"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ
ಧ್ರುವ ಸರ್ಜಾ ನಟನೆಯ, ಪ್ರೇಮ್ ನಿರ್ದೇಶನದ 'ಕೆಡಿ: ದ ಡೆವಿಲ್' ಚಿತ್ರದ 'ಸರ್ಸೀ ಸರ್ಸೀ..' (ಹಿಂದಿಯಲ್ಲಿ 'ಸರ್ಕೆ ಚುನರ್ ತೇರಿ ಸರ್ಕೆ') ಹಾಡಿನ ವಿವಾದ ಈಗ ದೆಹಲಿ ತಲುಪಿದೆ. ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಮತ್ತು ಲೈಂಗಿಕ ಪ್ರಚೋದಕ ದೃಶ್ಯಗಳಿವೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೆನ್ಸಾರ್ ಮಂಡಳಿಗೆ (CBFC) ಸೂಚಿಸಿದೆ.
ಸೆನ್ಸಾರ್ ಮಂಡಳಿಗೆ ಖಡಕ್ ಸೂಚನೆ
ನೋರಾ ಫತೇಹಿ ಮತ್ತು ಸಂಜಯ್ ದತ್ ಕಾಣಿಸಿಕೊಂಡಿರುವ ಈ ಹಾಡಿನ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸೆನ್ಸಾರ್ ಮಂಡಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಹಾಡಿನ ಸಾಹಿತ್ಯ ಮತ್ತು ದೃಶ್ಯಗಳ ಕುರಿತು ಬಂದಿರುವ ದೂರುಗಳು ನಿಜವೆಂದು ಸಾಬೀತಾದಲ್ಲಿ, ತಕ್ಷಣವೇ ಎಲ್ಲ ಮಾಧ್ಯಮ ವೇದಿಕೆಗಳಿಂದ (ಡಿಜಿಟಲ್ & ಸೋಷಿಯಲ್ ಮೀಡಿಯಾ) ಈ ಹಾಡನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಚಿವಾಲಯ ನಿರ್ದೇಶನ ನೀಡಿದೆ. ಹಾಡಿನಲ್ಲಿ ಬಳಸಿರುವ ಸಾಹಿತ್ಯ ಮತ್ತು ನೃತ್ಯ ಸಂಯೋಜನೆಯು ಅಸಭ್ಯತೆಯಿಂದ ಕೂಡಿದೆ ಎಂದು ಅನೇಕರು ದೂರಿದ್ದಾರೆ.

ಈ ಹಿಂದೆಯೇ ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗವು ಈ ಬಗ್ಗೆ ನೋಟಿಸ್ ನೀಡಿದ್ದವು. ಈಗ ಕೇಂದ್ರ ಸರ್ಕಾರವೇ ಮಧ್ಯಪ್ರವೇಶಿಸಿರುವುದು ಚಿತ್ರತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಕೆಡಿ ಚಿತ್ರಕ್ಕೆ ಪ್ರಮಾಣಪತ್ರ ನೀಡುವ ಮುನ್ನ ಅಥವಾ ಹಾಡಿನ ಪ್ರಸಾರಕ್ಕೆ ಸಂಬಂಧಿಸಿದಂತೆ ಸೆನ್ಸಾರ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆಯೇ ಎಂದು ಪರಿಶೀಲಿಸುವಂತೆಯೂ ಮಂಡಳಿಗೆ ತಿಳಿಸಲಾಗಿದೆ.
ಹಾಡಿನಲ್ಲಿನ ಅಸಭ್ಯತೆಯ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಯೂಟ್ಯೂಬ್ನಿಂದ ಹಾಡಿನ ಹಿಂದಿ ಆವೃತ್ತಿಯನ್ನು ಈಗಾಗಲೇ ಡಿಲೀಟ್ ಮಾಡಲಾಗಿದೆ. ಈ ಚಲನಚಿತ್ರ ಮತ್ತು ಸಂಗೀತ ವೀಡಿಯೊಗಳಲ್ಲಿನ ಆಕ್ಷೇಪಾರ್ಹ ಅಂಶಗಳ ಮೇಲೆ ನಿಗಾ ಇರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ಸಾರ್ವಜನಿಕ ನೈತಿಕತೆಗೆ ಧಕ್ಕೆ ತರುವಂತಹ ದೃಶ್ಯಗಳನ್ನು ತಡೆಯಲು, ಅಗತ್ಯಬಿದ್ದರೆ ಚಲನಚಿತ್ರ ಪ್ರಮಾಣೀಕರಣದ ನಿಯಮಗಳನ್ನೇ ಬದಲಾಯಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ನಿರ್ದೇಶಕ ಪ್ರೇಮ್ಗೆ ಸಂಕಷ್ಟ?
ಈಗಾಗಲೇ ಈ ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್ನಿಂದ ತೆಗೆದುಹಾಕಲಾಗಿದ್ದು, ಈಗ ಸರ್ಕಾರದ ಕಠಿಣ ನಿಲುವಿನಿಂದಾಗಿ ಇಡೀ ಚಿತ್ರತಂಡ ಆತಂಕಕ್ಕೆ ಒಳಗಾಗಿದೆ. ಕೇಂದ್ರ ಸರ್ಕಾರದ ನಿರ್ಧಾರವು ಈ ವಿವಾದಕ್ಕೆ ಹೊಸ ತಿರುವು ನೀಡಿದೆ. ಕೇವಲ ಪ್ರಚಾರಕ್ಕಾಗಿ ಅಶ್ಲೀಲತೆಯನ್ನು ಬಳಸುವ ಸಿನೆಮಾಗಳಿಗೆ ಮತ್ತು ಹಾಡುಗಳಿಗೆ ಇನ್ಮುಂದೆ ಸೆನ್ಸಾರ್ ಮಂಡಳಿಯ ಕತ್ತರಿ ಬೀಳುವುದು ಗ್ಯಾರಂಟಿ ಎನ್ನಲಾಗುತ್ತಿದೆ. ಸಮಾಜದ ಮೇಲೆ ಕೆಟ್ಟ ಪ್ರಭಾವ ಬೀರುವ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕುವ ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಬೆಂಬಲವೂ ವ್ಯಕ್ತವಾಗುತ್ತಿದೆ.
ಹಾಡು ನಾನು ಬರೆದಿಲ್ಲ, ಅನುವಾದ ಮಾಡಿದ್ದಷ್ಟೇ
'ಸರ್ಸೀ ಸರ್ಸೀ' ಹಾಡಿನ ಹಿಂದಿ ಆವೃತ್ತಿಗೆ ಸಾಹಿತ್ಯ ಬರೆದಿದ್ದಾರೆನ್ನಲಾದ ರಕೀಬ್ ಆಲಂ, ಈಗ ಅಚ್ಚರಿಯ ಹೇಳಿಕೆ ನೀಡುವ ಮೂಲಕ ವಿವಾದದಿಂದ ದೂರ ಸರಿದಿದ್ದಾರೆ. "ಈ ಹಾಡಿನ ಸಾಹಿತ್ಯವನ್ನು ನಾನು ಬರೆದಿಲ್ಲ. ಚಿತ್ರದ ನಿರ್ದೇಶಕ ಪ್ರೇಮ್ ಅವರು ಕನ್ನಡದಲ್ಲಿ ಬರೆದ ಸಾಹಿತ್ಯವನ್ನೇ ನಾನು ಕೇವಲ ಹಿಂದಿಗೆ ಅನುವಾದ ಮಾಡಿದ್ದೇನೆ. ಅವರು ಹೇಳಿದ ಪದಗಳನ್ನೇ ಬಳಸಲು ನನಗೆ ಸೂಚಿಸಲಾಗಿತ್ತು" ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇಂತಹ ಡಬಲ್ ಮೀನಿಂಗ್ ಸಾಹಿತ್ಯ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತದೆ ಮತ್ತು ಸೆನ್ಸಾರ್ ಮಂಡಳಿಯಿಂದ ತೊಂದರೆಯಾಗುತ್ತದೆ ಎಂದು ನಾನು ಚಿತ್ರತಂಡಕ್ಕೆ ಮೊದಲೇ ಎಚ್ಚರಿಕೆ ನೀಡಿದ್ದೆ. ಇಂತಹ ಸಾಹಿತ್ಯ ಬರೆಯಲು ನಾನು ನಿರಾಕರಿಸಿದ್ದೆ ಎಂದೂ ಅವರು ಹೇಳಿದ್ದಾರೆ. 'ಪುಷ್ಪ' ಮತ್ತು ರಾಮ್ ಚರಣ್ ಅವರ 'ಪೆದ್ದಿ' ಅಂತಹ ದೊಡ್ಡ ಸಿನಿಮಾಗಳಿಗೆ ಸಾಹಿತ್ಯ ಬರೆದಿರುವ ನನಗೆ, ಈ ಹಾಡಿನಿಂದಾಗಿ ಅವಮಾನವಾಗಿದೆ. ಒಳ್ಳೆಯ ಹಾಡುಗಳನ್ನು ಬರೆದಾಗ ಗುರುತಿಸದ ಜನರು, ಈಗ ಇಂತಹ ವಿವಾದಗಳಿಂದ ನನ್ನನ್ನು ಗುರಿಯಾಗಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ













Click it and Unblock the Notifications