Sudeep: ಸುದೀಪ್ ಸುದ್ದಿಗೋಷ್ಠಿ; ಬಿಗ್ಬಾಸ್, ದರ್ಶನ್ ಬಗ್ಗೆ ಹೇಳಿದ್ದೇನು?
ನಟ ಕಿಚ್ಚ ಸುದೀಪ್ ಇಂದು ತುರ್ತಾಗಿ ಸುದ್ದಿಗೋಷ್ಠಿ ಕರೆದಿದ್ದರು. ಬಿಗ್ ಬಾಸ್ ಶೋ ನಿರೂಪಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ನಟ ದರ್ಶನ್, ಅಭಿಮಾನಿಗಳು, ಹುಟ್ಟುಹಬ್ಬ ಆಚರಣೆ ಬಗ್ಗೆ ಕೂಡ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದು, ಈ ಬಾರಿ ಕೂಡ ಹುಟ್ಟುಹಬ್ಬ ಆಚರಣೆ ಮಾಡಲು ಅಭಿಮಾನಿಗಳು ಮನೆ ಬಳಿ ಬರದಂತೆ ಮನವಿ ಮಾಡಿಕೊಂಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಭಿಮಾನಿಗಳು ಅವರ ಅವರ ನಡುವೆಯೇ ಸ್ಪರ್ಧೆಯಿಂದ ಹೂವು, ಕೇಕ್ ತಂದು ಹಣವನ್ನು ಹಾಳು ಮಾಡುತ್ತಿದ್ದಾರೆ. ಆದ್ದರಿಂದಲೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದನ್ನು ನಿಲ್ಲಿಸಿದ್ದೇನೆ. ನನ್ನ ಅಭಿಮಾನಿಗಳ ನಡುವೆಯೇ ಸ್ಪರ್ಧೆ ನಡೆಯುತ್ತದೆ, ಅದನ್ನು ಸಂಭಾಳಿಸುವುದು ಕಷ್ಟ ಅದಕ್ಕಾಗಿ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದನ್ನು ನಿಲ್ಲಿಸಿದ್ದೇನೆ ಎಂದರು.

ತಮಗೆ ಬಂದ ಡಾಕ್ಟರೇಟ್ ನಿರಾಕರಿಸಿದ ಬಗ್ಗೆ ಮಾತನಾಡಿದ ಅವರು, ನಾನು ಇನ್ನೂ ಏನೂ ಸಾಧನೆ ಮಾಡಿಲ್ಲ. ಕೆಲವು ಸಿನಿಮಾಗಳನ್ನು ಮಾಡಿದ್ದೇನೆ. ಅದು ಕೂಡ ಸಮಾಜಕ್ಕಾಗಿಯೇ ಏನು ಮಾಡಿದ್ದಲ್ಲ, ನಾನೇನಾದರೂ ಸಾಧನೆ ಮಾಡಿದ್ದೇನೆ ಎನಿಸಿದರೆ ನಾನೇ ಕೇಳಿ ಪ್ರಶಸ್ತಿ ಕೇಳಿ ಪಡೆಯುತ್ತೇನೆ ಎಂದರು.
ದರ್ಶನ್ ಬಗ್ಗೆ ಹೇಳಿದ್ದೇನು?
ಇನ್ನು ದರ್ಶನ್ ಬಗ್ಗೆ ಕೂಡ ಪ್ರಶ್ನೆಗಳು ಬಂದಾಗ, ನಾನು ಒಳಗೆ ಹೋಗಿ ಅವರನ್ನು ಹೊರಗೆ ಕಳಿಸಲಾ ಎಂದು ಪ್ರಶ್ನೆ ಮಾಡಿದ್ದಾರೆ. ಅವರಿಗೆ ಕುಟುಂಬ ಇದೆ, ಅಭಿಮಾನಿಗಳು ಇದ್ದಾರೆ. ನಾನು ಮಾತನಾಡಿ ಅವರಿಗೆ ಬೇಜಾರು ಮಾಡಲು ಇಷ್ಟಪಡಲ್ಲ. ಕಾನೂನು ಇದೆ, ಮಾಧ್ಯಮದಲ್ಲಿ ಬರುವುದನ್ನು ನೋಡಿಯೇ ನಾನು ವಿಚಾರ ತಿಳಿದುಕೊಳ್ಳುತ್ತೇನೆ. ತಪ್ಪು, ಸರಿ ಎಂದು ನಾವು ಹೇಳಲು ಆಗಲ್ಲ, ಕಾನೂನು ಇದೆ, ಕಾನೂನನ್ನು ನಂಬಬೇಕು ಅದನ್ನು ಮೀರಿ ನಾನು ಏನೂ ಹೇಳಲ್ಲ, ನಾನು ಏನೋ ಹೇಳಿದರೆ ಅದು ಇನ್ನೊಂದಾಗುತ್ತದೆ ಎಂದು ಹೇಳಿದರು.
ಬಿಗ್ಬಾಸ್ ನಿರೂಪಣೆ ಮಾಡ್ತೀರಾ?
ಬಿಗ್ ಬಾಸ್ ಕಾರ್ಯಕ್ರಮದ 10 ಸೀಸನ್ಗಳನ್ನು ನಿರೂಪಣೆ ಮಾಡಿ ಯಶಸ್ವಿಯಾಗಿರುವ ಸುದೀಪ್, 11ನೇ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲ್ಲ ಎನ್ನುವ ಮಾತುಗಳು ಕೇಳಿ ಬಂದಿದೆ. ಇಷ್ಟು ದಿನ ನಾನು ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದೇನೆ, ಹೊಸ ನಿರೂಪಕರು ಬರಲಿ ಎಂದು ನಾನು ಕೂಡ ಕಾಯುತ್ತಿದ್ದೇನೆ. ನಾನು ಇರುವವರೆಗೂ ಶ್ರದ್ಧೆಯಿಂದ ನಡೆಸಿಕೊಟ್ಟಿದ್ದೇನೆ. ತುಂಬಾ ಕಷ್ಟಪಟ್ಟು ಬಿಗ್ ಬಾಸ್ ನಡೆಸಿಕೊಟ್ಟಿದ್ದೇನೆ. ಸಿನಿಮಾ ಶೂಟಿಂಗ್ ಮುಗಿಸಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಬರುತ್ತಿದ್ದೆ, ಅಲ್ಲಿ ಇಲ್ಲಿ ಓಡಾಡಿಕೊಂಡು ನಿದ್ದೆಯಿಲ್ಲದೆ ಕೆಲಸ ಮಾಡುತ್ತಿದ್ದೆ, ಈಗ ಸಿನಿಮಾಗೆ ನ್ಯಾಯ ಕೊಡಬೇಕಾ? ಬಿಗ್ ಬಾಸ್ ಕಾರ್ಯಕ್ರಮಕ್ಕೆ ನ್ಯಾಯ ಕೊಡಬೇಕಾ ಎಂದು ಪ್ರಶ್ನೆ ಮಾಡಿದರು.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications