₹3,50,00,00,000 ಬಜೆಟ್ನ ಸಿನಿಮಾ ರಿಜೆಕ್ಟ್ ಮಾಡಿದ ಕತ್ರಿನಾ, ಪ್ರಭಾಸ್ ಇದ್ರೂ ಬೇಡ ಅಂದಿದ್ದೇಕೆ?
ಆ ನಟನ ಜೊತೆ ಸಿನಿಮಾದಲ್ಲಿ ನಟಿಸಬೇಕು ಅನ್ನೋದು ಎಷ್ಟೋ ನಟಿಯರ ಕನಸು. ಅವರ ಸಿನಿಮಾದಲ್ಲಿ ಒಂದು ಆಫರ್ ಸಿಕ್ಕರೆ ಸಾಕಪ್ಪಾ ಎಂದು ದೇವರಲ್ಲಿ ಬೇಡಿಕೊಳ್ತಾರೆ. ಆದರೆ ಈ ಅದೃಷ್ಟ ಮನೆ ಬಾಗಿಲಿಗೇ ಬಂದ್ರೂ ಬೇಡ ಅಂದಿದ್ದಾರೆ ಖ್ಯಾತ ನಟಿ ಕತ್ರಿನಾ ಕೈಫ್. ಬರೋಬ್ಬರಿ ₹350 ಕೋಟಿ ಬಿಗ್ ಬಜೆಟ್ ಸಿನಿಮಾ ಬೇಡ ಎಂದು ರಿಜೆಕ್ಟ್ ಮಾಡಿದ್ದಾರೆ. ಆರು ತಿಂಗಳ ಕಾಲ ಸತಾಯಿಸಿ ಈ ಸಿನಿಮಾದಲ್ಲಿ ನಟಿಸಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಕಾರಣ ಏನೆಂಬುದು ಇದೀಗ ಬಹಿರಂಗವಾಗಿದೆ.
ಟಾಲಿವುಡ್ ಟಾಪ್ ನಟರಲ್ಲಿ ಡಾರ್ಲಿಂಗ್ ಪ್ರಭಾಸ್ ಕೂಡ ಒಬ್ಬರು. ಬಾಹುಬಲಿ ಬಳಿಕ ಪ್ರಭಾಸ್ಗೆ ಬಾಲಿವುಡ್ನಲ್ಲೂ ಫ್ಯಾನ್ಸ್ ಹೆಚ್ಚಾಗಿದ್ದಾರೆ. ಬಾಲಿವುಡ್ ಬ್ಯೂಟಿಗಳು ಪ್ರಭಾಸ್ ಜೊತೆ ನಟಿಸಿ ಮಿಂಚಿದ್ದಾರೆ. ಆದರೆ ಕತ್ರಿನಾ ಕೈಫ್ ಪ್ರಭಾಸ್ ಸಿನಿಮಾದಲ್ಲಿ ನಟಿಸಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದರು ಎನ್ನಲಾಗಿದೆ. ಪ್ರಭಾಸ್ ನಟನೆಯ "ಸಾಹೋ" ಸಿನಿಮಾದಲ್ಲಿ ಕತ್ರಿನಾ ಕೈಫ್ಗೆ ಅವಕಾಶ ಸಿಕ್ಕಿತ್ತು. ಆದರೆ ಅವರು ಸಿನಿಮಾ ರಿಜೆಕ್ಟ್ ಮಾಡಿದ್ದರು.

ಸಾಹೋ ಸಿನಿಮಾಗೆ ಮೊದಲ ಆಯ್ಕೆ ಕತ್ರಿನಾ ಕೈಫ್ ಅವರೇ ಆಗಿದ್ದರು. ಬಾಹುಬಲಿ-2 ರಿಲೀಸ್ಗೂ ಮುನ್ನ ಸಾಹೋ ನಿರ್ಮಾಪಕರು ಪ್ರೇಕ್ಷಕರನ್ನು ಆಕರ್ಷಿಸಲು ಪ್ರಭಾಸ್ ಜೊತೆ ಬಾಲಿವುಡ್ನ ಕತ್ರಿನಾ ಅವರನ್ನು ತೆರೆ ಮೇಲೆ ತರಬೇಕು ಎಂದು ಪ್ರಯತ್ನಿಸಿದ್ದರು. ಈ ಪಾತ್ರಕ್ಕಾಗಿ ಕತ್ರಿನಾ ಕೈಫ್ ಅವರನ್ನು ಸಂಪರ್ಕಿಸಿದರು. ಆದರೆ ಕತ್ರಿನಾ ಅವರು ನೇರವಾಗಿ ಆಫರ್ ನಿರಾಕರಿಸಿದ್ದರು ಎಂದು ವರದಿಯಾಗಿದೆ.
ಪ್ರಭಾಸ್ ಅವರು ಆಗ ಇನ್ನೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಚ್ಚು ಗುರುತಿಸಿಕೊಳ್ಳದ ಕಾರಣಕ್ಕೆ ಕತ್ರಿನಾ ಅವರು ಸಿನಿಮಾ ರಿಜೆಕ್ಟ್ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಸಾಹೋ ಚಿತ್ರತಂಡವು ಕತ್ರಿನಾ ಅವರಿಗಾಗಿ ಸುಮಾರು ಆರು ತಿಂಗಳ ಕಾಲ ಕಾಯುತ್ತಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಅವರು ಅಂತಿಮವಾಗಿ ಮತ್ತೊಬ್ಬ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರನ್ನು ಆಯ್ಕೆ ಮಾಡಿಕೊಂಡಿತು.

ಬಾಹುಬಲಿ ಬಳಿಕ ಪ್ರಭಾಸ್ ಹವಾ
ಆದರೆ ಬಾಹುಬಲಿ-2 ರಿಲೀಸ್ ಆದ ನಂತರ ಪ್ರಭಾಸ್ ಪ್ಯಾನ್ ಇಂಡಿಯಾ ಹೀರೋ ಆಗಿ ಜನಪ್ರಿಯತೆ ಪಡೆದ ನಂತರ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದ್ದರು. ಆಗ ಕತ್ರಿನಾ ಕೈಫ್ ಅವರ ತಂಡವು ಸಾಹೋ ಚಿತ್ರತಂಡದವರನ್ನು ಸಂಪರ್ಕಿಸಿ ಹೊಸ ಆಸಕ್ತಿಯನ್ನು ವ್ಯಕ್ತಪಡಿಸಿತ್ತು ಎಂದು ವರದಿಗಳು ಹೇಳಿವೆ.
ಆದರೆ ಆ ಹೊತ್ತಿಗೆ ತನ್ನ ಎಲ್ಲ ಪಾತ್ರವರ್ಗವನ್ನು ಆಯ್ಕೆ ಮಾಡಿತ್ತು, ಪ್ರೊಡಕ್ಷನ್ ಕೆಲಸಗಳು ಕೂಡ ಮುಂದುವರೆದಿತ್ತು. ಹೀಗಾಗಿ ಕತ್ರಿನಾ ಅವರಿಗೆ ಅವಕಾಶ ಕೈತಪ್ಪಿತು ಎನ್ನಲಾಗಿದೆ. ಸುಮಾರು 350 ಕೋಟಿ ಬಜೆಟ್ನಲ್ಲಿ ನಿರ್ಮಿಸಲಾದ ಸಾಹೋ ಚಿತ್ರವು, ಬಾಹುಬಲಿ ನಂತರದ ಪ್ರಭಾಸ್ ಅವರ ಅಪಾರ ಜನಪ್ರಿಯತೆ ಬಳಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಬರೋಬ್ಬರಿ 435 ಕೋಟಿ ಕಲೆಕ್ಷನ್ ಕೂಡ ಮಾಡಿತ್ತು. ಆದರೆ ಕತ್ರಿನಾ ಕೈಫ್ ಈ ಸಿನಿಮಾದಲ್ಲಿ ನಟಿಸುವ ಅವಕಾಶ ಮಿಸ್ ಮಾಡಿಕೊಂಡರು.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications