Hamare Baarah: ಮುಸ್ಲಿಮರ ಅವಹೇಳನ ಆರೋಪ; ಎರಡು ವಾರ ಈ ಸಿನಿಮಾ ಬಿಡುಗಡೆ ನಿಷೇಧಿಸಿದ ಕರ್ನಾಟಕ ಸರ್ಕಾರ
ಜೂನ್ 7ರಂದು ಬಿಡುಗಡೆಯಾಗಲು ಸಜ್ಜಾಗಿರುವ ಹಿಂದಿ ಸಿನಿಮಾ "ಹಮಾರೆ ಬಾರಾ" ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕದಲ್ಲಿ ಚಿತ್ರದ ಬಿಡುಗಡೆಗೆ ಸರ್ಕಾರ ನಿಷೇಧ ಹೇರಿದೆ.
ರಾಜ್ಯ ಸರ್ಕಾರವು ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಚಿತ್ರ ಬಿಡುಗಡೆ ಮಾಡದಂತೆ ಮನವಿಗಳನ್ನು ಸ್ವೀಕರಿಸಿದ ಬಳಿಕ ಈ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ಜಿಲ್ಲೆ/ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಬಂದಿರುವ ಅರ್ಜಿಗಳು ಚಿತ್ರದ ಟ್ರೈಲರ್ ಮುಸ್ಲಿಂ ಧರ್ಮವನ್ನು ಪ್ರಚೋದನಕಾರಿ ಮತ್ತು ಅವಹೇಳನಕಾರಿಯಾಗಿ ಚಿತ್ರಿಸುತ್ತದೆ ಎಂದು ಆರೋಪಿಸಿದೆ.
"ಇಂತಹ ಚಿತ್ರಗಳಿಗೆ ಅವಕಾಶ ನೀಡಿದರೆ ಧರ್ಮ, ಜಾತಿಗಳ ನಡುವೆ ದ್ವೇಷ ಸೃಷ್ಟಿಯಾಗುತ್ತದೆ. ದೇಶದಲ್ಲಿ ಉದ್ದೇಶಪೂರ್ವಕವಾಗಿ ಒಂದು ಧರ್ಮವನ್ನು ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆ ತರುವ, ದೇಶದಲ್ಲಿ ಅಶಾಂತಿ ಉಂಟುಮಾಡುವ, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ತರುವ ಷಡ್ಯಂತ್ರ ಇದಾಗಿದೆ. ಜೂನ್ 07, 2024 ರಂದು ದೇಶಾದ್ಯಂತ ಬಿಡುಗಡೆಯಾಗಲಿರುವ ವಿವಾದಾತ್ಮಕ ಚಲನಚಿತ್ರ "ಹಮಾರೆ ಬಾರಾ" ಸಿನಿಮಾವನ್ನು ಬಿಡುಗಡೆ ಮಾಡದಂತೆ ಮನವಿ ಮಾಡಲಾಗಿದೆ.
ಸಿನಿಮಾ ಬಿಡುಗಡೆಗೆ ಎರಡು ದಿನ ಮೊದಲು ಬಾಂಬೆ ಹೈಕೋರ್ಟ್ ಈ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡದಂತೆ ತಡೆಯಾಜ್ಞೆ ತಂದಿದೆ ನೀಡಿದೆ. ಚಿತ್ರದ ಬಿಡುಗಡೆಯ ವಿರುದ್ಧ ಮುಸ್ಲಿಂ ಧಾರ್ಮಿಕ ಸಮುದಾಯದ ಕಾರ್ಯಕರ್ತರು ಮುಂಬೈ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸೆನ್ಸಾರ್ ಪ್ರಮಾಣ ಪತ್ರ ಪಡೆದಿದ್ದರೂ ತಮ್ಮ ಚಿತ್ರಕ್ಕೆ ತಡೆ ಹೇರುವ ಇತ್ತೀಚಿನ ಬೆಳವಣಿಗೆಯ ಬಗ್ಗೆ ನಿರ್ಮಾಪಕ ಬಿರೇಂದರ್ ಭಗತ್ ಮತ್ತು ರವಿ ಎಸ್ ಗುಪ್ತಾ ಕಳವಳ ವ್ಯಕ್ತಪಡಿಸಿದ್ದಾರೆ.
"ನಮ್ಮ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಸಿಕ್ಕಿದೆ. ಈ ಶುಕ್ರವಾರ ನಿಗದಿತ ದಿನಾಂಕದಂದು ಬಿಡುಗಡೆಯಾಗಲಿದೆ. ನಾವು ಕಷ್ಟಪಟ್ಟು ದುಡಿದ ಕೋಟಿಗಟ್ಟಲೆ ಹಣವನ್ನು ಚಿತ್ರ ನಿರ್ಮಾಣಕ್ಕೆ ತೊಡಗಿಸಿ, ಇಡೀ ಜೀವಮಾನದ ಉಳಿತಾಯವನ್ನೇ ಪಣಕ್ಕಿಟ್ಟು, ಕಷ್ಟಪಟ್ಟು ಈ ಸಿನಿಮಾ ಮಾಡಿದ್ದೇವೆ. ನಮ್ಮ ಸಿನಿಮಾವನ್ನು ನೋಡದೆ ತಡೆಯಾಜ್ಞೆ ತಂದಿರುವುದರಿಂದ ನಮಗೆ ಆಘಾತ ಮತ್ತು ನಿರಾಶೆಯಾಗಿದೆ" ಎಂದು ಭಗತ್ ಹೇಳಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications