Darshan Thoogudeepa: ದರ್ಶನ್ ತೂಗುದೀಪ್ ಅಭಿಮಾನಿಗಳ ಮೇಲೆ ಪೊಲೀಸ್ ಪಡೆಯಿಂದ ಲಾಠಿ ಚಾರ್ಜ್!
ದರ್ಶನ್ ತೂಗುದೀಪ್ ಅವರು ಕೋಟಿ ಕೋಟಿ ಅಭಿಮಾನಿಗಳನ್ನ ಹೊಂದಿದ್ದಾರೆ. ಅಭಿಮಾನ ಎನ್ನುವುದು ಒಳ್ಳೆಯದು, ಆದರೆ ಅದೇ ಅಭಿಮಾನ ಮಿತಿ ಮೀರಿದರೆ ಏನಾಗುತ್ತದೆ? ಎಂಬುದಕ್ಕೆ ಇಂದು ಮತ್ತೊಂದು ತಾಜಾ ಉದಾಹರಣೆ ಸಿಕ್ಕಿದೆ. ದರ್ಶನ್ ತೂಗುದೀಪ್ ಅವರು ಅಭಿನಯ ಮಾಡಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದ 'ಕರಿಯ' ಸಿನಿಮಾ ಇಂದು ರೀ ರಿಲೀಸ್ ಆಗಿತ್ತು. ಹೀಗೆ ಥಿಯೇಟರ್ ಸ್ಕ್ರೀನ್ ಮೇಲೆ & ಥಿಯೇಟರ್ ಹೊರಗಡೆಯೂ ಸಂಭ್ರಮ ಮೊಳಗಿರುವಾಗ ಕೆಲವು ಅಭಿಮಾನಿಗಳ ಅತಿರೇಕ ಎಂತಹ ಕೆಟ್ಟ ಪರಿಸ್ಥಿತಿ ತಂದಿತ್ತು ಗೊತ್ತಾ?
ದರ್ಶನ್ ತೂಗುದೀಪ್ ಇದೀಗ ಬಳ್ಳಾರಿ ಜೈಲು ಸೇರಿದ ನಂತರ ಮತ್ತೊಂದು ರೀತಿ ತಿಕ್ಕಾಟವು ಶುರುವಾಗಿದೆ. ಅದರಲ್ಲೂ ನ್ಯೂಸ್ ಚಾನೆಲ್ಗಳ ವಿರುದ್ಧ ದರ್ಶನ್ ತೂಗುದೀಪ್ ಅಭಿಮಾನಿ ಬಳಗ ಆಕ್ರೋಶ ಹೊರ ಹಾಕುತ್ತಾ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದೆ. ಇದು ಸಾಲದು ಎನ್ನುವಂತೆ ಇವತ್ತು ಬ್ಯಾನರ್ ಕೂಡ ಮಾಡಿ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಆದರೆ ಹೀಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಲು ಒಂದು ಮಾರ್ಗ ಇರುತ್ತದೆ, ಒಂದು ಗಡಿ ಇರುತ್ತದೆ. ಅದನ್ನು ಮೀರಿ ವರ್ತಿಸಿದ ಕೆಲವು ಅಭಿಮಾನಿಗಳಿಂದ ಇವತ್ತು ಚಿತ್ರಮಂದಿರದ ಮುಂದೆ ದೊಡ್ಡ ಗಲಾಟೆಯೇ ಶುರುವಾಗಿತ್ತು.

ಕುಡಿದು ಬಂದ ಕೆಲವರಿಂದ ಗಲಾಟೆ?
'ಕರಿಯ' ಸಿನಿಮಾ ಪ್ರದರ್ಶನಕ್ಕೆ ಮೊದಲೇ ಕಿರಿಕ್ ಶುರುವಾಗಿತ್ತು. ಆಗ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗಕ್ಕೆ ಪೊಲೀಸರು ನೇರ ಎಚ್ಚರಿಕೆ ನೀಡಿ, ಯಾವುದೇ ನಿಯಮ ಮೀರುವ ಹಾಗೂ ಬೇರೆಯವರಿಗೆ ತೊಂದರೆ ನೀಡುವ ಕೆಲಸ ಮಾಡಬೇಡಿ ಎಂದು ವಾರ್ನ್ ಮಾಡಿದ್ದರು. ಹೀಗೆ ಎಚ್ಚರಿಕೆ ನೀಡಿದ್ದರೂ ಅದನ್ನ ಪಾಲಿಸದ ಕೆಲವರು ಗಲಾಟೆಯನ್ನ ಶುರು ಮಾಡಿಬಿಟ್ಟರು.
ಅದ್ರಲ್ಲೂ ಮಾಧ್ಯಮಗಳ ಬಗ್ಗೆ ದರ್ಶನ್ ತೂಗುದೀಪ್ ಅವರ ಕೆಲವು ಫ್ಯಾನ್ಸ್ ಬಾಯಿಗೆ ಬಂದ ರೀತಿ ಮಾತನಾಡ್ತಾ, ಗಲಾಟೆ ಶುರು ಮಾಡಿದ್ದರು ಎನ್ನಲಾಗಿದೆ. ಮತ್ತೊಂದು ಕಡೆಯಲ್ಲಿ ಮದ್ಯ ಸೇವನೆ ಅಂದ್ರೆ ಎಣ್ಣೆ ಹೊಡೆದು ಬಂದ ಕೆಲವರು ವ್ಯತಿರಿಕ್ತವಾಗಿ ವರ್ತಿಸಿದರು ಎಂದು ಆರೋಪ ಮಾಡಲಾಗಿದೆ. ಈ ಸಮಯದಲ್ಲಿ ಥಿಯೇಟರ್ ಎದುರು ಭದ್ರತೆಗೆ ಅಂತಾ ನಿಯೋಜನೆ ಆಗಿದ್ದ ಪೊಲೀಸರು ಲಾಠಿಗೆ ಕೆಲಸ ಕೊಟ್ಟರು.
ಪ್ರತಿಭಟನೆ ಮಾಡಲು ದಾರಿ ಇದೆ...
ಒಟ್ನಲ್ಲಿ ಇದೇಲ್ಲಾ ಏನೇ ಇರಲಿ, ಪ್ರಜಾಪ್ರಭುತ್ವದ ದೇಶದಲ್ಲಿ ಬದುಕುವಾಗ ಅದಕ್ಕೆ ಅದರದ್ದೇ ಮೌಲ್ಯ ಇರುತ್ತದೆ ಎಂಬುದನ್ನ ಅರಿತುಕೊಳ್ಳಬೇಕು. ಯಾಕೆ ಅಂದ್ರೆ ಮಾಧ್ಯಮಗಳು ಕೂಡ ಪ್ರಜಾಪ್ರಭುತ್ವದ ಒಂದು ಅಂಗ. ಪ್ರಜಾಪ್ರಭುತ್ವದ 4ನೇ ಅಂಗ ಎಂದು, ಮಾಧ್ಯಮಗಳನ್ನು ಕರೆಯಲಾಗುತ್ತದೆ. ಹೀಗಿದ್ದಾಗ ಮಾಧ್ಯಮಗಳ ವರದಿ ತಪ್ಪಾಗಿದ್ದರೆ ಅದನ್ನ ವಿರೋಧಿಸಲು & ಅದರ ಬಗ್ಗೆ ಪ್ರತಿಭಟಿಸಲು ಕಾನೂನು ರೀತಿಯ ಹಾದಿ ಇರುತ್ತದೆ. ಆದರೆ ಹೀಗೆಲ್ಲಾ ಮಾನ ಹರಾಜು ಆಗುವಂತೆ ಮಾತನಾಡುವುದು, ಕೆಟ್ಟ ಭಾಷೆ ಬಳಸಿ ಬೈಯುವುದು ಸರಿಯಲ್ಲ ಎಂಬ ಮಾತನ್ನು ಇದೀಗ ಕನ್ನಡಿಗರು ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಜೋರಾಗಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications