Actor Darshan: ನಟ ದರ್ಶನ್ಗೆ ಹೈಕೋರ್ಟ್ ಗುಡ್ ನ್ಯೂಸ್
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಸಂಬಂಧಿಸಿದ ಗನ್ ಪರವಾನಗಿ ಅಮಾನತು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ.
ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಜಾಮೀನು ದೊರೆತ ನಂತರ, ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂಬ ಆಧಾರದ ಮೇಲೆ ಪೊಲೀಸರು ಅವರ ಗನ್ ಲೈಸೆನ್ಸ್ ಅಮಾನತುಗೊಳಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಇದೀಗ ವಿಚಾರಣೆ ನಡೆಸಿದ್ದು, ಗನ್ ಅಮಾನತು ಆದೇಶಕ್ಕೆ ತಾತ್ಕಾಲಿಕಾ ತಡೆಯಾಜ್ಞೆ ನೀಡಿದೆ.

ನಟ ದರ್ಶನ್ ಪರ ವಕೀಲರ ವಾದವೇನು?
ದರ್ಶನ್ ಪರ ವಾದ ಮಂಡಿಸಿದ ವಕೀಲ ಸುನೀಲ್ ಕುಮಾರ್ ಎಸ್, "2008ರಿಂದಲೇ ಕಾನೂನುಬದ್ಧವಾಗಿ ಬಂದೂಕು ಪರವಾನಗಿ ಹೊಂದಿದ್ದಾರೆ ಪ್ರಕರಣವೊಂದರಲ್ಲಿ ಅವರ ಹೆಸರಿದೆ ಎನ್ನುವ ಕಾರಣಕ್ಕೆ ಗನ್ ಪರವಾನಗಿ ಅಮಾನತು ಮಾಡಿರುವುದು ಸರಿಯಲ್ಲ. ಈಗಾಗಲೇ ಅವರು ಗನ್ ಅನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ" ಎಂದು ವಾದಿಸಿದರು.
ದರ್ಶನ್ ಗನ್ ಪರವಾನಗಿ ಅಮಾನತು ಆದೇಶಕ್ಕೆ ತಡೆ
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, "ಕೇವಲ ಹೆಸರಿನ ಕಾರಣಕ್ಕಾಗಿ ಈ ಕ್ರಮ ಕೈಗೊಂಡಿಲ್ಲ, ಅವರ ಮೇಲೆ ಗಂಭೀರ ಆರೋಪ ಇರುವ ಕಾರಣಕ್ಕೆ ಪೊಲೀಸರು ಕ್ರಮ ಜರುಗಿಸಿದ್ದಾರೆ" ಎಂದು ಅಭಿಪ್ರಾಯಪಟ್ಟಿತು. ಆದರೂ, ವಿಚಾರಣೆಯನ್ನು ಪರಿಶೀಲಿಸಿದ ನ್ಯಾಯಪೀಠವು ಅಮಾನತು ಆದೇಶಕ್ಕೆ ಮಾರ್ಚ್ 6ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮಧ್ಯಂತರ ಆದೇಶದಿಂದಾಗಿ ಗನ್ ಪರವಾನಗಿ ವಿಚಾರದಲ್ಲಿ ದರ್ಶನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಆದರೆ, ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಎಂದು ಕಾದುನೋಡಬೇಕಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೂ ಈ ಪ್ರಕರಣ ರಾಜ್ಯಾದ್ಯಂತ ಗಮನ ಸೆಳೆಯಿತು. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಮತ್ತು ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ ಎಂದು ಪೊಲೀಸ್ ದಾಖಲೆಗಳಲ್ಲಿ ಉಲ್ಲೇಖವಾಗಿದೆ. ಇನ್ನೂ ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದರೆ, ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications