೇ ಅರಳಿಕೊಡಿವೆ. ಅದ್ದೂರಿ ದೃಶ್ಯವೈಭವಗಳ ನಡುವೆಯೂ ಕಾಂತಾರದ ಅಂತರಾತ್ಮ ಎಲ್ಲೂ ಮುಕ್ಕಾಗದಂತೆ ನೋಡಿಕೊಂಡಿರುವುದು ನಿಜವಾದ ಯಶಸ್ಸು ಎಂದು ಹೊಗಳಿದ್ದಾರೆ.

ರಿಷಬ್ ಶೆಟ್ಟಿ ನಾನು ಗಮನಿಸಿದಂತೆ ಅಪಾರವಾದ ಕನ್ನಡ ಪ್ರೀತಿಯನ್ನು ಹೊಂದಿರುವ ಕಲಾವಿದ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಸಿನಿಮಾದ ಮೂಲಕವೇ ಅವರು ತಮ್ಮ ಕನ್ನಡಪ್ರೇಮವನ್ನು ಅವರು ತೋರಿದ್ದರು. ಕಾಂತಾರದ ಮೂಲಕ ಅವರು ಕನ್ನಡ ಚಿತ್ರರಂಗವನ್ನು ಭಾರತೀಯ ಚಿತ್ರರಂಗದ ಮುಂಚೂಣಿಗೆ ತಂದು ನಿಲ್ಲಿಸಿದ್ದಾರೆ. ಬೇರೆ ಬೇರೆ ಚಿತ್ರರಂಗದ ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಕಾಂತಾರವನ್ನು ಕಣ್ತುಂಬಿಕೊಂಡು ಶ್ಲಾಘಿಸುತ್ತಿದ್ದಾರೆ. ಇದಲ್ಲವೇ ನಿಜವಾದ ಕನ್ನಡಸೇವೆ? ಇದಲ್ಲವೇ ನಮ್ಮತನವನ್ನು ಜಗತ್ತಿಗೆ ಹರಡುವ ಸಾಧನೆ? ಎಂದು ಶ್ಲಾಘಿಸಿದ್ದಾರೆ.

ಕನ್ನಡ ಚಿತ್ರರಂಗವನ್ನು ಬೆಳೆಸಲಿ

ವಿಜಯ್, ರಿಷಬ್ ಅವರು ಮುಂಬರುವ ದಿನಗಳಲ್ಲಿ ಕಾಂತಾರದಂಥ ಹತ್ತಾರು ಸಿನಿಮಾಗಳನ್ನು ಕೊಟ್ಟು ಕನ್ನಡ ಚಿತ್ರರಂಗವನ್ನು ಬೆಳೆಸಲಿ, ಕನ್ನಡದ ಕೀರ್ತಿಯನ್ನು ಜಗತ್ತಿನಾದ್ಯಂತ ಹರಡಲಿ ಎಂದು ಮನದುಂಬಿ ಹಾರೈಸುವೆ. ಕಾಂತಾರ ಚಾಪ್ಟರ್-1 ರಲ್ಲಿ ಕೆಲಸ ಮಾಡಿದ ಎಲ್ಲ ತಂತ್ರಜ್ಞರು, ಕಲಾವಿದರು, ಕಾರ್ಮಿಕರಿಗೆ ಈ ಮಹಾಯಶಸ್ಸಿನ ಪಾಲು ಸಲ್ಲಲೇಬೇಕು. ಅವರೆಲ್ಲರ ಸಮರ್ಪಣಾ ಭಾವದಿಂದಲೇ ಇದು ಇಷ್ಟು ದೊಡ್ಡದಾಗಿ ಬೆಳೆದಿದೆ. ಇಡೀ ಚಿತ್ರತಂಡವನ್ನು ನಾವು ಪ್ರೀತಿಯಿಂದ ಅಭಿನಂದಿಸುತ್ತೇನೆ ಎಂದಿದ್ದಾರೆ.

ನಿಸ್ಸಂಶಯವಾಗಿ ಕಾಂತಾರ ಚಾಪ್ಟರ್-1 ಕನ್ನಡದ ಶ್ರೇಷ್ಠ ಚಿತ್ರಗಳಲ್ಲಿ ಒಂದು. ಇದನ್ನು ಚಿತ್ರಮಂದಿರಗಳಲ್ಲೇ ನೋಡಿ ಅನುಭವಿಸಬೇಕು. ಹೀಗಾಗಿ ನನ್ನೆಲ್ಲ ಕಾರ್ಯಕರ್ತರೂ ತಪ್ಪದೇ ಚಿತ್ರವನ್ನು ವೀಕ್ಷಿಸಿ ಬೆಂಬಲಿಸಬೇಕು ಎಂದು ಕೋರುವೆ. ಅಷ್ಟು ಮಾತ್ರವಲ್ಲ ಪೈರೆಸಿಯಂಥದ್ದು ಎಲ್ಲಾದರೂ ಕಂಡುಬಂದರೆ ಕೂಡಲೇ ಅದನ್ನು ಚಿತ್ರತಂಡದ, ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ವಿನಂತಿಸುವೆ. ಕಾಂತಾರ ಕನ್ನಡವನ್ನು ಗೆಲ್ಲಿಸಿದೆ. ಕಾಂತಾರಕ್ಕೆ ಅಭೂತಪೂರ್ವ ಗೆಲುವು ಕೊಡುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+