‘ಹೊಂಬಾಳೆ ಫಿಲ್ಮ್ಸ್’ ವಿರುದ್ಧ ಕಾರ್ತಿಕ್ ಗೌಡ ಮುನಿಸು?
'ಹೊಂಬಾಳೆ ಫಿಲ್ಮ್ಸ್' ಕನ್ನಡ ಸಿನಿಮಾ ರಂಗದ ಹೆಮ್ಮೆಯಾಗಿ ಬೆಳೆದಿದೆ. ಅದರಲ್ಲೂ KGF ಸಿನಿಮಾ ಸರಣಿ ನಂತರ 'ಹೊಂಬಾಳೆ ಫಿಲ್ಮ್ಸ್' ಗತ್ತು ಇಡೀ ಇಂಡಿಯಾಗೆ ಗೊತ್ತಾಗಿದೆ. ಈ ಸಂಸ್ಥೆ ಇದೀಗ ಜಾಗತಿಕ ಮಟ್ಟದಲ್ಲಿ ಕೂಡ ಸದ್ದು ಮಾಡುತ್ತಿದೆ. ಅಲ್ಲದೆ ಸಾವಿರಾರು ಕೋಟಿ ಹೂಡಿಕೆ ಮಾಡಿ ಸಿನಿಮಾಗಳನ್ನ ನಿರ್ಮಾಣ ಮಾಡಲು ಸಜ್ಜಾಗಿದೆ.
ಹೀಗಿದ್ದಾಗ 'ಹೊಂಬಾಳೆ ಫಿಲ್ಮ್ಸ್' ಜೊತೆಗೆ ಗಟ್ಟಿಯಾಗಿ ನಿಂತಿದ್ದವರು ವಿಜಯ್ ಕಿರಗಂದೂರು & ಕಾರ್ತಿಕ್ ಗೌಡ ಅವರು. ಆದ್ರೆ ಕೆಆರ್ಜಿ ಸ್ಟುಡಿಯೋ ಮಾಲೀಕ ಕಾರ್ತಿಕ್ ಗೌಡ ಅವರು ಇತ್ತೀಚೆಗೆ ಅಂತರ ಕಾಯ್ದುಕೊಂಡು 'ಹೊಂಬಾಳೆ ಫಿಲ್ಮ್ಸ್' ಸಂಸ್ಥೆಯಿಂದ ದೂರ ಇದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಇದಕ್ಕೆ ಅವರೇ ಈಗ ಉತ್ತರ ನೀಡಿದ್ದಾರೆ.

3 ಸಾವಿರ ಕೋಟಿ ಹೂಡಿಕೆ?
ಮುಂದಿನ 5 ವರ್ಷದಲ್ಲಿ ಮನರಂಜನಾ ಕ್ಷೇತ್ರದಲ್ಲಿ, 3 ಸಾವಿರ ಕೋಟಿ ರೂಪಾಯಿಯ ಹೂಡಿಕೆ ಮಾಡ್ತೀವಿ ಎಂದಿತ್ತು ಹೊಂಬಾಳೆ ಫಿಲ್ಮ್ಸ್. ಆ ನಂತರ ಹೊಂಬಾಳೆ ಗತ್ತು ಮತ್ತಷ್ಟು ಹೆಚ್ಚಾಗಿ ಸ್ಯಾಂಡಲ್ವುಡ್ ಟು ಬಾಲಿವುಡ್ ಸಂಚಲನ ಸೃಷ್ಟಿಯಾಗಿದೆ ಹೀಗಿದ್ದಾಗ 'ಹೊಂಬಾಳೆ ಫಿಲ್ಮ್ಸ್' ಮತ್ತು ಕೆಆರ್ಜಿ ಸ್ಟುಡಿಯೋ ಮಾಲೀಕ ಕಾರ್ತಿಕ್ ಗೌಡ ದೂರ ಆಗಿದ್ದಾರೆ, ಇಬ್ಬರ ನಡುವೆ ಮುನಿಸು ಶುರುವಾಗಿದೆ ಎಂಬ ಮಾತು ಓಡಾಡುತ್ತಿತ್ತು. ಆದರೆ ಇದೀಗ ಅದಕ್ಕೆಲ್ಲಾ ಸ್ಪಷ್ಟನೆ ಸಿಕ್ಕಿದ್ದು, ಸ್ವತಃ ಕಾರ್ತಿಕ್ ಗೌಡ ಖಾಸಗಿ ಸಂದರ್ಶನದಲ್ಲಿ ಈ ಕುರಿತು ಮಾತನಾಡಿ ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುವವರಿಗೆ ಖಡಕ್ ಉತ್ತರ ನೀಡಿದ್ದಾರೆ.
ಸಾಲು ಸಾಲು ಹಿಟ್ ಸಿನಿಮಾ!
ಕನ್ನಡ ಸಿನಿಮಾ ರಂಗದ ಶ್ರೀಮಂತ ನಿರ್ಮಾಣ ಸಂಸ್ಥೆ 'ಹೊಂಬಾಳೆ ಫಿಲ್ಮ್ಸ್' ಬಿಗ್ ಬಜೆಟ್ನ ಮೆಗಾ ಸಿನಿಮಾಗಳ ನಿರ್ಮಾಣ ಮಾಡಿದೆ. 'ರಾಜಕುಮಾರ', 'ಕೆಜಿಎಫ್', 'ಕಾಂತಾರ' ಸೇರಿ 'ಸಲಾರ್' ರೀತಿ ದೊಡ್ಡ ದೊಡ್ಡ ಸಿನಿಮಾ ನೀಡಿದೆ. ಈ ಸಮಯದಲ್ಲಿ ಕಾರ್ತಿಕ್ ಗೌಡ & ವಿಜಯ್ ಕಿರಗಂದೂರು ಒಟ್ಟಿಗೆ ಇದ್ದರು. ಆದರೆ ಇತ್ತೀಚೆಗೆ ಕಾರ್ತಿಕ್ ಗೌಡ ಹೊರ ಬಂದು ತಮ್ಮ ಸಂಸ್ಥೆಯ ಮೇಲೆ ಮಾತ್ರ ಗಮನ ಇಟ್ಟಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದೀಗ ಎಲ್ಲಾ ಮಾತುಗಳಿಗೂ ಉತ್ತರ ನೀಡಿದ್ದಾರೆ ಕಾರ್ತಿಕ್ ಗೌಡ.
ಕಾರ್ತಿಕ್ ಗೌಡ ಹೇಳಿದ್ದು ಏನು?
ಈ ಗಾಳಿ ಮಾತುಗಳನ್ನು ಕೆಆರ್ಜಿ ಕಾರ್ತಿಕ್ ಗೌಡ ಅವರು ನಿರಾಕರಿಸಿದ್ದು, ಸದ್ಯ ಕೆಆರ್ಜಿ ಸ್ಟುಡಿಯೋದಲ್ಲಿ ಸಾಕಷ್ಟು ಕೆಲಸ ನಡೆಯುತ್ತಿದೆ. ಅಲ್ಲಿ ನಾನು ಬ್ಯುಸಿ ಆಗಿದ್ದೇನೆ, ಅದನ್ನ ಬಿಟ್ಟು ಬೇರೆ ಏನೂ ಇಲ್ಲ. ವಿಜಯ್ ಕಿರಗಂದೂರು ನನ್ನ ಸಹೋದರ, ಈ ರೀತಿ ಸೋಷಿಯಲ್ ಮೀಡಿಯಾ ಕಮೆಂಟ್ಗಳಿಗೆ ನಾನು ಉತ್ತರ ನೀಡಬೇಕಿಲ್ಲ ಎಂದಿದ್ದಾರೆ. ಈ ಮೂಲಕ ಈಗ ಕೂಡ ತಾವು 'ಹೊಂಬಾಳೆ ಫಿಲ್ಮ್ಸ್' ಸಂಸ್ಥೆ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications