KCC: ಶಿವಣ್ಣ ತಂಡಕ್ಕೆ ಸೋಲು! ಕನ್ನಡ ಚಲನಚಿತ್ರ ಕಪ್ ಗೆದ್ದ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್
ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್ಗೆ ತೆರೆ ಬಿದ್ದಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ಈ ಬಾರಿ ಕನ್ನಡ ಚಲನಚಿತ್ರ ಕಪ್ ಗೆದ್ದು ಬೀಗಿದೆ.
ಡಿಸೆಂಬರ್ 24 ರಿಂದ ಡಿಸೆಂಬರ್ 26 ರವರೆಗೆ ನಡೆದ ಅದ್ದೂರಿ ಕನ್ನಡ ಚಲನಚಿತ್ರ ಕಪ್ಗೆ ತೆರೆ ಬಿದ್ದಿದೆ. ಶಿವರಾಜ್ ಕುಮಾರ್, ಸುದೀಪ್, ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ರಿಯಲ್ ಸ್ಟಾರ್ ಉಪೇಂದ್ರ, ಡಾಲಿ ಧನಂಜಯ ನಾಯಕತ್ವದಲ್ಲಿ ಆರು ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಸಿನಿಮಾ ತಾರೆಯರಿಗೆ ಸ್ಟಾರ್ ಕ್ರಿಕೆಟಿಗರು ಕೂಡ ಜೊತೆಯಾಗಿದ್ದರು. ಸುರೇಶ್ ರೈನಾ, ಎಸ್ ಬದ್ರಿನಾಥ್, ರಾಬಿನ್ ಉತ್ತಪ್ಪ, ತಿಲಕರತ್ನೆ ದಿಲ್ಷಾನ್, ಹರ್ಷಲ್ ಗಿಬ್ಸ್, ಮುರಳಿ ವಿಜಯ್ ಕೂಡ ಈ ಟೂರ್ನಿಯ ಭಾಗವಾಗಿದ್ದರು.
ಸೋಮವಾರ ಪಂದ್ಯಾವಳಿಗೆ ತೆರೆ ಬಿದ್ದಿದ್ದು, ಗಂಗಾ ವಾರಿಯರ್ಸ್ ಮತ್ತು ರಾಷ್ಟ್ರಕೂಟ ಫ್ಯಾಂಥರ್ಸ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರಶಸ್ತಿ ಗೆದ್ದಿದೆ.
4 ರನ್ಗಳ ರೋಚಕ ಗೆಲುವು
ಸೋಮವಾರ ನಡೆದ ಚಾಂಪಿಯನ್ಶಿಪ್ ಪಂದ್ಯದಲ್ಲಿ ಗಂಗಾ ವಾರಿಯರ್ಸ್ ತಂಡವು ಹೊಯ್ಸಳ ಈಗಲ್ಸ್ ವಿರುದ್ಧ 10 ರನ್ಗಳ ಜಯ ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿತ್ತು. ಅಂತಿಮ ಗುಂಪು ಹಂತದ ಪಂದ್ಯದಲ್ಲಿ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡ ಕದಂಬ ಲಯನ್ಸ್ ತಂಡವನ್ನು 7 ವಿಕೆಟ್ಗಳ ಅಂತರದಿಂದ ಸೋಲಿಸಿ ಫೈನಲ್ಗೆ ಅರ್ಹತೆ ಪಡೆಯಿತು.

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರಾಷ್ಟ್ರಕೂಟ ಪ್ಯಾಂಥರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಅವಿನಾಶ್ 12 ಎಸೆತಗಳಲ್ಲಿ 40 ರನ್ ಗಳಿಸುವ ಮೂಲಕ ಗಂಗಾ ವಾರಿಯರ್ಸ್ 10 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 111 ರನ್ ಕಲೆ ಹಾಕಿತು.
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ರಾಷ್ಟ್ರಕೂಟ ಪ್ಯಾಂಥರ್ಸ್ ಆಕ್ರಮಣಕಾರಿಯಾಗಿ ಇನ್ನಿಂಗ್ಸ್ ಪ್ರಾರಂಭಿಸಿದರು. ಮೊದಲ 5 ಓವರ್ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 53 ರನ್ ಗಳಿಸಿ ಗೆಲುವಿನ ಭರವಸೆ ಮೂಡಿಸಿದರು. ಆದರೂ ಗಂಗಾ ವಾರಿಯರ್ಸ್ ಬೌಲರ್ಗಳು ಉಳಿದ ಓವರ್ಗಳಲ್ಲಿ ಉತ್ತಮ ಪ್ರದರ್ಶನ ನೀಡಿದರು, ಅಂತಿಮವಾಗಿ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು 107 ರನ್ಗಳಿಗೆ ಕಟ್ಟಿಹಾಕುವ ಮೂಲಕ 4 ರನ್ಗಳ ರೋಚಕ ಗೆಲುವು ಸಾಧಿಸಿದ ಗೋಲ್ಡನ್ ಸ್ಟಾರ್ ಗಣೇಶ್ ಪಡೆ ಗೆಲುವು ಸಾಧಿಸಿತು.
ಫೈನಲ್ ಪಂದ್ಯಕ್ಕೆ ಮುನ್ನ ಚಂದನವನದ ತಾರೆಗಳು ಮನರಂಜನಾ ಕಾರ್ಯಕ್ರಮ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿತು. ಕನ್ನಡ ಚಿತ್ರರಂಗದ ಪ್ರಮುಖ ನಟಿಯರು, ತಂತ್ರಜ್ಞರು ಹಾಜರಿದ್ದರು. ಫೈನಲ್ ಪಂದ್ಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಈ ಸಂಭ್ರಮದಲ್ಲಿ ಪಾಲ್ಗೊಂಡರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications