ದರ್ಶನ್ ನಾಯ್ಡು ವಿರುದ್ಧ ರೌಡಿಶೀಟ್ ಓಪನ್ ಆಗುತ್ತಾ?

ದರ್ಶನ್ ತೂಗುದೀಪ ಅಲಿಯಾಸ್ ದರ್ಶನ್ ನಾಯ್ಡು ಈಗ ಸಾಲು ಸಾಲು ಸಂಕಷ್ಟಕ್ಕೆ ತುತ್ತಾಗಿ ನರಳಾಡುತ್ತಿದ್ದಾರೆ. ಅದರಲ್ಲೂ ಕಂಡ ಕಂಡವರ ಮೇಲೆ ಹಲ್ಲೆ ಮಾಡುವ, ಹೊಡೆದು ಪೋಸ್ ಕೊಡುವ ದರ್ಶನ್ ನಾಯ್ಡು ಅವರ ವರ್ತನೆಯೇ ಅವರ ವಿರುದ್ಧ ಈಗ ರೌಡಿಶೀಟ್ ಬೀಳುವಂತೆ ಮಾಡುತ್ತಿದೆ. ಹಾಗಾದ್ರೆ ದರ್ಶನ್ ತೂಗುದೀಪ ಅಲಿಯಾಸ್ ದರ್ಶನ್ ನಾಯ್ಡು ವಿರುದ್ಧ ರೌಡಿಶೀಟ್ ಓಪನ್ ಮಾಡುವ ಬಗ್ಗೆ ಕರ್ನಾಟಕದ ಗೃಹ ಸಚಿವ ಡಾ. ಪರಮೇಶ್ವರ್ ಅವರು ಹೇಳಿದ್ದು ಏನು? ದರ್ಶನ್ ವಿರುದ್ಧ ಯಾವಾಗ ರೌಡಿಶೀಟ್ ಓಪನ್ ಆಗುತ್ತದೆ? ಆ ಮಾಹಿತಿಗಾಗಿ ಮುಂದೆ ಓದಿ.

ದರ್ಶನ್ ನಾಯ್ಡು ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ಹೆಸರು ಮಾಡಿದ್ದು, ಸಾಕಷ್ಟು ಸಮಯ ಕಂಡ ಕಂಡವರ ಮೇಲೆ ಹಲ್ಲೆ ಮಾಡಿ ಹೊಡೆದಿದ್ದಾರೆ ಎಂಬ ಆರೋಪದ ಕಾರಣಕ್ಕಾಗೇ ಸುದ್ದಿ ಆಗುತ್ತಿದ್ದರು. ಇದೀಗ ನೋಡಿದರೆ ನೇರವಾಗಿ ಕೊಲೆ ಆರೋಪದಲ್ಲೇ ಲಾಕ್ ಆಗಿರುವ ದರ್ಶನ್ ನಾಯ್ಡು ವಿರುದ್ಧ ರೌಡಿಶೀಟ್ ಓಪನ್ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಈ ಕುರಿತು ಇದೀಗ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾಹಿತಿ ನೀಡಿದ್ದು, ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಹಾಗಾದ್ರೆ ದರ್ಶನ್ ಹೆಸರಿನ ಹಿಂದೆ 'ರೌಡಿ' ಪದ ಸೇರಿಸಲು ಸಿದ್ದರಾಮಯ್ಯ ಸರ್ಕಾರ ಸಿದ್ಧವಾಗಿದೆಯಾ? ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದೇನು? ಮುಂದೆ ಓದಿ.

Karnataka Home Minister Said This About Rowdy Sheet Against Darshan Thoogudeepa

ನಟ ದರ್ಶನ್ ನಾಯ್ಡು ವಿರುದ್ಧ ರೌಡಿಶೀಟ್?

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇದೀಗ ನೀಡಿರುವ ಮಹತ್ವದ ಹೇಳಿಕೆಯ ಪ್ರಕಾರ, ದರ್ಶನ್ ಅವರು ಈಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಕುಖ್ಯಾತಿ ಪಡೆದಿದ್ದಾರೆ. ಇದೇ ಹಿನ್ನೆಲೆಯಲ್ಲಿ ನಟ ದರ್ಶನ್ ಅವರ ಬಗ್ಗೆ ಸರ್ಕಾರ ಪರಿಶೀಲನೆ ಮಾಡುತ್ತಿದೆ. ಅದರಲ್ಲೂ ಈಗ ಕರ್ನಾಟಕ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ದರ್ಶನ್‌ರ ವಿರುದ್ಧ ರೌಡಿಶೀಟ್ ಓಪನ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎನ್ನಲಾಗಿದೆ. ಹೀಗಾಗಿ ಗೃಹಸಚಿವ ಡಾ. ಪರಮೇಶ್ವರ್ ಅವರ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ.

3 ತಿಂಗಳ ಕಾಲ ಜೈಲು ಗ್ಯಾರಂಟಿ?

ನಟ ದರ್ಶನ್ ವಿರುದ್ಧ ಇದೀಗ ಕೇಳಿಬಂದಿರುವುದು ಕೊಲೆ ಆರೋಪ ಆಗಿದೆ. ಈ ಕಾರಣಕ್ಕೆ ದರ್ಶನ್ ಸುಲಭವಾಗಿ ಜಾಮೀನು ಪಡೆಯುವುದು ಅಸಾಧ್ಯ. ಮತ್ತೊಂದ್ಕಡೆ ಈಗ ಜಾಮೀನಿಗೆ ಪ್ರಯತ್ನ ಶುರು ಮಾಡಿದರೂ ಮುಂದಿನ 3 ತಿಂಗಳ ಕಾಲ ಜಾಮೀನು ಸಿಗುವುದೇ ಅನುಮಾನ ಅಂತಿದ್ದಾರೆ ಕಾನೂನು ತಜ್ಞರು. ಹೀಗಾಗಿ ದೊಡ್ಡ ಸಂಚಲನ ಸೃಷ್ಟಿ ಆಗಿದೆ. ಮತ್ತೊಂದು ಕಡೆ, ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುವುದು ಕೂಡ ಬಹುತೇಕ ಪಕ್ಕಾ ಅಂತಿದ್ದಾರೆ ಅವರ ವಿರೋಧಿಗಳು ಈ ನಡುವೆ ಮೃತ ರೇಣುಕಾಸ್ವಾಮಿ ಅವರ ಅಪ್ಪ & ಅಮ್ಮ, ಪತ್ನಿ ಚಿಂತೆಯಲ್ಲಿ ಮುಳುಗಿದ್ದಾರೆ. ಹಾಗೇ ರೇಣುಕಾಸ್ವಾಮಿ ಅವರ ಪತ್ನಿ ಈಗ ಗರ್ಭಿಣಿ ಆಗಿದ್ದಾರೆ.

ದರ್ಶನ್ & ಗ್ಯಾಂಗ್‌ಗೆ ಅನ್ನ-ಸಾರು!

ಪ್ರತಿದಿನ ಎಣ್ಣೆ ಹೊಡೆದು, ಸಖತ್ ಎಂಜಾಯ್ ಮಾಡುತ್ತಾ ಮಾಂಸ ತಿನ್ನುತ್ತಿದ್ದ ನಟ ದರ್ಶನ್ & ಗ್ಯಾಂಗ್ ಈಗ ಅನ್ನ ಸಾರು ತಿಂದು ಮಲಗುವ ಪರಿಸ್ಥಿತಿ ಬಂದಿದೆ. ಪೊಲೀಸರು ಆರೋಪಿಗಳ ತಂಡಕ್ಕೆ ಅನ್ನ ಸಾರು ನೀಡಿ, ಚಾಪೆ ಕೊಟ್ಟು ಮಲಗಿಸಿದ್ದಾರೆ. ಈ ಮೂಲಕ ಕೊಲೆ ಆರೋಪದ ಹಿನ್ನೆಲೆ ಕಂಬಿ ಹಿಂದೆ ಬಿದ್ದಿರುವ, ಸೋ ಕಾಲ್ಡ್ ಡಿ-ಬಾಸ್ ಇದೀಗ ಹಿಂಸೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ದರ್ಶನ್ ಅವರ ಬೆನ್ನುಹತ್ತುವ ಅಪಾಯ ಕಾಡುತ್ತಿದ್ದು, ಏನಾಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ತೂಗುದೀಪ ದರ್ಶನ್ ಅವರ ಅಭಿಮಾನಿಗಳು ಸೈಲೆಂಟ್ ಆಗುತ್ತಿದ್ದಾರೆ.

ಪತ್ರಕರ್ತರ ತೀವ್ರ ಆಕ್ರೋಶ!

ಪೊಲೀಸ್ ಅಧಿಕಾರಿಗಳ ವರ್ತನೆಯಿಂದ ಮಾಧ್ಯಮ ಸಿಬ್ಬಂದಿ ಆಕ್ರೋಗೊಂಡಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ, ದರ್ಶನ್ ಅಭಿಮಾನಿ ಮಾಧ್ಯಮಗಳ ಎದುರಿಗೆ ಬಂದು ಮಾಧ್ಯಮಗಳ ಕುರಿತು ತುಂಬ ಕೀಳಾಗಿ ಮಾತನಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ವೇಳೆ ಅಲ್ಲಿದ್ದ ಮಾಧ್ಯಮ ಸಿಬ್ಬಂದಿ ದಿಢೀರ್ ರೊಚ್ಚಿಗೆದ್ದಿದ್ದು ಆತನ ಮುಖಚರಿ ಸೆರೆಹಿಡಿಯಲು ಹೋಗಿದ್ದಾರೆ. ಈ ವೇಳೆ ಹೆದರಿದ ದರ್ಶನ್ ಅಭಿಮಾನಿ, ಆ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಇಷ್ಟಾದರೂ ಮಾಧ್ಯಮಗಳ ಸಿಬ್ಬಂದಿ ಆತನ ಹಿಂದೆ ಓಡಿದ್ದಾರೆ. ಆಗ ತಕ್ಷಣ ಪೊಲೀಸರು ಆತನನ್ನ ಪೊಲೀಸ್ ಠಾಣೆ ಒಳಗೆ ಕರೆದುಕೊಂಡು ಹೋಗಿದ್ದಾರೆ. ಹಾಗೇ ಆತನಿಗೆ ಅವರದ್ದೇ ಭಾಷೆಯಲ್ಲಿ ಬುದ್ಧಿ ಹೇಳಿ, ರುಚಿ ತೋರಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+